ಲೋಕಸಭೆ ಚುನಾವಣೆ ನಿತೀಶ್ ಕುಮಾರ್ ಎಲ್ಲಿ ಸ್ಪರ್ಧಿಸಿದರೂ ಸೋಲುತ್ತಾರೆ: ಬಿಹಾರ ಬಿಜೆಪಿ
ಪಾಟ್ನಾ, ಆಗಸ್ಟ್. 03: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಸಿಎಮ ವಿರುದ್ಧ ಕಿಡಿಕಾರಿದ್ದು, ಅವರು ಲೋಕಸಭೆ ಚುನಾವಣೆಯಲ್ಲಿ ಎಲ್ಲಿ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಗುರುವಾರ ಭವಿಷ್ಯ ನುಡಿದಿದ್ದಾರೆ.
ಬಿಹಾರದ ಯಾವುದೇ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿತೀಶ್ ಕುಮಾರ್ ಅವರಿಗೆ ಧೈರ್ಯವಿಲ್ಲ ಎಂದು ಹೇಳಿರುವ ವಿಜಯ್ ಕುಮಾರ್ ಸಿನ್ಹಾ, ಸಿಎಂಗೆ ತಮ್ಮ ತವರು ಕ್ಷೇತ್ರ ನಳಂದಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸವಾಲು ಹಾಕಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಹೀನಾಯವಾಗಿ ಸೋಲುವುದು ನಿಶ್ಚಿತ ಎಂದು ವ್ಯಂಗ್ಯವಾಡಿದ್ದಾರೆ.

"ಬಿಹಾರ ಬಿಜೆಪಿ ಕಾರ್ಯಕರ್ತರು ಮಹಾಮೈತ್ರಿ ಸರ್ಕಾರದ ಬಂಡವಾಳವನ್ನು ಜನರ ಮುಂದೆ ಬಹಿರಂಗಪಡಿಸಲಿದ್ದಾರೆ. ತತ್ವ ಸಿದ್ಧಾಂತಗಳಿಲ್ಲದ ಜನರು ಬಿಹಾರದಲ್ಲಿ ಜಂಗಲ್ ರಾಜ್ ಅನ್ನು ಮರಳಿ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಆರೋಪಿಸಿದ್ದಾರೆ.
ನಿತೀಶ್ ಕುಮಾರ್ ಉತ್ತರ ಪ್ರದೇಶದಿಂದ, ಪಾಟ್ನಾ ಸಾಹಿಬ್ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವದಂತಿಗಳಿವೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ನಾಯಕ ಅವರು ಪಾಟ್ನಾ ಸಾಹಿಬ್ನಿಂದ ಸ್ಪರ್ಧಿಸುವ ಧೈರ್ಯ ಮಾಡಲಿ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಅವರು ಇಲ್ಲಿಂದ ಚುನಾವಣೆಯಲ್ಲಿ ನಿಂತರೇ, ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲುತ್ತಾರೆ ಎಂದು ಹೇಳಿದ್ದಾರೆ. ಜೊತೆಗೆ ಸಿಎಂ ನಿತೀಶ್ ಕುಮಾರ್ ಬಿಹಾರದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಘೋಷಿಸಿದ್ದಾರೆ.
ಇದಲ್ಲದೆ ಜೆಡಿ (ಯು) ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್( ಲಲನ್ ಸಿಂಗ್) ಅವರು ಮುಂಗೇರ್ನಿಂದ ಲೋಕಸಭಾ ಚುನಾವಣೆಯಲ್ಲಿ ನಿಂತರೇ ಸೋಲುತ್ತಾರೆ ಎಂದು ಹೇಳಿದ್ದಾರೆ. ಇತ್ತ, ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಉತ್ತರ ಪ್ರದೇಶ ಜೆಡಿಯು ಉಸ್ತುವಾರಿ ಶ್ರವಣ್ ಕುಮಾರ್ ಅವರು ನಿತೀಶ್ ಕುಮಾರ್ ಅವರು ಯುಪಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಪಕ್ಷದ ನಾಯಕರು ಮತ್ತು ಉತ್ತರ ಪ್ರದೇಶದ ಜನರು ಬಯಸಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಜನರು ತಮ್ಮ ಭಾವನೆಗಳನ್ನು ತಿಳಿಸಲು ಮತ್ತು ತಮ್ಮ ರಾಜ್ಯದಿಂದ ಚುನಾವಣೆಯಲ್ಲಿ ನಿಲ್ಲುವಂತೆ ಕೋರಲು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಲು ಬಯಸಿದ್ದಾರೆ ಎಂದು ಶ್ರವಣ್ ಕುಮಾರ್ ಹೇಳಿದ್ದಾರೆ. ಸಚಿವ ಶ್ರವಣ್ ಕುಮಾರ್ ಜುಲೈ 31 ಮತ್ತು ಆಗಸ್ಟ್ 1 ರಂದು ಉತ್ತರ ಪ್ರದೇಶಕ್ಕೆ ಎರಡು ದಿನಗಳ ಪ್ರವಾಹಕ್ಕೆ ತೆರಳಿದ್ದರು.
ಉತ್ತರಪ್ರದೇಶದಿಂದ ಮರಳಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಅವರು, ಉತ್ತರ ಪ್ರದೇಶದ ನಿಯೋಗವೊಂದು ಬಿಹಾರ ಸಿಎಂ ಅವರನ್ನು ಭೇಟಿ ಮಾಡಿ ಈ ವಿಚಾರದ ಬಗ್ಗೆ ಅವರ ಅಭಿಪ್ರಾಯವನ್ನು ತಿಳಿಯಲಿದೆ ಎಂದು ತಿಳಿಸಿದರು. ಯುಪಿ ಜೆಡಿಯು (ಯು) ಉಸ್ತುವಾರಿ ವಹಿಸಿಕೊಂಡಿರುವ ಅವರು ಯುಪಿ ಪ್ರವಾಸದಲ್ಲಿದ್ದಾಗ ಜನರು ನಿತೀಶ್ ಕುಮಾರ್ ಅವರನ್ನು ಫುಲ್ಪುರ, ಪ್ರತಾಪುರ್, ಜಾನ್ಪುರ, ಅಂಬೇಡ್ಕರ್ ನಗರ ಅಥವಾ ಅವರ ಯಾವುದೇ ಕ್ಷೇತ್ರದಿಂದಲಾದರೂ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸಿದ್ದಾರೆ ಎಂದು ಜೆಡಿಯು (ಯು) ಹಿರಿಯ ಸಚಿವರು ಹೇಳಿದ್ದಾರೆ.
ಇನ್ನು, ಮುಂಬೈನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ನಾಯಕರ ಮೂರನೇ ಸುತ್ತಿನ ಸಭೆಗೆ ಮುನ್ನ ಜೆಡಿಯು ನಾಯಕರು ಮತ್ತು ಸಂಸದರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಬೇಡಿಕೆಯನ್ನು ಮತ್ತೊಮ್ಮೆ ವಿಪಕ್ಷಗಳ ಮುಂದಿಟ್ಟಿದೆ. ಹಲವಾರು ಜೆಡಿ (ಯು) ಮಾಜಿ ಸಂಸದರು ಮತ್ತು ಶಾಸಕರು ವಿರೋಧ ಪಕ್ಷದ ಮೈತ್ರಿ 'ಇಂಡಿಯಾ' (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ) ನಲ್ಲಿ ನಿತೀಶ್ಗಿಂತ ಉತ್ತಮ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ತಿಳಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications