'ನಿತೀಶ್ ರಾಮ, ಮೋದಿ ರಾವಣ': ಪಾಟ್ನಾ ಆರ್ಜೆಡಿ ಕಚೇರಿಯ ಹೊರಗೆ ಪೋಸ್ಟರ್ ವೈರಲ್
ಪಾಟ್ನಾ ಜನವರಿ 14: ಮುಂಬಾರುವ ಚುನಾವಣೆಗೆ ಬಿಹಾರದಲ್ಲಿ ಬಿಜೆಪಿ ಸೋಲನ್ನು ಅನುಭವಿಸಲಿದೆ ಎನ್ನುವ ವಿಶ್ವಾಸವನ್ನು ಮಹಾಮೈತ್ರಿಕೂಟ ಪೋಸ್ಟರ್ ಮೂಲಕ ವಿವರಿಸಿದೆ. ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿಜಯವನ್ನು ತೋರಿಸುವ ಪೋಸ್ಟರ್ಗಳು ಆರ್ಜೆಡಿ ನಾಯಕಿ ರಾಬ್ರಿ ದೇವಿ ಅವರ ನಿವಾಸ ಮತ್ತು ಪಾಟ್ನಾದ ರಾಜ್ಯ ಕಚೇರಿಯ ಹೊರಗೆ ಕಂಡುಬಂದಿವೆ.
ಆದರೆ 2024 ರ ಚುನಾವಣೆಯಲ್ಲಿ ಬಿಜೆಪಿಯ ಸೋಲು ಮತ್ತು ಮಹಾಮೈತ್ರಿಕೂಟದ ಗೆಲುವನ್ನು ವಿವರಿಸಲು ಎರಡು ಹಿಂದೂ ಪುರಾಣಗಳಾದ ರಾಮಾಯಣ ಮತ್ತು ಮಹಾಭಾರತಗಳನ್ನು ಹೇಗೆ ಆಹ್ವಾನಿಸಲಾಯಿತು ಎಂಬುದು ಎಲ್ಲರ ಗಮನವನ್ನು ಸೆಳೆಯಿತು. ನಿತೀಶ್ ಕುಮಾರ್ (ಮಹಾಘಟಬಂಧನ ನಾಯಕ) ಅವರನ್ನು ಭಗವಾನ್ ರಾಮ/ಕೃಷ್ಣ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ/ಕಂಸ ಎಂದು ಹೋಲಿಸಿ ಪೋಸ್ಟ ಅನ್ನು ಹಾಕಿರುವುದು ಕಂಡು ಬಂದಿದೆ.

ಪೋಸ್ಟರ್ನ ಮೊದಲ ಎರಡು ಭಾಗಗಳು ರಾಮಾಯಣದಲ್ಲಿ ರಾಮನು ರಾವಣನನ್ನು ಹೇಗೆ ಸೋಲಿಸಿದನು ಮತ್ತು ಮಹಾಭಾರತದಲ್ಲಿ ಕೃಷ್ಣನು ಕಂಸನನ್ನು ಹೇಗೆ ಸೋಲಿಸಿದನು ಎಂಬುದನ್ನು ವಿವರಿಸುತ್ತದೆ. ಪೋಸ್ಟರ್ನ ಕೊನೆಯ ಭಾಗವು ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟವು 2024 ರ ಲೋಕಸಭೆ ಚುನಾವಣೆಯಲ್ಲಿ ಪಿಎಂ ಮೋದಿಯನ್ನು ಸೋಲಿಸುವುದನ್ನು ತೋರಿಸುತ್ತದೆ. ಪೋಸ್ಟರ್ನಲ್ಲಿ ಛಾಪ್ರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಪೂನಂ ರೈ ಅವರ ಚಿತ್ರದೊಂದಿಗೆ ಮಹಾಘಟಬಂಧನ್ ಜಿಂದಾಬಾದ್ ಘೋಷಣೆಗಳನ್ನು ಬರೆಯಲಾಗಿದೆ.

"ಮಾಯಾವತಿ, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಮತ್ತು ನವೀನ್ ಪಟ್ನಾಯಕ್ ಎಲ್ಲ ವಿರೋಧ ಪಕ್ಷದ ನಾಯಕರಲ್ಲಿ ನಿತೀಶ್ ಕುಮಾರ್ ಹೊಸಬರು. ಪ್ರಧಾನಿ ನರೇಂದ್ರ ಮೋದಿ ಅವರು 2034 ರವರೆಗೆ ಅಧಿಕಾರದಲ್ಲಿ ಇರುತ್ತಾರೆ. ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ" ಎಂದು ಬಿಜೆಪಿ ವಕ್ತಾರ ನವಲ್ ಕಿಶೋರ್ ಯಾದವ್ ಸುದ್ದಿಗಾರರಿಗೆ ತಿಳಿಸಿದ್ದರು. ಆದರೆ ಸದ್ಯ ಬೆಳಕಿಗೆ ಬಂದ ಪೋಸ್ಟರ್ಗಳು ನೋಡುಗರ ಗಮನ ಸೆಳೆದಿದ್ದು ಮುಂಬರುವ ಚುನಾವಣೆಯ ಬಗ್ಗೆ ಭಾರೀ ಕುತೂಹಲವನ್ನು ಮೂಡಿಸಿದೆ.

"ಈ ಪೋಸ್ಟರ್ಗಳನ್ನು ಯಾರು ಹಾಕಿದ್ದಾರೆಂದು ನಮಗೆ ತಿಳಿದಿಲ್ಲ. ಇವುಗಳನ್ನು ನಮ್ಮ ಪಕ್ಷದ ಆರ್ಜೆಡಿ ಅಧಿಕೃತಗೊಳಿಸಿಲ್ಲ. ಇನ್ನೂ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತಯಾರಿ ಬಿಹಾರದಿಂದ ಪ್ರಾರಂಭವಾಗಿದೆ ಮತ್ತು ಎಲ್ಲಾ ವಿರೋಧ ಪಕ್ಷಗಳು ಇದರ ವಿರುದ್ಧ ಒಗ್ಗೂಡಿವೆ. ಬಿಜೆಪಿ, ಬಡವರು, ಯುವಕರು ಮತ್ತು ರೈತರ ವಿರುದ್ಧದ ಪಕ್ಷದ ವಿರುದ್ಧದ ಹೋರಾಟವಾಗಿದೆ. ಪ್ರತಿಯೊಬ್ಬ ಬಿಹಾರಿಯೂ ಇದನ್ನು ಬಯಸುತ್ತಾರೆ'' ಎಂದು ಆರ್ಜೆಡಿ ರಾಷ್ಟ್ರೀಯ ವಕ್ತಾರ ಮೃತುಂಜಯ್ ತಿವಾರಿ ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications