Jammu & Kashmir: ಕಣಿವೆ ರಾಜ್ಯದ ಹೊಸ ಮುಖ್ಯಮಂತ್ರಿ ಪದಗ್ರಹಣಕ್ಕೆ ಮಹೂರ್ತ ಫಿಕ್ಸ್
ನವದೆಹಲಿ, ಅಕ್ಟೋಬರ್ 14: ದಶಕದ ನಂತರ ಪ್ರಸಕ್ತ ಸಾಲಿನಲ್ಲಿ ಒಟ್ಟು ಮೂರು ಹಂತಗಳಲ್ಲಿ ನಡೆದ ವಿಧಾನಸಭಾ ಚುನಾವಣೆ 2024 ಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದು ಬೀಗಿದೆ. ಈ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರು ಕಣಿವೆ ರಾಜ್ಯದ ಮುಖ್ಯಮಂತ್ರಿ ಎಂದು ಈಗಾಗಲೇ ಘೋಷಣೆ ಆಗಿದೆ. ಇದೀಗ ಅವರು ಯಾವತ್ತು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಕುತೂಹಲ ಇತ್ತು, ಅದಕ್ಕೀಗ ತೆರೆ ಬಿದ್ದಿದೆ.
ಸೋಮವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕಳುಹಿಸಿರುವ ಪತ್ರವನ್ನು ಓಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣ (X) ದಲ್ಲಿ ಹಂಚಿಕೊಂಡು ಅಧಿಕೃತ ಮಾಹಿತಿ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆಹ್ವಾನ ಪತ್ರ ಸ್ವೀಕರಿಸಿರುವುದು ಸಂತಸ ಸಂಗತಿಯಾಗಿದೆ. ಎಲ್ಜಿ ಅವರು ತಮ್ಮ ಕಚೇರಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆಗೆ ನೀಡಿರುವ ಆಹ್ವಾನ ಪತ್ರ ನೀಡಿದ್ದಾರೆ ಎಂದು ಓಮರ್ ಅವರು ಮಾಹಿತಿ ನೀಡಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಅವರ ಪತ್ರದ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಓಮರ್ ಅಬ್ದುಲ್ಲಾ ಅವರು ಇದೇ ಅಕ್ಟೋಬರ್ 16ರಂದು ಜಮ್ಮು ಕಾಶ್ಮೀರದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಬಂಧಿಸಿದಂತೆ ಶಿಷ್ಟಾಚಾರದ ಪ್ರಕಾರ, ಲೆಪ್ಟಿನಂಟ್ ಗವರ್ನರ್ ಅವರಿಗೆ ಸರ್ಕಾರ ರಚನೆಯ ಆಹ್ವಾನ ಪತ್ರ ಹಸ್ತಾಂತರಿಸಿದ್ದಾರೆ.
ಇನ್ನೂ ಈ ಆಹ್ವಾನಕ್ಕೂ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂಡೆಯಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚೆಗೆ ಅಂತ್ಯಗೊಂಡಿದ್ದು, ಅದರಲ್ಲಿ ಜೆಕೆಎನ್ಕೆ ಪಕ್ಷ ಬಹುಮತ ಪಡೆದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.
ಹೊಸ ಸರ್ಕಾರ ರಚನೆ, ರಾಷ್ಟ್ರಪತಿ ಆಳ್ವಿಕೆ ಅಂತ್ಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯ ಭಾನುವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಜಮ್ಮು ಮತ್ತು ಕಾಶ್ಮೀರ ಫಲಿತಾಂಶ
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳ ಚುನಾವಣೆ ನಡೆದಿದ್ದು, ಇದೇ ಅಕ್ಟೋಬರ್ 8ರಂದು ಫಲಿತಾಂಶ ಹೊರ ಬಿದ್ದಿದೆ. ಈ ಚುನಾವಣೆಯಲ್ಲಿ 90 ಸೀಟುಗಳಲ್ಲಿ ಜಮ್ಮುವಿನ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಒಟ್ಟು 42 ಸೀಟುಗಳನ್ನು ಗೆದ್ದುಕೊಂಡಿತು. ಬಿಜೆಪಿ 29 ಸೀಟು ಪಡೆಯುವ ಮೂಲಕ ಪ್ರಬಲ ಪ್ರತಿಪಕ್ಷವಾಗಿ ಹೊರ ಹೊಮ್ಮಿದೆ. ಇನ್ನು ಕಾಂಗ್ರೆಸ್ 06 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಜೆಕೆಡಿಪಿ ಪಕ್ಷ 4, ಜೆಪಿಸಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications