ನ್ಯಾ. ಕರ್ಣನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ, ಜೂನ್ 21: ನ್ಯಾಯಮೂರ್ತಿ ಸಿಎಸ್ ಕರ್ಣನ್ ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇದರ ಜತೆಗೆ ಕರ್ಣನ್ ಗೆ ವಿಧಿಸಲಾಗಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ರದ್ದು ಪಡಿಸಲೂ ಸುಪ್ರೀಂ ಕೋರ್ಟ್ ಸಾಧ್ಯವಿಲ್ಲ ಎಂದು ಹೇಳಿದೆ.

ಕೊಲ್ಕತ್ತಾ ಹೈಕೋರ್ಟಿನ ಮಾಜಿ ನ್ಯಾಯಮೂರ್ತಿ ಸಿಎಸ್ ಕರ್ಣನ್ ರನ್ನು ಮಂಗಳವಾರ ಬಂಧಿಸಲಾಗಿತ್ತು.
ಈ ಹಿಂದೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್ ಗೆ ಸುಪ್ರೀಂ ಕೋರ್ಟ್ ಆರು ತಿಂಗಳ ಶಿಕ್ಷೆ ನೀಡಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಇಂದು ಸುಪ್ರೀಂ ಕೋರ್ಟಿಗೆ ಕರ್ಣನ್ ಅರ್ಜಿ ಸಲ್ಲಿಸಿದ್ದರು.
ಆದರೆ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, 'ತಾನು ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಅವರು ಜೈಲು ಶಿಕ್ಷೆಗೆ ಗುರಿಯಾಗಲೇಬೇಕು,' ಎಂದು ಹೇಳಿದೆ.

ಇನ್ನು ಚೆನ್ನೈನಿಂದ ಪಶ್ಚಿಮ ಬಂಗಾಳ ಪೊಲೀಸರು ಕರ್ಣನ್ ರನ್ನು ಕೊಲ್ಕೊತ್ತಾಗೆ ಕರೆದೊಯ್ದಿದ್ದಾರೆ.












Click it and Unblock the Notifications