ಪದ್ಮಾವತ್ ಬಿಡುಗಡೆಗೆ ಸುಪ್ರೀಂಕೋರ್ಟಿನಿಂದ ಹಸಿರು ನಿಶಾನೆ
ನವದೆಹಲಿ, ಜನವರಿ 23: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ, ವಿವಾದಿತ ಚಿತ್ರ ಪದ್ಮಾವತ್ ಬಿಡುಗಡೆಗೆ ಇದ್ದ ಆತಂಕ ದೂರಾಗಿದೆ. ಜನವರಿ 25ರಂದು ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು(ಜನವರಿ 23) ತಿರಸ್ಕರಿಸಿದೆ.
ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಪದ್ಮಾವತ್ ಬಿಡುಗಡೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ವಜಾ ಮಾಡಿದೆ. ದೇಶದಾದ್ಯಂತ ಪದ್ಮಾವತ್ ಬಿಡುಗಡೆಗೆ ಸುಪ್ರೀ ಆದೇಶ ನೀಡಿದೆ.

ಪದ್ಮಾವತ್ ಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯ ಸರ್ಕಾರಗಳ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ತಿರಸ್ಕರಿಸಿದೆ.
ನಿಮಗೆ ಸಿನಿಮಾ ನೋಡಲು ಕಷ್ಟವಾದರೆ, ಚಿತ್ರಮಂದಿರಕ್ಕೆ ಹೋಗಬೇಡಿ, ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವುದು ಆಯಾ ರಾಜ್ಯದ ಜವಾಬ್ದಾರಿ' ಎಂದು ಹೇಳಿದ್ದಾರೆ. ಸೆನ್ಸಾರ್ ಬೋರ್ಡ್ ಅನುಮತಿ ನೀಡಿದ ನಂತರ ಜನವರಿ 25ರಂದು ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಚಿತ್ರ ಬಿಡುಗಡೆ ದಿನಾಂಕ ನಿಗದಿಯಾದರೂ ಆತಂಕ ದೂರಾಗಿಲ್ಲ. ಪದ್ಮಾವತಿ ಚಿತ್ರ ಬಿಡುಗಡೆ ದಿನ (ಜನವರಿ 25) ಭಾರತ್ ಬಂದ್ ಆಚರಣೆಗೆ ಶ್ರೀಕಾರ್ಣಿಸೇನಾ ಕರೆ ನೀಡಿದೆ. ಈ ನಡುವೆ ರಾಜಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಚಿತ್ರವನ್ನು ನಿಷೇಧಿಸಲಾಗಿತ್ತು.
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ನಟಿ, ರಾಣಿ ಪದ್ಮಾವತಿ ಪಾತ್ರಧಾರಿ ದೀಪಿಕಾ ಪಡುಕೋಣೆ ಅವರಿಗೆ ಈಗಾಗಲೇ ಸೇನಾದಿಂದ ಜೀವ ಬೆದರಿಕೆಯಿದೆ. ಅಂಬಾಲಾದಲ್ಲಿ ಕಾರ್ಣಿಸೇನಾ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಗುಜರಾತಿನಲ್ಲಿ ಚಿತ್ರ ಪ್ರದರ್ಶನ ಮಾಡದಿರಲು ಅಲ್ಲಿನ ಪ್ರದರ್ಶಕರ ಸಂಘ ನಿರ್ಧರಿಸಿದೆ.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications