ವಾಟ್ಸಪ್ ಬ್ಯಾನ್ ಆಗ್ಬೇಕೆ? ಸರ್ಕಾರವನ್ನು ಕೇಳಿ ಎಂದ ಸುಪ್ರೀಂ
ನವದೆಹಲಿ, ಜೂನ್ 29: ದೇಶದ ಭದ್ರತೆಗೆ ಕಂಟಕವಾಗಿರುವ ಸಾಮಾಜಿಕ ಜಾಲತಾಣಗಳು, ಅಪ್ಲಿಕೇಷನ್ ಗಳನ್ನು ನಿಷೇಧಿಸಬೇಕು, ಮುಖ್ಯವಾಗಿ ವಾಟ್ಸಪ್ ಬ್ಯಾನ್ ಆಗ್ಬೇಕು ಎಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಟ್ಸಪ್ ನಿಷೇಧ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಬುಧವಾರದಂದು ಕೋರ್ಟ್ ತಿರಸ್ಕರಿಸಿದೆ.
ಹರ್ಯಾಣ ಮೂಲದ ಆರ್ಟಿಐ ಕಾರ್ಯಕರ್ತ ಸುಧೀರ್ ಯಾದವ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಅವರು ಅರ್ಜಿಯನ್ನು ತಿರಸ್ಕರಿಸಿ, ನಿಷೇಧ ಹೇರಿಕೆ ಕೋರ್ಟಿನಿಂದ ಸಾಧ್ಯವಿಲ್ಲ, ಈ ಬಗ್ಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ಸೂಚಿಸಲಾಗಿದೆ.[ವಾಟ್ಸಪ್ ಮೆಸೇಜ್ ಹ್ಯಾಕ್ ಹೇಗೆ? ಸೇಫ್ ಮಾಡೋದು ಹೇಗೆ?]

ಕ್ಷಣಾರ್ಧದಲ್ಲಿ ಸಂದೇಶ ರವಾನೆ ಮಾಡಿಕೊಳ್ಳುವ, ಮಾಹಿತಿ ವಿನಿಮಯ ಮಾಡಿಕೊಳ್ಳಲು ಅನುಕೂಲಕರವಾದ ವಾಟ್ಸಪ್ ನಂಥ ಅಪ್ಲಿಕೇಷನ್ಗಳಿಂದ ಭಯೋತ್ಪಾದನಾ ಚಟುವಟಿಕೆ, ಅನೈತಿಕ, ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಹೀಗಾಗಿ ಕೂಡಲೇ ಇಂಥ ಅಪ್ಲಿಕೇಷನ್ ಗಳನ್ನು ನಿಷೇಧಿಸಬೇಕು ಎಂದು ಸುಧೀರ್ ಯಾದವ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.[ವಾಟ್ಸಪ್ ರಿಪ್ಲೈ, ಉಲ್ಲೇಖ ಸಂದೇಶ ಸೌಲಭ್ಯ ಬಳಕೆ ಹೇಗೆ?]
ಇಬ್ಬರು ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆ ಅಥವಾ ಇನ್ನಾವುದೇ ಸಂದೇಶಗಳನ್ನು ಸರ್ಕಾರ ಬಯಸಿದಾಗ ನೀಡುವಂತೆ ಇರಬೇಕು. ಆದರೆ, ಈಗ ವಾಟ್ಸಪ್ ನಲ್ಲಿ ಇನ್ ಕ್ರಿಪ್ಶನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದರಿಂದ ಸಂದೇಶಗಳ ಮೇಲಿನ ನಿಯಂತ್ರಣ ಸಾಧ್ಯವಾಗುವುದಿಲ್ಲ.[ಯುವ ಪೀಳಿಗೆಯ ಆಯ್ಕೆ: ಫೇಸ್ಬುಕ್? ವಾಟ್ಸಪ್?]
ಒಂದು 256 ಬಿಟ್ encryted ಸಂದೇಶವನ್ನು ಡಿಕೋಡ್ ಮಾಡಲು ಸಾಧ್ಯವೆ ಇಲ್ಲ. ಹೀಗಾಗಿ ಭಯೋತ್ಪಾದಕರಿಗೆ ಸಂದೇಶ ರವಾನೆ ರಹದಾರಿ ಸಿಕ್ಕಿದ್ದಂತೆ ಆಗುತ್ತದೆ. ಹೀಗಾಗಿ ನಿಷೇಧ ಹೇರಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ,
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications