ಪೆಟ್ರೋಲ್ ಬಂಕ್ ಗಳ ಮೇಲೆ ಕಾರ್ಡು ಶುಲ್ಕವಿಲ್ಲ: ಕೇಂದ್ರದ ಸ್ಪಷ್ಟನೆ
ನವದೆಹಲಿ, ಜ. 9: ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬಳಕೆಯ ಮೇಲೆ ವಿಧಿಸಲಾಗುತ್ತಿರುವ ಶೇ. 1ರಷ್ಟು ಶುಲ್ಕವನ್ನು ಬಂಕ್ ಮಾಲೀಕರು ಅಥವಾ ಗ್ರಾಹಕರು ನೀಡಬೇಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಶೇ. 1ರಷ್ಟು ಶುಲ್ಕದ ಪಾವತಿ ಇನ್ನು ಮುಂದೆ ತೈಲ ಕಂಪನಿಗಳು ಅಥವಾ ಬ್ಯಾಂಕ್ ಗಳ ಜವಾಬ್ದಾರಿಯಾಗಲಿದೆ. ಈ ನಿಟ್ಟಿನಲ್ಲಿ ಆ ಎರಡೂ ವಲಯದ ಪ್ರತಿನಿಧಿಗಳ ನಡುವೆ ಮಾತುಕತೆ ನಡೆಯುತ್ತಿದೆ. ಮಾತುಕತೆಯು ಫಲಪ್ರದವಾಗಿ ಇಬ್ಬರಲ್ಲೊಬ್ಬರು ಈ ಶುಲ್ಕದ ಜವಾಬ್ದಾರಿ ಹೊರಲಿದ್ದಾರೆಂದು ಅವರು ತಿಳಿಸಿದ್ದಾರೆ.

ಇದೇ ತಿಂಗಳ 13ರ ಮಧ್ಯರಾತ್ರಿಯಿಂದ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆ ನಿಲ್ಲಿಸಲು ಪೆಟ್ರೋಲ್ ಬಂಕ್ ಗಳ ಮಾಲೀಕರ ಸಂಘ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಪರಿಹರಿಸಲು ಬ್ಯಾಂಕಿಂಗ್ ವಲಯದ ಉನ್ನತ ಅಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪದಾಧಿಕಾರಿಗಳ ನಡುವೆ ಮಾತುಕತೆ ಸಾಗಿದೆ.
ಸಚಿವರ ಈ ಭರವಸೆಯ ಹಿನ್ನೆಲೆಯಲ್ಲಿ ಜ. 13ರಂದು ನಡೆಯಲಿರುವ ಪೆಟ್ರೋಲ್ ಬಂಕ್ ಮಾಲೀಕರ ಸಭೆ ರದ್ದಾಗುವ ಸಾಧ್ಯತೆಗಳಿವೆ. ಕಾರ್ಡು ಶುಲ್ಕದ ಹೊರೆಯಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಪೆಟ್ರೋಲ್ ಬಂಕ್ ಗಳ ಮಾಲೀಕರು ಅಂದು ಸಭೆ ನಡೆಸಿದ ಬಂಕ್ ಗಳಲ್ಲಿ ಕಾರ್ಡ್ ನಿಷೇಧದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿತ್ತು.
ಏತನ್ಮಧ್ಯೆ, ಬ್ಯಾಂಕುಗಳು, ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡುಗಳ ಬಳಕೆ ಮೇಲಿನ ಶೇ. 1ರಷ್ಟು ಶುಲ್ಕ ವಿಧಿಸುವ ನಿಯಮದಲ್ಲಿ ಯಾವುದೇ ಬದಲಾವಣೆ ಮಾಡಲು ಸಿದ್ಧವಿಲ್ಲ ಎಂದು ಹೇಳಿರುವುದರಿಂದ ಸಮಸ್ಯೆ ಕಗ್ಗಂಟಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications