ಅಂತರ್ಜಾಲ ಕಡಿತ, ಧಾರ್ಮಿಕ ದಾಳಿಗಳ ಮಾಹಿತಿ ಇಲ್ಲ: ಸಂಸತ್ನಲ್ಲಿ ಕೇಂದ್ರದ ಹೇಳಿಕೆ
ನವದೆಹಲಿ, ಮಾರ್ಚ್ 11: ದೇಶದಲ್ಲಿನ ಅಂತರ್ಜಾಲ ಸ್ಥಗಿತದ ಕುರಿತು ಕೇಂದ್ರೀಕೃತ ದಾಖಲೆಗಳಿಲ್ಲ ಮತ್ತು ಧಾರ್ಮಿಕ ಸಂಸ್ಥೆಗಳ ಮೇಲೆ ನಡೆದ ದಾಳಿಗಳ ಕುರಿತು ಸರ್ಕಾರ ರಾಷ್ಟ್ರೀಯ ದತ್ತಾಂಶ ನಿರ್ವಹಣೆ ಮಾಡಿಲ್ಲ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಯಲ್ಲಿ ತಿಳಿಸಿದೆ.
ದೇಶದಲ್ಲಿ ಉದ್ವಿಗ್ನ ಸ್ಥಿತಿ ಮತ್ತು ಗಲಭೆಗಳ ಸಂದರ್ಭದಲ್ಲಿ ಸುಳ್ಳು ಸುದ್ದಿ ಹಾಗೂ ತಪ್ಪು ಮಾಹಿತಿಗಳನ್ನು ನಿಯಂತ್ರಿಸಲು ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ವಿವರಿಸಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ಅಂತರ್ಜಾಲ ನಿಷೇಧವು ವದಂತಿಗಳನ್ನು ತಡೆಯಲು ಮುಖ್ಯವಾಗಿ ನೆರವಾಗುತ್ತದೆ ಎಂದು ಹೇಳಿದ್ದಾರೆ.
'ಸೈಬರ್ ಕ್ಷೇತ್ರದಲ್ಲಿ ಮಾಹಿತಿಯ ಹರಿವು ಬಹಳ ವೇಗ. ಹಾಗೆಯೇ ಇದರ ದುರ್ಬಳಕೆಯ ಅವಕಾಶವೂ ಹೆಚ್ಚು. ಉದ್ವಿಗ್ನತೆ ಮತ್ತು ಗಲಭೆಗಳ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆ ಹಾಗೂ ಸಾರ್ವಜನಿಕ ತುರ್ತನ್ನು ನಿರ್ವಹಿಸಲು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಬಂಧಿತ ಅಧಿಕಾರಿಗಳು ದೂರಸಂಪರ್ಕ ಸೇವೆ ಅಥವಾ ಅಂತರ್ಜಾಲ ಸಂಪರ್ಕಗಳನ್ನು ಸ್ಥಗಿತಗೊಳಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ' ಎಂದು ಅವರು ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಕ್ರೈಸ್ತರ ಮೇಲಾದ ದಾಳಿಗಳ ಕುರಿತು ವಿವರ ನೀಡುವಂತೆ ಕೇಳಲಾಗಿದ್ದ ಪ್ರಶ್ನೆಗೆ, ನಿರ್ದಿಷ್ಟ ಸಮುದಾಯಗಳು ಅಥವಾ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಕೇಂದ್ರದಲ್ಲಿ ದಾಖಲೆಗಳನ್ನು ನಿರ್ವಹಣೆ ಮಾಡಿಲ್ಲ ಎಂದು ರಾಜ್ಯಸಭೆಯಲ್ಲಿ ಉತ್ತರಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications