ಅಂತರ್ಜಾಲ ಕಡಿತ, ಧಾರ್ಮಿಕ ದಾಳಿಗಳ ಮಾಹಿತಿ ಇಲ್ಲ: ಸಂಸತ್ನಲ್ಲಿ ಕೇಂದ್ರದ ಹೇಳಿಕೆ
ನವದೆಹಲಿ, ಮಾರ್ಚ್ 11: ದೇಶದಲ್ಲಿನ ಅಂತರ್ಜಾಲ ಸ್ಥಗಿತದ ಕುರಿತು ಕೇಂದ್ರೀಕೃತ ದಾಖಲೆಗಳಿಲ್ಲ ಮತ್ತು ಧಾರ್ಮಿಕ ಸಂಸ್ಥೆಗಳ ಮೇಲೆ ನಡೆದ ದಾಳಿಗಳ ಕುರಿತು ಸರ್ಕಾರ ರಾಷ್ಟ್ರೀಯ ದತ್ತಾಂಶ ನಿರ್ವಹಣೆ ಮಾಡಿಲ್ಲ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಯಲ್ಲಿ ತಿಳಿಸಿದೆ.
ದೇಶದಲ್ಲಿ ಉದ್ವಿಗ್ನ ಸ್ಥಿತಿ ಮತ್ತು ಗಲಭೆಗಳ ಸಂದರ್ಭದಲ್ಲಿ ಸುಳ್ಳು ಸುದ್ದಿ ಹಾಗೂ ತಪ್ಪು ಮಾಹಿತಿಗಳನ್ನು ನಿಯಂತ್ರಿಸಲು ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ವಿವರಿಸಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ಅಂತರ್ಜಾಲ ನಿಷೇಧವು ವದಂತಿಗಳನ್ನು ತಡೆಯಲು ಮುಖ್ಯವಾಗಿ ನೆರವಾಗುತ್ತದೆ ಎಂದು ಹೇಳಿದ್ದಾರೆ.
'ಸೈಬರ್ ಕ್ಷೇತ್ರದಲ್ಲಿ ಮಾಹಿತಿಯ ಹರಿವು ಬಹಳ ವೇಗ. ಹಾಗೆಯೇ ಇದರ ದುರ್ಬಳಕೆಯ ಅವಕಾಶವೂ ಹೆಚ್ಚು. ಉದ್ವಿಗ್ನತೆ ಮತ್ತು ಗಲಭೆಗಳ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆ ಹಾಗೂ ಸಾರ್ವಜನಿಕ ತುರ್ತನ್ನು ನಿರ್ವಹಿಸಲು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಬಂಧಿತ ಅಧಿಕಾರಿಗಳು ದೂರಸಂಪರ್ಕ ಸೇವೆ ಅಥವಾ ಅಂತರ್ಜಾಲ ಸಂಪರ್ಕಗಳನ್ನು ಸ್ಥಗಿತಗೊಳಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ' ಎಂದು ಅವರು ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಕ್ರೈಸ್ತರ ಮೇಲಾದ ದಾಳಿಗಳ ಕುರಿತು ವಿವರ ನೀಡುವಂತೆ ಕೇಳಲಾಗಿದ್ದ ಪ್ರಶ್ನೆಗೆ, ನಿರ್ದಿಷ್ಟ ಸಮುದಾಯಗಳು ಅಥವಾ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಕೇಂದ್ರದಲ್ಲಿ ದಾಖಲೆಗಳನ್ನು ನಿರ್ವಹಣೆ ಮಾಡಿಲ್ಲ ಎಂದು ರಾಜ್ಯಸಭೆಯಲ್ಲಿ ಉತ್ತರಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications