ದೂರು ನೀಡಲು ಹೋದರೆ ಪಾಠ ಹೇಳಿದ ಪೊಲೀಸರು!
ವಿಕೃತ ಕಾಮಿಯ ಕುರಿತು ದೂರು ನೀಡಲು ಹೋದ ಮಹಿಳೆಗೇ ಪೊಲೀಸರು ಬುದ್ಧಿವಾದ ಹೇಳಿದ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ.
ಉದಯಪುರ, ಏಪ್ರಿಲ್ 11: ಭಾರತದಲ್ಲಿ ಬೇಲಿಯೇ ಎದ್ದು ಹೊಲಮೇಯುವ ಸನ್ನಿವೇಶವೇ ಹೆಚ್ಚು. ರಕ್ಷಣೆಯ ನಿರೀಕ್ಷೆಯಿಟ್ಟುಕೊಂಡು ಪೊಲೀಸ್ ಠಾಣೆಯ ಮೆಟ್ಟಿಲೇರಿದರೆ, ರಕ್ಷಣೆಯ ಭರವಸೆಯ ಬದಲು ಒಂದಷ್ಟು ಪುಕ್ಕಟೆ ಪಾಠ ಕೇಳಬೇಕಾಗುತ್ತದೆ. ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ಇಂಥದೇ
ಘಟನೆ ನಡೆದಿದೆ.
ವಿಕೃತ ಕಾಮಿಯೊಬ್ಬನ ಕುರಿತು 17 ವರ್ಷದ ಯುವತಿ ಪೊಲೀಸರಿಗೆ ದೂರು ನೀಡುವುದಕ್ಕೆ ತೆರಳಿದಾಗ ಪೊಲೀಸರು ಆಕೆಗೆ ನೀಡಿದ ಪುಕ್ಕಟೆ ಸಲಹೆಗಳ ಕುರಿತು ಆಕೆಯ ಅಕ್ಕ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಸಹಾಯ ಮಾಡಬೇಕಾದ ಪೊಲೀಸರೇ, ಅಪರಾಧಿಗಳದ್ದೇನೂ ತಪ್ಪಿಲ್ಲ ಎಂಬಂತೆ ಅವರ ಪರ ನಿಂತರೆ ನಮ್ಮನ್ನೆಲ್ಲ ಕಾಪಾಡುವವರು ಯಾರೆಂದು ಆಕೆ ಪ್ರಶ್ನಿಸಿದ್ದಾರೆ.[ಬಿಗ್ ಬಜಾರ್ ಮ್ಯಾನೇಜರ್ ಮೇಲೆ ಲೈಂಗಿಕ ಕಿರುಕುಳ ಆರೋಪ]

ಆಕೆಯ ಫೇಸ್ ಬುಕ್ ಪೋಸ್ಟ್ ನೋಡಿದ ಕೇಂದ್ರ ಸಚಿವೆ ಮನೇಕಾ ಗಾಂಧಿ, ಆಕೆಯ ಸಂಪರ್ಕ ಸಂಖ್ಯೆ ನೀಡುವಂತೆ ಕೇಳಿದ್ದಾರಲ್ಲದೆ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ, ನ್ಯಾಯ ಒದಗಿಸುವುದಾಗಿ ಪ್ರತಿಕ್ರಿಯಿಸಿದ್ದಾರೆ.[ಬೆಂಗಳೂರಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ]
https://twitter.com/Manekagandhibjp/status/851312002572013568?ref_src=twsrc%5Etfw&ref_url=http%3A%2F%2Fwww.oneindia.com%2Findia%2Fno-country-for-women-pervert-blackmails-udaipur-teen-police-indulge-in-victim-shaming-2401012.htmlಘಟನೆಯ ವಿವರ
ರಾಜಸ್ತಾನದ ಉದಯಪುರದಲ್ಲಿ 17 ವರ್ಷದ ಯುವತಿಯೊಬ್ಬಳು ತನಗೆ ಸಾಮಾಜಿಕ ಜಾಲತಾಣಗಳ ಮೂಲಕ ತೊಂದರೆ ನೀಡುತ್ತಿದ್ದ ವಿಕೃತ ಕಾಮಿಯೊಬ್ಬನಿಂದಾಗಿ ತೀರಾ ತೊಂದರೆ ಅನುಭವಿಸುತ್ತಿದ್ದಳು. ಆಕೆಯ ಚಿತ್ರಗಳನ್ನು ಎಡಿಟ್ ಮಾಡಿ, ಅಶ್ಲೀಲಗೊಳಿಸಿ ಕಳಿಸುತ್ತಿದ್ದ ಆತನ ಉಪಟಳ ದಿನೇ ದಿನ ಹೆಚ್ಚಾಗುತ್ತಿದ್ದಂತೆ ಭಯಗೊಂಡ ಯುವತಿ ಮನೆ ಜನರಿಗೆ ಈ ವಿಷಯ ತಿಳಿಸಿದ್ದಳು.[ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ: ಯುವತಿ ಬಂಧನ]
ಘಟನೆಯನ್ನು ನಿರ್ಲಕ್ಷ್ಯಿಸುವುದು ಸರಿಯಲ್ಲ ಎಂದು ಈ ಬಗ್ಗೆ ದೂರು ನೀಡುವುದಕ್ಕೆ ತನ್ನ ತಂದೆಯೊಂದಿಗೆ ಯುವತಿ ಸೂರಜ್ ಪೊಲ್ ಸೈಬರ್ ಅಪರಾಧ ಶಾಖೆಗೆ ಬಂದು ದೂರುನೀಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು, ಹುಡುಗಿಯರು ತಮ್ಮ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಆಕೆಗೆ ಗಂಟೆಗಟ್ಟಲೆ ಪಾಠ ಕೂಡ ಮಾಡಿದ್ದಾರೆ!
ಸಾಮಾಜಿಕ ಜಾಲತಾಣಗಳಲ್ಲಿರುವ ನಿಮ್ಮ ಎಲ್ಲಾ ಖಾತೆಗಳನ್ನೂ ಇಂದೇ ನಿಷ್ಕ್ರಿಯಗೊಳಿಸಿಬಿಡಿ, ಆಗ ಇಂಥ ತೊಂದರೆಗಳು ಹುಟ್ಟಿಕೊಳ್ಳುವುದೇ ಇಲ್ಲ, ಹಾಗೇ ನಿಮ್ಮ ಮಗಳಿಗೆ ಫೋನ್ ಉಪಯೋಗಿಸುವುದಕ್ಕೂ ಬಿಡಬೇಡಿ ಎಂದು ಯುವತಿಗೆ ಮಾತ್ರವಲ್ಲದೆ ಆಕೆಯ ತಂದೆಗೂ ಪಾಠ ಮಾಡಿದ್ದಾರೆ.
ಇದರಿಂದ ಕುಪಿತಗೊಂಡ ಆಕೆ ಮನೆಗೆ ಬಂದು ತನ್ನ ಅಳಲನ್ನು ತನ್ನ ಸಹೋದರಿಯ ಬಳಿ ತೋಡಿಕೊಂಡಿದ್ದಾರೆ. ಇದೀಗ ಅವರು ಫೇಸ್ ಬುಕ್ ಗೆ ಹಾಕಿರುವ ಪೋಸ್ಟ್ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications