22 ತಿಂಗಳಲ್ಲಿ ರೈಲು ಅಪಘಾತದಿಂದ ಒಂದೇ ಒಂದು ಸಾವು ಸಂಭವಿಸಿಲ್ಲ: ಗೋಯಲ್
ನವದೆಹಲಿ, ಫೆಬ್ರವರಿ 12: ರೈಲ್ವೆ ಇಲಾಖೆಯು ಸುರಕ್ಷತೆಯ ಮಟ್ಟದತ್ತ ಗಮನ ಹರಿಸಿದ್ದರಿಂದ ಕಳೆದ ಸುಮಾರು 22 ತಿಂಗಳಿನಿಂದ ದೇಶದಲ್ಲಿ ರೈಲು ಅಪಘಾತದಿಂದ ಒಂದೇ ಒಂದು ಸಾವು ಸಂಭವಿಸಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ರಾಜ್ಯಸಭೆಯ ಪ್ರಶ್ನೋತ್ತರ ವೇಳೆ 'ಹೊಸ ಸೇತುವೆ ನಿರ್ವಹಣೆ ಶಿಷ್ಟಾಚಾರಗಳು' ಕುರಿತು ಸದಸ್ಯರು ಎತ್ತಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. 'ಕಾಲಾಂತರದಲ್ಲಿ ರೈಲ್ವೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಕಳೆದ ಆರು ವರ್ಷಗಳಲ್ಲಿ ನಾವು ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದ್ದೇವೆ' ಎಂದು ಗೋಯಲ್ ಹೇಳಿದ್ದಾರೆ.
'ರೈಲು ಅಪಘಾತದಲ್ಲಿ ಕೊನೆಯ ಬಾರಿ ಸಾವು ಸಂಭವಿಸಿರುವುದು 2019ರ ಮಾರ್ಚ್ 22ರಂದು ಎಂದು ತಿಳಿಸಲು ಹರ್ಷಿಸುತ್ತೇನೆ. ಸುಮಾರು 22 ತಿಂಗಳಲ್ಲಿ ರೈಲು ಅಪಘಾತದಿಂದ ಯಾವ ಪ್ರಯಾಣಿಕರೂ ಮೃತಪಟ್ಟಿಲ್ಲ' ಎಂದು ಅವರು ಮಾಹಿತಿ ನೀಡಿದ್ದಾರೆ.

ರೈಲ್ವೆ ಸೇತುವೆಗಳ ಬಗ್ಗೆ ಮಾತನಾಡಿದ ಅವರು, 'ಸೇತುವೆಗಳ ದುರಸ್ತಿ ಹಾಗೂ ನಿರ್ವಹಣೆಗೆ ನಾವು ಗಮನ ನೀಡುತ್ತಿದ್ದೇವೆ. ದೇಶದಲ್ಲಿ 100 ವರ್ಷಕ್ಕೂ ಹಳತಾದ 34,665 ಸೇತುವೆಗಳಿವೆ. ನಮ್ಮ ಬಳಿ ತಪಾಸಣೆಯ ಸದೃಢ ವ್ಯವಸ್ಥೆ ಇದೆ. ಮುಂಗಾರಿಗೂ ಮುನ್ನ ಒಮ್ಮೆ ಹಾಗೂ ಮುಂಗಾರಿನ ಬಳಿಕ ಒಮ್ಮೆ ತಪಾಸಣೆ ನಡೆಸಲಾಗುತ್ತದೆ. ಜತೆಗೆ ರೇಟಿಂಗ್ ವ್ಯವಸ್ಥೆ ಕೂಡ ಇದೆ' ಎಂದಿದ್ದಾರೆ.
ರೈಲು ಅಪಘಾತಗಳು ದೇಶದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ರೈಲ್ವೆ ಹಳಿಗಳಲ್ಲಿ ಸುಮಾರು 30,000 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ಮಾಹಿತಿ ತಿಳಿಸಿದೆ.
ಕೆಲವು ಮಾಧ್ಯಮ ವರದಿ ಪ್ರಕಾರ 2020ರ ಜನವರಿ-ಮಾರ್ಚ್ ಅವಧಿಯಲ್ಲಿ ದೇಶದಲ್ಲಿ 558 ಮಂದಿ ಹಳಿ ಮೇಲೆ ಮೃತಪಟ್ಟಿದ್ದಾರೆ. ಏಪ್ರಿಲ್-ಜುಲೈ ಅವಧಿಯಲ್ಲಿ 115 ಮಂದಿ, ಆಗಸ್ಟ್-ನವೆಂಬರ್ನಲ್ಲಿ 314 ಮಂದಿ ಸಾವಿಗೀಡಾಗಿದ್ದಾರೆ. ಮಾರ್ಚ್ 22ರಿಂದ ಜೂನ್ ಮಧ್ಯದವರೆಗೂ ದೇಶದಲ್ಲಿ ಸ್ಥಳೀಯ ಮಟ್ಟದಲ್ಲಿ ಕೂಡ ರೈಲುಗಳು ಓಡಾಡುತ್ತಿರಲಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ











Click it and Unblock the Notifications