ಲಡಾಖ್ನಲ್ಲಿ ಮುಂದುವರಿದ ಸೇನಾ ಬಿಕ್ಕಟ್ಟು: ಸೇನೆ ಹಿಂತೆಗೆತ ಇಲ್ಲ
ನವದೆಹಲಿ, ಏಪ್ರಿಲ್ 19: ಪೂರ್ವ ಲಡಾಖ್ನ ಗಡಿ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಭಾರತೀಯ ಮತ್ತು ಚೀನೀ ಪಡೆಗಳು ನಿಯೋಜನೆಯನ್ನು ಸದ್ಯದಲ್ಲಿ ಹಿಂದಕ್ಕೆ ಕರೆಸಿಕೊಳ್ಳುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಚೀನಾದಿಂದ ಯಾವುದೇ ಒತ್ತಡವಿಲ್ಲದ ಕಾರಣ ಎರಡೂ ಸೇನೆಗಳು ಆ ಜಾಗದಲ್ಲಿಯೇ ಬೀಡುಬಿಟ್ಟಿರಲಿವೆ ಎಂದು ರಕ್ಷಣಾ ಪರಿಣತರು ಅಭಿಪ್ರಾಯಪಟ್ಟಿದ್ದಾರೆ.
ಎಲ್ಎಸಿಯುದ್ದಕ್ಕೂ ಸುಮಾರು 50 ಸಾವಿರ ಪಡೆಗಳು ಶಸ್ತ್ರಾಸ್ತ್ರಗಳು ಮತ್ತು ಸಾಧನಗಳು, ಶಸ್ತ್ರಸಜ್ಜಿತ ವಾಹನಗಳು, ಬಂದೂಕು ಮತ್ತು ಕ್ಷಿಪಣಿಗಳೊಂದಿಗೆ ಸಿದ್ಧವಾಗಿ ನಿಂತಿವೆ. 'ತಾವು ಆತುರದಲ್ಲಿ ಇಲ್ಲ ಎಂದು ತೋರಿಸಲು ಚೀನಾ ಕಡೆಯಿಂದ ಯಾವುದೇ ಸಂದೇಶ ಬಂದಿಲ್ಲ ಎನಿಸುತ್ತದೆ' ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಹೇಳಿದ್ದಾರೆ.
ಪ್ಯಾಂಗಾಂಗ್ ತ್ಸೊ ಸರೋವರದ ಉತ್ತರ ಮತ್ತು ದಕ್ಷಿಣ ತೀರಗಳಿಂದ ಎರಡೂ ಪಡೆಗಳು ಸೇನೆಯನ್ನು ಹಿಂತೆಗೆದುಕೊಂಡ ಬಳಿಕ ಉಭಯ ದೇಶಗಳು ಬೇರೆ ಚಟುವಟಿಕೆಗಳಿಗೆ ಮುಂದಾಗಿಲ್ಲ. 2020ರ ಜೂನ್ 27ರಂದು ಭಾರತೀಯ ಪಡೆಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದ ಕೈಲಾಶ್ ರೇಂಜ್ ಪರ್ವತ ಪ್ರದೇಶಗಳಿಂದ ಕೂಡ ಸೇನೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಲಾಗಿದೆ.

ಇಲ್ಲಿಯವರೆಗೂ ಭಾರತ ಮತ್ತು ಚೀನಾದ ಕಾರ್ಪ್ಸ್ ಕಮಾಂಡರ್ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆ. ವರ್ಷದ ಈ ತಿಂಗಳಿನಲ್ಲಿ ಸೇನಾಪಡೆಗಳು ಬೀಡು ಬಿಡುವುದು ಸಂಪ್ರದಾಯವಾಗಿದೆ. ಈ ಸಂದರ್ಭದಲ್ಲಿ ಎರಡೂ ಪಡೆಗಳು ತಮ್ಮ ಶಕ್ತಿ ಪ್ರದರ್ಶನ ನಡೆಸುತ್ತವೆ. ಯಾವ ಭಾಗವೂ ತೊಂದರೆಗೆ ಒಳಗಾಗಲು ಬಯಸುವುದಿಲ್ಲ ಎಂದು ನಿವೃತ್ತ ಮೇಜರ್ ಜನರಲ್ ಎಸ್ಬಿ ಆಸ್ಥಾನಾ ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications