Get Updates
Get notified of breaking news, exclusive insights, and must-see stories!

ವೆಂಕಯ್ಯ ಮೆಚ್ಚುಗೆ ಪಡೆದ ಕೇರಳ ಸಂಸದ ಜಾನ್ ಚೊಚ್ಚಲ ಭಾಷಣ

ನವದೆಹಲಿ, ಡಿಸೆಂಬರ್ 22: ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉಂಟಾಗಿರುವ ವೈವಿಧ್ಯತೆ, ನ್ಯಾಯಾಂಗ ನೇಮಕಾತಿ ವ್ಯವಸ್ಥೆಯಲ್ಲಿರುವ ಲೋಪ ದೋಷಗಳ ಬಗ್ಗೆ ಕೇರಳ ಸಂಸದ ಜಾನ್‌ ಬ್ರಿಟ್ಟಾಸ್‌ ದನಿಯೆತ್ತಿದ್ದಾರೆ. ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ ಕೇರಳ ಸಂಸದ ಜಾನ್‌ ಬ್ರಿಟ್ಟಾಸ್‌ ಅವರನ್ನು ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಮುಕ್ತಕಂಠದಿಂದ ಹೊಗಳಿದ್ದಾರೆ.

''ನ್ಯಾಯಾಂಗ ನೇಮಕಾತಿ ಬಗ್ಗೆ ಜಾನ್‌ ಬ್ರಿಟ್ಟಾಸ್‌ ಎತ್ತಿರುವ ಪ್ರಶ್ನೆಗಳು ಭಾಷಣ ಕೇಳಿದೆ ಉತ್ತಮವಾದ ಅಂಶಗಳನ್ನು ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಮಾಧ್ಯಮಗಳಲ್ಲಿ ಹೆಚ್ಚಿನ ವರದಿ ಬಂದಿಲ್ಲ. ಮಲಯಾಳಂನಲ್ಲಿ ಬಂದಿದಿಯೋ ಏನೋ ಗೊತ್ತಿಲ್ಲ, ಆದರೆ, ಹೆಚ್ಚಿನ ಸಮಯ ಇದೇ ರೀತಿ ಆಗುತ್ತದೆ, ಮರುದಿನ ಈ ಬಗ್ಗೆ ಸದನದಲ್ಲೂ ಚರ್ಚೆಯಾಗುವುದಿಲ್ಲ, ಮಾಧ್ಯಮಗಳು ಇದರತ್ತ ಗಮನಹರಿಸಲ್ಲ,'' ಎಂದು ವೆಂಕಯ್ಯ ನಾಯ್ಡು ಹೇಳಿದರು.

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ (ವೇತನಗಳು ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ, 2021 ರ ಮೇಲಿನ ಭಾಷಣದಲ್ಲಿ ಸಿಪಿಎಂ ಸಂಸದರಾಗಿರುವ ಬ್ರಿಟ್ಟಾಸ್‌ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಸಮತೋಲಿತ ರೀತಿಯಲ್ಲಿ ಬ್ರಾಹ್ಮಣ ಪ್ರಾತಿನಿಧ್ಯವಿದೆ ಎಂದರು. ಇದುವರೆಗಿನ ಸುಪ್ರೀಂಕೋರ್ಟ್‌ನ 47 ಮುಖ್ಯ ನ್ಯಾಯಮೂರ್ತಿಗಳಲ್ಲಿ 14 ಮಂದಿ ಬ್ರಾಹ್ಮಣರಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

No diversity in judiciary; Collegium system distorting judicial independence: Kerala MP John Brittas

ನ್ಯಾಯಾಂಗ ನೇಮಕಾತಿ ಬಗ್ಗೆ:
ಕೊಲಿಜಿಯಂ ವ್ಯವಸ್ಥೆಯಿಂದ ನ್ಯಾಯಾಂಗದ ಸ್ವಾತಂತ್ರ್ಯ ವಿರೂಪವಾಗುತ್ತಿರುವುದನ್ನು ವಿವರಿಸಿದ ಅವರು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗಕ್ಕೆ (ಎನ್‌ಜೆಎಸಿ) ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಹೇಗೆ ಮೌನವಾಗಿದೆ ಎಂಬುದನ್ನು ವಿವರಿಸಿದರು. ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಅವರು ಸರ್ಕಾರದ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಮಾತ್ರ ನಿಗೂಢತೆ ಕತ್ತಲು ಮತ್ತು ಗೌಪ್ಯತೆ ಇದೆ ಕಾನೂನು ಸಚಿವರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಅವರು ಟೀಕಿಸಿದರು.

ನ್ಯಾ. ಅಖಿಲ್‌ ಖುರೇಷಿ ಅವರಿಗೆ ಏಕೆ ಪದೋನ್ನತಿ ನೀಡಲಿಲ್ಲ ಎಂಬುದನ್ನು ಎತ್ತಿ ತೋರಿಸಿದ ಸಂಸದರು "ಅವರು ಮಾಡಿದ ಅಪರಾಧವಾದರೂ ಏನು? ಪ್ರಭಾವಿ ವ್ಯಕ್ತಿಯೊಬ್ಬರನ್ನು ಜೈಲಿಗೆ ಕಳುಹಿಸಿದ್ದಕ್ಕಾಗಿ ಅವರನ್ನು ಹೊಣೆ ಮಾಡಲಾಗಿದೆ ತಮಗೆ ಅನಾನುಕೂಲಕರವಾದ ನೇಮಕಾತಿಗಳನ್ನು ಸರ್ಕಾರ ತಡೆ ಹಿಡಿದಿದೆ" ಎಂದರು. 2010ರ, ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನ್ಯಾಯಮೂರ್ತಿ ಖುರೇಶಿ ಪೊಲೀಸ್‌ ವಶಕ್ಕೆ ಒಪ್ಪಿಸಿದ್ದರು.

ಜಾನ್‌ ಬ್ರಿಟ್ಟಾಸ್‌ ಮುಂದುವರೆದು "ನ್ಯಾಯಾಂಗ ನೇಮಕಾತಿ ನಡೆಯುತ್ತಿರುವ ಬಗೆ ಮತ್ತು ನ್ಯಾಯಾಂಗವನ್ನು ಹಾಳುಗೆಡವುತ್ತಿರುವುದನ್ನು ಕಂಡು ಸಂವಿಧಾನ ಶಿಲ್ಪಿ ಮತ್ತು ಪ್ರಪ್ರಥಮ ಕಾನೂನು ಸಚಿವ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಆತ್ಮ ವಿಚಲಿತಗೊಳ್ಳಬಹುದು" ಎಂದು ಟೀಕಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+