ವೆಂಕಯ್ಯ ಮೆಚ್ಚುಗೆ ಪಡೆದ ಕೇರಳ ಸಂಸದ ಜಾನ್ ಚೊಚ್ಚಲ ಭಾಷಣ
ನವದೆಹಲಿ, ಡಿಸೆಂಬರ್ 22: ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉಂಟಾಗಿರುವ ವೈವಿಧ್ಯತೆ, ನ್ಯಾಯಾಂಗ ನೇಮಕಾತಿ ವ್ಯವಸ್ಥೆಯಲ್ಲಿರುವ ಲೋಪ ದೋಷಗಳ ಬಗ್ಗೆ ಕೇರಳ ಸಂಸದ ಜಾನ್ ಬ್ರಿಟ್ಟಾಸ್ ದನಿಯೆತ್ತಿದ್ದಾರೆ. ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ ಕೇರಳ ಸಂಸದ ಜಾನ್ ಬ್ರಿಟ್ಟಾಸ್ ಅವರನ್ನು ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಮುಕ್ತಕಂಠದಿಂದ ಹೊಗಳಿದ್ದಾರೆ.
''ನ್ಯಾಯಾಂಗ ನೇಮಕಾತಿ ಬಗ್ಗೆ ಜಾನ್ ಬ್ರಿಟ್ಟಾಸ್ ಎತ್ತಿರುವ ಪ್ರಶ್ನೆಗಳು ಭಾಷಣ ಕೇಳಿದೆ ಉತ್ತಮವಾದ ಅಂಶಗಳನ್ನು ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಮಾಧ್ಯಮಗಳಲ್ಲಿ ಹೆಚ್ಚಿನ ವರದಿ ಬಂದಿಲ್ಲ. ಮಲಯಾಳಂನಲ್ಲಿ ಬಂದಿದಿಯೋ ಏನೋ ಗೊತ್ತಿಲ್ಲ, ಆದರೆ, ಹೆಚ್ಚಿನ ಸಮಯ ಇದೇ ರೀತಿ ಆಗುತ್ತದೆ, ಮರುದಿನ ಈ ಬಗ್ಗೆ ಸದನದಲ್ಲೂ ಚರ್ಚೆಯಾಗುವುದಿಲ್ಲ, ಮಾಧ್ಯಮಗಳು ಇದರತ್ತ ಗಮನಹರಿಸಲ್ಲ,'' ಎಂದು ವೆಂಕಯ್ಯ ನಾಯ್ಡು ಹೇಳಿದರು.
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ (ವೇತನಗಳು ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ, 2021 ರ ಮೇಲಿನ ಭಾಷಣದಲ್ಲಿ ಸಿಪಿಎಂ ಸಂಸದರಾಗಿರುವ ಬ್ರಿಟ್ಟಾಸ್ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಸಮತೋಲಿತ ರೀತಿಯಲ್ಲಿ ಬ್ರಾಹ್ಮಣ ಪ್ರಾತಿನಿಧ್ಯವಿದೆ ಎಂದರು. ಇದುವರೆಗಿನ ಸುಪ್ರೀಂಕೋರ್ಟ್ನ 47 ಮುಖ್ಯ ನ್ಯಾಯಮೂರ್ತಿಗಳಲ್ಲಿ 14 ಮಂದಿ ಬ್ರಾಹ್ಮಣರಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ನ್ಯಾಯಾಂಗ ನೇಮಕಾತಿ ಬಗ್ಗೆ:
ಕೊಲಿಜಿಯಂ ವ್ಯವಸ್ಥೆಯಿಂದ ನ್ಯಾಯಾಂಗದ ಸ್ವಾತಂತ್ರ್ಯ ವಿರೂಪವಾಗುತ್ತಿರುವುದನ್ನು ವಿವರಿಸಿದ ಅವರು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗಕ್ಕೆ (ಎನ್ಜೆಎಸಿ) ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಹೇಗೆ ಮೌನವಾಗಿದೆ ಎಂಬುದನ್ನು ವಿವರಿಸಿದರು. ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಅವರು ಸರ್ಕಾರದ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಮಾತ್ರ ನಿಗೂಢತೆ ಕತ್ತಲು ಮತ್ತು ಗೌಪ್ಯತೆ ಇದೆ ಕಾನೂನು ಸಚಿವರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಅವರು ಟೀಕಿಸಿದರು.
Let me bow my head before the kind words of Hon.Vice President .@VPSecretariat pic.twitter.com/a0m8a3jm1H
— John Brittas (@JohnBrittas) December 18, 2021
ನ್ಯಾ. ಅಖಿಲ್ ಖುರೇಷಿ ಅವರಿಗೆ ಏಕೆ ಪದೋನ್ನತಿ ನೀಡಲಿಲ್ಲ ಎಂಬುದನ್ನು ಎತ್ತಿ ತೋರಿಸಿದ ಸಂಸದರು "ಅವರು ಮಾಡಿದ ಅಪರಾಧವಾದರೂ ಏನು? ಪ್ರಭಾವಿ ವ್ಯಕ್ತಿಯೊಬ್ಬರನ್ನು ಜೈಲಿಗೆ ಕಳುಹಿಸಿದ್ದಕ್ಕಾಗಿ ಅವರನ್ನು ಹೊಣೆ ಮಾಡಲಾಗಿದೆ ತಮಗೆ ಅನಾನುಕೂಲಕರವಾದ ನೇಮಕಾತಿಗಳನ್ನು ಸರ್ಕಾರ ತಡೆ ಹಿಡಿದಿದೆ" ಎಂದರು. 2010ರ, ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನ್ಯಾಯಮೂರ್ತಿ ಖುರೇಶಿ ಪೊಲೀಸ್ ವಶಕ್ಕೆ ಒಪ್ಪಿಸಿದ್ದರು.
ಜಾನ್ ಬ್ರಿಟ್ಟಾಸ್ ಮುಂದುವರೆದು "ನ್ಯಾಯಾಂಗ ನೇಮಕಾತಿ ನಡೆಯುತ್ತಿರುವ ಬಗೆ ಮತ್ತು ನ್ಯಾಯಾಂಗವನ್ನು ಹಾಳುಗೆಡವುತ್ತಿರುವುದನ್ನು ಕಂಡು ಸಂವಿಧಾನ ಶಿಲ್ಪಿ ಮತ್ತು ಪ್ರಪ್ರಥಮ ಕಾನೂನು ಸಚಿವ ಡಾ. ಬಿ ಆರ್ ಅಂಬೇಡ್ಕರ್ ಅವರ ಆತ್ಮ ವಿಚಲಿತಗೊಳ್ಳಬಹುದು" ಎಂದು ಟೀಕಿಸಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications