ಅಟಾರಿ-ವಾಘಾ ಗಡಿಯಲ್ಲಿ ಸಿಹಿ ಹಂಚಿಕೊಳ್ಳದ ಇಂಡೋ-ಪಾಕ್ ಯೋಧರು!
ನವದೆಹಲಿ, ಜನವರಿ.26: ಭಾರತ-ಪಾಕಿಸ್ತಾನ ಗಡಿಯಲ್ಲಿ 71ನೇ ಗಣರಾಜ್ಯೋತ್ಸವ ದಿನ ಪ್ರತಿವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿತ್ತು. ಏಕೆಂದರೆ ಅಟಾರಿ ಹಾಗೂ ವಾಘಾ ಗಡಿಯಲ್ಲಿ ಇಂಡೋ-ಪಾಕಿಸ್ತಾನ ಯೋಧರು ಈ ವರ್ಷ ಸಿಹಿ ಹಂಚಿಕೊಳ್ಳಲಿಲ್ಲ.
ವಾಡಿಕೆಯಂತೆ ಸಿಹಿ ಹಂಚಿಕೊಳ್ಳುವ ಮೂಲಕ ಗಣರಾಜ್ಯೋತ್ಸವ ಸಂಭ್ರಮವನ್ನು ಆಚರಿಸಲು ಪಾಕಿಸ್ತಾನ್ ಯೋಧರಿಗೆ ಭಾರತವು ಸಂದೇಶ ರವಾನಿಸಿತ್ತು. ಆದರೆ, ಪಾಕಿಸ್ತಾನವು ಭಾರತದ ಸಂದೇಶವನ್ನು ತಿರಸ್ಕರಿಸಿದ್ದಾರೆ ಎಂದು ಬಿಎಸ್ಎಫ್ ಯೋಧರೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನದ ನಡೆಯಿಂದ ಈ ಬಾರಿ ಅಟಾರಿ ಹಾಗೂ ವಾಘಾ ಗಡಿಯಲ್ಲಿ ಯೋಧರು ಸಿಹಿ ಹಂಚಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಬಿಎಸ್ಎಫ್ ಯೋಧರು ಮಾಹಿತಿ ನೀಡಿದ್ದಾರೆ. ಜಮ್ಮು-ಕಾಶ್ಮೀರಕ್ಕೆ 370ರ ಅಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವು ಈ ನಡೆಯನ್ನು ಅನುಸರಿಸುತ್ತಿದೆ.

ಸಿಹಿ ಹಂಚಿಕೊಳ್ಳಲು ಪಾಕ್ ಹಿಂದೇಟು:
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಪಾಕಿಸ್ತಾನ ಸೇನೆಯು ಭಾರತದ ಯೋಧರ ಜೊತೆ ಸಿಹಿ ಹಂಚಿಕೊಳ್ಳುವುದಕ್ಕೆ ನಿರಾಕರಿಸಿದೆ ಎಂದು ತಿಳಿದು ಬಂದಿದೆ. ಈ ಮೊದಲು ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಮಿಲಾದ್ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಸಹೋರತ್ವದ ಸಂಕೇತವಾಗಿ ಅಟಾರಿ ಹಾಗೂ ವಾಘಾ ಗಡಿಯಲ್ಲಿ ಭಾರತೀಯ ಹಾಗೂ ಪಾಕಿಸ್ತಾನದ ಯೋಧರು ಸಿಹಿಯನ್ನು ಹಂಚಿಕೊಳ್ಳುತ್ತಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications