ಬಿಜೆಪಿಯಿಂದ ನನ್ನ ಫೇಸ್ಬುಕ್ ಖಾತೆ ಹ್ಯಾಕ್: ಲಾಲೂ ಪುತ್ರನ ಆರೋಪ
ಪಾಟ್ನಾ, ಜುಲೈ 3: ಬಿಜೆಪಿ ಮತ್ತು ಆರ್.ಎಸ್.ಎಸ್ ತಮ್ಮ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಆರೋಪಿಸಿದ್ದಾರೆ.
ತಮ್ಮ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಕುಟುಂಬದಲ್ಲಿ ಒಡಕು ಮೂಡಿಸಲು ಬಿಜೆಪಿ ಯತ್ನಿಸಿದೆ ಎಂದವರು ದೂರಿದ್ದಾರೆ.
ಈ ಕುರಿತು ಸೋಮವಾರ ರಾತ್ರಿ ಫೇಸ್ಬುಕ್ ಪೋಸ್ಟ್ ಹಾಕಿರುವ ತೇಜ್ ಪ್ರತಾಪ್ ಯಾದವ್, "ನನ್ನ ಖಾತೆಯನ್ನು ಬಿಜೆಪಿ ಮತ್ತು ಆರ್.ಎಸ್.ಎಸ್ ಐಟಿ ಸೆಲ್ ನವರು ಹ್ಯಾಕ್ ಮಾಡಿದ್ದಾರೆ. ಮತ್ತು ಅವರು ನಮ್ಮ ಕುಟುಂಬದ ಬಗ್ಗೆ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ. ನಮ್ಮ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಹಿಂದೆ ನನ್ನ ತಂದೆಯ ಫೇಸ್ಬುಕ್ ಪೇಜ್ ಒಂದನ್ನು ಬಿಜೆಪಿ ಬೆಂಬಲಿಗ ಹ್ಯಾಕ್ ಮಾಡಿದ್ದ. ಇದಕ್ಕಾಗಿ ಆತ ಜೈಲು ಶಿಕ್ಷೆಗೆ ಗುರಿಯಾದ. ಆರಂಭದಲ್ಲಿ ನನ್ನ ವಿರುದ್ಧ ಕೆಟ್ಟ ವಿಷಯಗಳನ್ನು ಬರೆದ ನಂತರ ಇದೀಗ ನನ್ನ ತಾಯಿ ವಿರುದ್ಧ ಬರೆಯಲಾಗಿದೆ. ನಮ್ಮ ಯಶಸ್ಸನ್ನು ನೋಡಿ, ನಮ್ಮ ಎದುರಾಳಿಗಳು ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ," ಎಂದವರು ಕಿಡಿಕಾರಿದ್ದಾರೆ.

ಅವರು ಹ್ಯಾಕರ್ ಗಳನ್ನು ಜನಾಭಿಪ್ರಾಯದ ಕಳ್ಳರು ಎಂದು ಜರೆದಿದ್ದು, ನನಗೆ ನನ್ನ ಕುಟುಂಬವೇ ಜೀವನ, ಸಹೋದರ ತೇಜಸ್ವೀ ಯಾದವ್ ಅವರೇ ನನ್ನ ಶಕ್ತಿ ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ತೇಜ್ ಪ್ರತಾಪ್ ಯಾದವ್ ಅವರ ಫೇಸ್ಬುಕ್ ಪೋಸ್ಟ್ ನಲ್ಲಿ, ಪಕ್ಷದ ನಾಯಕರ ಬಗ್ಗೆ ಹತಾಶೆಗೊಂಡಿರುವುದಾಗಿ, ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ರಾಷ್ಟ್ರೀಉ ಉಪಾಧ್ಯಕ್ಷೆ ರಾಬ್ರಿ ದೇವಿ ತಮ್ಮ ದೂರುಗಳ ಬಗ್ಗೆ ಕಿವುಡರಾಗಿದ್ದಾರೆ ಎಂದು ದೂರುವ ಪೋಸ್ಟ್ ಒಂದನ್ನು ಹಾಕಲಾಗಿತ್ತು.
ಆದರೆ ಇದು ನನ್ನ ಪೋಸ್ಟ್ ಅಲ್ಲ, ನನ್ನ ಅಕೌಂಟನ್ನು ಬಿಜೆಪಿ-ಆರ್.ಎಸ್.ಎಸ್ ನವರು ಹ್ಯಾಕ್ ಮಾಡಿದ್ದಾರೆ ಎಂದು ತೇಜ್ ಪ್ರತಾಪ್ ಆರೋಪಿಸಿದ್ದಾರೆ. ಜೊತೆಗೆ ಈ ಪೋಸ್ಟ್ ನ್ನು ಅರ್ಧ ಗಂಟೆಯೊಳಗೆ ಡಿಲೀಟ್ ಮಾಡಲಾಗಿತ್ತು.
ಇನ್ನು ಮಂಗಳವಾರ ಬೆಳಿಗ್ಗೆ ತೇಜ್ ಪ್ರತಾಪ್ ಯಾದವ್ ತಮ್ಮ ತಾಯಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮನೆ ಮುಂದೆ ನೋ ಎಂಟ್ರಿ ನಿತೀಶ್ ಚಾಚಾ ಎಂಬ ಬೋರ್ಡ್ ಪ್ರದರ್ಶಿಸಿದ್ದಾರೆ. ಜೊತೆಗೆ ಹ್ಯಾಕ್ ಮಾಡಿದವರ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications