ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಜೋಡೋ ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

|
Google Oneindia Kannada News

ದೇಗ್ಲೂರು, ನವೆಂಬರ್‌ 8: ಎರಡು ತಿಂಗಳ ಹಿಂದೆ ಆರಂಭವಾದ ಭಾರತ್ ಜೋಡೋ ಯಾತ್ರೆಗೆ ಅಡೆತಡೆಗಳನ್ನು ಒಡ್ಡಲಾಗುತ್ತಿದೆ. ನಾವು ಯಾವುದೇ ಅಡೆತಡೆಗಳನ್ನು ಲೆಕ್ಕಿಸುವುದಿಲ್ಲ. ಇದು ನಿಗದಿತ ಅವಧಿಯಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಕೊನೆಗೊಳ್ಳಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಸೋಮುವಾರ ರಾತ್ರಿ ಮಹಾರಾಷ್ಟ್ರದ ದೇಗ್ಲೂರಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್‌ ಮಾತನಾಡಿದರು.

ಅ.20 ರಂದು ಮಂತ್ರಾಲಯಕ್ಕೆ ಭೇಟಿ ನೀಡಲಿರುವ ರಾಹುಲ್‌ ಗಾಂಧಿ ಅ.20 ರಂದು ಮಂತ್ರಾಲಯಕ್ಕೆ ಭೇಟಿ ನೀಡಲಿರುವ ರಾಹುಲ್‌ ಗಾಂಧಿ

'ಯಾತ್ರೆಯ ಉದ್ದೇಶ ಜನರನ್ನು ಸಂಪರ್ಕಿಸುವುದು. ಭಾರತವನ್ನು ಒಂದುಗೂಡಿಸುವುದು. ದೇಶದಲ್ಲಿ ಬಿತ್ತಲಾಗುತ್ತಿರುವ ದ್ವೇಷದ ವಿರುದ್ಧ ಧ್ವನಿ ಎತ್ತುವುದು' ಎಂದು ತಿಳಿಸಿದರು.

No Force Can Stop Bharat Jodo Yatra Will End In Srinagar Rahul Gandhi

ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಇದು ಕಾಶ್ಮೀರದಲ್ಲಿ ಶ್ರೀನಗರದಲ್ಲೇ ಅಂತ್ಯಗೊಳ್ಳಲಿದೆ ಎಂದು ರಾಹುಲ್ ಹೇಳಿದರು.

ರೈತರು, ಕಾರ್ಮಿಕರು, ಹಿರಿಯ ನಾಗರಿಕರು, ಯುವಕರು, ವ್ಯಾಪಾರಿಗಳು ಸೇರಿದಂತೆ ಈ ಯಾತ್ರೆಯು ಎಲ್ಲರಿಗೂ ಮುಕ್ತವಾಗಿದೆ. ಯಾರು ಬೇಕಾದರೂ ಬಂದು ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು. ನಮ್ಮ ಹೃದಯದ ಬಾಗಿಲುಗಳು ತೆರೆದೇ ಇರುತ್ತವೆ' ಎಂದು ತಿಳಿಸಿದರು.

ನಾನು ಮಹಾರಾಷ್ಟ್ರದ ಪಿಸುಮಾತು ಹಾಗೂ ನೋವನ್ನು ಕೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಎಂದು ಆರೋಪಿಸಿದ ರಾಹುಲ್‌, ದೇಶವನ್ನು ಬಾಧಿಸುತ್ತಿರುವ ಸಮಸ್ಯೆಗಳಿಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ. ನೋಟು ಅಮಾನ್ಯೀಕರಣದಂತಹ ನೀತಿಗಳು ಜನರನ್ನು ಸಂಕಷ್ಟಕ್ಕೆ ದೂಡಿವೆ ಎಂದು ವಾಗ್ದಾಳಿ ನಡೆಸಿದರು.

No Force Can Stop Bharat Jodo Yatra Will End In Srinagar Rahul Gandhi

'ನೋಟು ನಿಷೇಧದಂತಹ ಪ್ರಧಾನಿ ಮೋದಿ ನೀತಿಗಳು ನಿರುದ್ಯೋಗ, ಹಣದುಬ್ಬರ ವಿರುದ್ಧ ಹೋರಾಡುತ್ತಿರುವ ಜನರ ಬೆನ್ನು ಮೂಳೆಯನ್ನು ಮುರಿದಿದೆ' ಎಂದು ಅವರು ಹೇಳಿದರು.

ಈ ಹಿಂದೆ, ಪ್ರಧಾನಿ ಮೋದಿ ಡೀಸೆಲ್ ಮತ್ತು ಪೆಟ್ರೋಲ್ ಬಗ್ಗೆ ಮಾತನಾಡುತ್ತಿದ್ದರು. ಆದರೆ, ಈಗ ಇಂಧನ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿವೆ. ಅವರು ಈ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ ಎಂದು ತಿಳಿಸಿದರು.

ಭಾರತ್‌ ಜೋಡೋ ಯಾತ್ರೆಯು ಈಗಾಗಲೇ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಹಾಗೂ ಆಂದ್ರ ಪ್ರದೇಶದಲ್ಲಿ ಸಾಗಿದೆ. ಸೋಮವಾರ ಮಹಾರಾಷ್ಟ್ರವನ್ನು ಪ್ರವೇಶಿಸಿದೆ.

English summary
The Bharat Jodo Yatra, which began two months ago, will culminate in Srinagar as scheduled irrespective of any hurdles in the way, Congress leader Rahul Gandhi said on Monday night, after his march entered Maharashtra from Telangana,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X