ಉದ್ಯೋಗಿಗಳು ಜೀನ್ಸ್, ಟೀ ಶರ್ಟ್ ಧರಿಸುವಂತಿಲ್ಲ, ಗಡ್ಡ ಬೆಳೆಸುವಂತಿಲ್ಲ: ಸಿಬಿಐ
ನವದೆಹಲಿ, ಜೂ. 04: ಕೇಂದ್ರಿಯ ತನಿಖಾ ದಳ (ಸಿಬಿಐ) ಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಹೊಸ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಚೇರಿಗೆ ಬರುವ ಸಂದರ್ಭದಲ್ಲಿ ಜೀನ್ಸ್, ಟೀ ಶರ್ಟ್, ಸ್ಪೋರ್ಟ್ಸ್ ಶೂಗಳಂಥ ಯಾವುದೇ ಉಡುಪುಗಳನ್ನು ಧರಿಸುವಂತಿಲ್ಲ. ಹಾಗೆಯೇ ಗಡ್ಡ ಬೆಳೆಸುವಂತಿಲ್ಲ ಎಂದು ಸಿಬಿಐನ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಸೂಚನೆ ನೀಡಿದ್ದಾರೆ.
ಆದೇಶದ ಪ್ರಕಾರ, ಪುರುಷರು ಶರ್ಟ್, ಫಾರ್ಮಲ್ ಪ್ಯಾಂಟ್ ಮತ್ತು ಫಾರ್ಮಲ್ ಶೂಗಳನ್ನು ಧರಿಸಿ, ಗಡ್ಡವನ್ನು ಸಂಪೂರ್ಣವಾಗಿ ತೆಗೆದು ಕಚೇರಿಗೆ ಬರಬೇಕಾಗಿದೆ. ಸಿಬಿಐನ ಮಹಿಳಾ ಉದ್ಯೋಗಿಗಳು ಸೀರೆ, ಸೂಟ್, ಫಾರ್ಮಲ್ ಶರ್ಟ್ ಮತ್ತು ಪ್ಯಾಂಟ್ ಮಾತ್ರ ಧರಿಸಲು ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.
"ಯಾವುದೇ ಜೀನ್ಸ್, ಟೀ ಶರ್ಟ್, ಸ್ಪೋರ್ಟ್ಸ್ ಶೂಗಳು, ಚಪ್ಪಲಿಗಳನ್ನು ಧರಿಸಿ ಕಚೇರಿಗೆ ಬರಲು ಅನುಮತಿ ನೀಡಲಾಗುವುದಿಲ್ಲ ಎಂದು ಕೂಡಾ ಆದೇಶದಲ್ಲಿ ತಿಳಿಸಲಾಗಿದೆ.

ದೇಶಾದ್ಯಂತ ಸಿಬಿಐ ಕಚೇರಿಗಳಿಗೆ ಈ ನಿಯಮ ಅನ್ವಯಿಸಲಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೆ ನೋಡಿಕೊಳ್ಳುವಂತೆ ಎಂದು ಶಾಖೆಗಳ ಮುಖ್ಯಸ್ಥರಿಗೆ ಆದೇಶದಲ್ಲಿ ಸೂಚಿಸಲಾಗಿದೆ.
ಇನ್ನು ಈ ಬಗ್ಗೆ ಮಾತನಾಡಿದ ಸಿಬಿಐ ಅಧಿಕಾರಿಗಳು, ಇದು ಸಮತೋಲಿತ ಆದೇಶ. ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಯಾವಾಗಲೂ ಔಪಚಾರಿಕ ಉಡುಗೆ ಧರಿಸಲು ಪ್ರಾರಂಭಿಸಬೇಕು. ವರ್ಷಗಳಿಂದ ಅನೇಕ ಮಂದಿ ಜೀನ್ಸ್ ಮತ್ತು ಟೀ ಶರ್ಟ್ ಸೇರಿದಂತೆ ಸಾಮಾನ್ಯ ಉಡುಗೆಗಳನ್ನು ಧರಿಸಲು ಪ್ರಾರಂಭಿಸಿದರು. ಯಾರೂ ಅದನ್ನು ಪ್ರಶ್ನಿಸಿಲ್ಲ, ಕಚೇರಿಗೆ ಆ ರೀತಿ ಬರದಂತೆ ಹೇಳಿಲ್ಲ. ಸಿಬಿಐ ಅಧಿಕಾರಿಗಳು ಕನಿಷ್ಠ ಔಪಚಾರಿಕ ಕಾಲರ್ ಹೊಂದಿರುವ ಶರ್ಟ್, ಪ್ಯಾಂಟ್ ಹಾಗೂ ಬೂಟುಗಳನ್ನು ಧರಿಸಬೇಕು ಎಂದು ಹೇಳಿದ್ದಾರೆ.
ಜೈಸ್ವಾಲ್ ಕಳೆದ ವಾರ ಸಿಬಿಐನ 33 ನೇ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದು ಸಿಬಿಐನ ದಕ್ಷತೆಯನ್ನು ಸುಧಾರಿಸಲು ಇನ್ನಷ್ಟು ಪ್ರಮುಖ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications