ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲವಾ; ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಹುಲ್ ಪ್ರಶ್ನೆ

|
Google Oneindia Kannada News

ನವದೆಹಲಿ, ಜುಲೈ 08: ಬುಧವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆ ನಂತರ ನೂತನ ಆರೋಗ್ಯ ಸಚಿವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.

"ಇನ್ನು ಮುಂದೆ ಕೊರೊನಾ ಲಸಿಕೆ ಕೊರತೆಯಾಗುವುದಿಲ್ಲವೇ?" ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ರಫೇಲ್‌ ಬಗ್ಗೆ ತನಿಖೆಗೆ ಮೋದಿ ಸರ್ಕಾರ ಸಿದ್ದವೇಕಿಲ್ಲ: ರಾಹುಲ್‌ ಪ್ರಶ್ನೆರಫೇಲ್‌ ಬಗ್ಗೆ ತನಿಖೆಗೆ ಮೋದಿ ಸರ್ಕಾರ ಸಿದ್ದವೇಕಿಲ್ಲ: ರಾಹುಲ್‌ ಪ್ರಶ್ನೆ

ಸಂಪುಟ ವಿಸ್ತರಣೆ ನಂತರ ಕೇಂದ್ರ ಆರೋಗ್ಯ ಸಚಿವರಾಗಿ ಡಾ. ಹರ್ಷವರ್ಧನ್ ಅವರ ಸ್ಥಾನಕ್ಕೆ ಇದೀಗ ಮನ್ಸುಖ್ ಮಾಂಡವಿಯಾ ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "#change" ಎಂಬ ಹ್ಯಾಶ್ ಟ್ಯಾಗ್ ಬಳಸಿ, "ಇದರ ಅರ್ಥ ಇನ್ನು ಮುಂದೆ ದೇಶದಲ್ಲಿ ಲಸಿಕೆ ಕೊರತೆ ಇರುವುದಿಲ್ಲವೆಂಬುದೇ" ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಈಗಲಾದರೂ ಲಸಿಕೆ ಕೊರತೆಯನ್ನು ನೀಗಿಸಲು ಸಾಧ್ಯವೇ ಎಂಬರ್ಥದಲ್ಲಿ ಪ್ರಶ್ನಿಸಿದ್ದಾರೆ.

No More Vaccine Shortage Questions Rahul Gandhi As New Health Minister Took Charge

ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವ ಮೂಲಕ ಕೇಂದ್ರ ಸರ್ಕಾರ ಕೊರೊನಾ ಸೋಂಕು ನಿರ್ವಹಣೆಯಲ್ಲಿ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದೆ ಎಂದು ಬುಧವಾರ ಕಾಂಗ್ರೆಸ್ ಟೀಕಿಸಿತ್ತು.

ಈ ಹಿಂದೆಯೂ ಹಲವು ಬಾರಿ ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ರಾಹುಲ್ ಗಾಂಧಿ ಟೀಕಿಸಿದ್ದರು. ಕೇಂದ್ರದ ಲಸಿಕಾ ನೀತಿಯನ್ನು ಖಂಡಿಸಿದ್ದರು. ಕಳೆದ ವಾರವಷ್ಟೇ, ಸರ್ಕಾರ ಹಾಕಿಕೊಂಡ ಲಸಿಕಾ ಗುರಿಗಿಂತ 27% ಕಡಿಮೆಯಿದೆ. ಜುಲೈ ಬಂದರೂ ಏಕೆ ಲಸಿಕೆ ಪೂರೈಕೆಯಾಗುತ್ತಿಲ್ಲ ಎಂದು ಪ್ರಶ್ನಿಸಿದ್ದರು.

English summary
'No more vaccine shortage?': congress leader Rahul Gandhi's dig as Mansukh Mandaviya replaces Harsh Vardhan as health minister
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X