ಸೆ.30ರ ತನಕ ರೈಲು ಸಂಚಾರ ರದ್ದು; ಬೋರ್ಡ್ ಸ್ಪಷ್ಟನೆ
ನವದೆಹಲಿ, ಆಗಸ್ಟ್ 10 : ಪ್ರಯಾಣಿಕ ರೈಲುಗಳ ಸೇವೆ ಆರಂಭಿಸುವ, ರದ್ದುಗೊಳಿಸುವ ಕುರಿತು ಯಾವುದೇ ಹೊಸ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ರೈಲ್ವೆ ಬೋರ್ಡ್ ಸ್ಪಷ್ಟನೆ ನೀಡಿದೆ.
Recommended Video
ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಎಕ್ಸ್ಪ್ರೆಸ್/ ಪ್ಯಾಸೆಂಜರ್/ ಸಬ್ ಅರ್ಬನ್ ರೈಲುಗಳ ಸಂಚಾರವನ್ನು ಸೆಪ್ಟೆಂಬರ್ 30ರ ತನಕ ರದ್ದುಗೊಳಿಸಲಾಗಿದೆ ಎಂಬುದು ಸುದ್ದಿ.
ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೈರಲ್ ಆದ ಹಿನ್ನಲೆಯಲ್ಲಿ ರೈಲ್ವೆ ಬೋರ್ಡ್ ಸ್ಪಷ್ಟನೆಯನ್ನು ನೀಡಿದೆ. ರೈಲುಗಳ ಸಂಚಾರ ಆರಂಭಿಸುವ, ರದ್ದುಗೊಳಿಸುವ ಕುರಿತು ಯಾವುದೇ ಹೊಸ ಸುತ್ತೋಲೆ ಹೊರಡಿಸಿಲ್ಲ ಎಂದು ಬೋರ್ಡ್ ಹೇಳಿದೆ.

ಮೇ 11ರಂದು ಹೊರಡಿಸಿರುವ ಆದೇಶದಂತೆಯೇ ಪ್ಯಾಸೆಂಜರ್, ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಮುಂಬೈ ನಗರದಲ್ಲಿ ಅಗತ್ಯ ಸೇವೆಗಳನ್ನು ಒದಗಿಸಲು ಹಲವು ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಬೋರ್ಡ್ ಸ್ಪಷ್ಟಪಡಿಸಿದೆ.
ಪ್ರಸ್ತುತ ಸಂಚಾರ ನಡೆಸುತ್ತಿರುವ ರೈಲುಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೊಸ ರೈಲುಗಳ ಸಂಚಾರದ ಬಗ್ಗೆ ಇನ್ನೂ ಅಧಿಕೃತ ಆದೇಶವನ್ನು ಹೊರಡಿಸಿಲ್ಲ ಎಂದು ರೈಲ್ವೆ ಬೋರ್ಡ್ ತಿಳಿಸಿದೆ.
62,064 ಹೊಸ ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣಗಳು ಸೋಮವಾರ ದೇಶದಲ್ಲಿ ಪತ್ತೆಯಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 22 ಲಕ್ಷ ದಾಟಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 44,386ಕ್ಕೆ ಏರಿಕೆಯಾಗಿದೆ.
-
First Rail: ದಶಕ ಪೂರೈಸಿದ ದೇಶದ ಮೊದಲ ಸೆಮಿ-ಹೈ-ಸ್ಪೀಡ್ ರೈಲು; ಅದರ ಸಂಚಾರ ವೇಗ, ಮಾರ್ಗದ ವಿವರ -
Gold: ಅಕ್ಷಯ ತೃತೀಯ: ಗ್ರಾಹಕರಿಗೆ ಬೆಲೆ ಏರಿಕೆಯಿಂದ ರಕ್ಷಣೆ ನೀಡಲು ಜ್ಯುವೆಲ್ಲರಿ ಸಂಸ್ಥೆಗಳ ಹೊಸ ಪ್ಲಾನ್ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು












Click it and Unblock the Notifications