ಪರಮಾಣು ದಾಳಿ ಬಗ್ಗೆ ಪಾಕಿಸ್ತಾನ ಯೋಚಿಸಿರಲಿಲ್ಲ; ಸಂಸತ್ಗೆ ವಿಕ್ರಮ್ ಮಿಶ್ರಿ ಮಾಹಿತಿ
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಭಾರತ ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳನ್ನು ಧ್ವಂಸಗೊಳಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಭಾರತದ ಮೇಲೆ ಡ್ರೋನ್, ಕ್ಷಿಪಣಿ ದಾಳಿಗೆ ಪ್ರಯತ್ನಿಸಿತ್ತು. ಈ ನಡುವೆ ಪಾಕಿಸ್ತಾನ ಪರಮಾಣು ದಾಳಿಗೆ ಯೋಚಿಸಿತ್ತಾ ಎನ್ನುವ ಪ್ರಶ್ನೆಗಳಿಗೆ ಭಾರತ ಉತ್ತರ ನೀಡಿದೆ.
ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಪಾಕ್ ಸರ್ಕಾರ ಯಾವುದೇ ಪರಮಾಣು ದಾಳಿ ಬಗ್ಗೆ ಸೂಚನೆ ಇರಲಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೋಮವಾರ ಸಂಜೆ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ HQ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಒಳಗೊಂಡಂತೆ ಚೀನಾ ನಿರ್ಮಿತ ಶಸ್ತ್ರಾಸ್ತ್ರಗಳ ಬಳಕೆಯು ಅಪ್ರಸ್ತುತವಾಗಿದೆ, ನಾವು ಪಾಕಿಸ್ತಾನದ ವಾಯುನೆಲೆಗಳನ್ನು ಹೊಡೆದುರುಳಿಸಿದ್ದೇವೆ ಎಂದು ಮಿಶ್ರಿ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ತಿಳಿಸಿದರು.

ರಾಷ್ಟ್ರೀಯ ಭದ್ರತಾ ನಿರ್ಬಂಧಗಳ ಕಾರಣ ನೀಡಿದ ಅವರು, ಪಾಕಿಸ್ತಾನದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿರಬಹುದಾದ ಯಾವುದೇ ಭಾರತೀಯ ಯುದ್ಧ ವಿಮಾನಗಳ ಮಾಹಿತಿ ನೀಡಲು ನಿರಾಕರಿಸಿದರು. ಕನಿಷ್ಠ ಮೂರು ರಫೇಲ್ಗಳು ಸೇರಿದಂತೆ ಐದು ಭಾರತೀಯ ಜೆಟ್ಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಹಲವು ವರದಿಗಳಿದ್ದರೂ ಭಾರತ ಸರ್ಕಾರ ಅದನ್ನು ನಿರಾಕರಿಸಿತ್ತು.
ಪರಮಾಣು ಬಾಂಬ್ಗಳನ್ನು ಉದ್ದೇಶಪೂರ್ವಕವಾಗಿ ಅಥವಾ ಅಜಾಗರೂಕತೆಯಿಂದ ಬಳಕೆ ಮಾಡಬಹುದು ಎನ್ನುವ ಆತಂಕವನ್ನು ಸೃಷ್ಟಿಸಲಾಗಿತ್ತು. ಭಾರತವನ್ನು ಆಕ್ರಮಣಕಾರಿ ಎಂದು ಬಿಂಬಿಲಸು ಮತ್ತು ಭಾರತೀಯ ಸಶಸ್ತ್ರ ಪಡೆಗಳನ್ನು ಶರಣಾಗುವಂತೆ 'ಬ್ಲ್ಯಾಕ್ಮೇಲ್' ಮಾಡಲು ಪಾಕಿಸ್ತಾನವು ಪರಮಾಣು ಅಸ್ತ್ರಗಳ ಬಳಕೆ ಬಗ್ಗೆ ವದಂತಿಗಳನ್ನು ಹಬ್ಬಿಸಿತು. ಆದರೆ, ಪ್ರಧಾನಿ ನರೇಂದ್ರ ಮೋದಿ ಇದನ್ನು ತಳ್ಳಿಹಾಕಿದರು.
ಭಾರತವು ಪಾಕಿಸ್ತಾನದ ಪರಮಾಣು ಬೆದರಿಕೆಗೆ ಹೆದರುವುದಿಲ್ಲ ಎಂದು ಹೇಳಿದರು. ಭಯೋತ್ಪಾದನೆಗೆ ಬೆಂಬಲ ನೀಡುವ, ತರಬೇತಿನೀಡುವ ಸುರಕ್ಷಿತ ತಾಣಗಳ ಮೇಲೆ ನಿಖರವಾದ ದಾಳಿಯನ್ನು ನಡೆಸಲಾಗುತ್ತದೆ ಎಂದು ಮೋದಿ ಘೋಷಿಸಿದರು.
ಭಾರತೀಯ ವಾಯುಪಡೆಯು ಪಾಕಿಸ್ತಾನದ ಕಿರಾನಾ ಬೆಟ್ಟಗಳ ದಾಳಿ ನಡೆಸಿದೆ ಎಂಬ ವದಂತಿಗಳನ್ನು ಈ ಹಿಂದೆ ತಳ್ಳಿಹಾಕಿತ್ತ. ಆ ಸ್ಥಳದಲ್ಲಿ ಆ ದೇಶದ ಪರಮಾಣು ಸೌಲಭ್ಯವಿದೆ ಎಂದು ವರದಿಯಾಗಿದೆ. ಹಾಸ್ಯಮಯವಾಗಿ ಹೇಳುವುದಾದರೆ, ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು ಕಿರಾನಾ ಬೆಟ್ಟಗಳ ಬಗ್ಗೆನಮಗೆ ಗೊತ್ತಿಲ್ಲ ಎಂದು ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆ - ಆಪರೇಷನ್ ಸಿಂಧೂರ್ ಬಗ್ಗೆ ನೀಡಿದ ವಿವರಣೆಯಲ್ಲಿ ಮೇ 12 ರ ಕದನ ವಿರಾಮದಲ್ಲಿ ಅಮೆರಿಕಕ್ಕೆ ಯಾವುದೇ ಪಾತ್ರವಿಲ್ಲ ಎಂದು ಮಿಶ್ರಿ ಹೇಳಿದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications