ಬಂಡಾಯ ಶಾಸಕರು ಬಾಳಾಸಾಹೇಬ್ ಠಾಕ್ರೆ ಹೆಸರು ಬಳಸುವಂತಿಲ್ಲ: ಉದ್ಧವ್ ಠಾಕ್ರೆ
ನವದೆಹಲಿ, ಜೂನ್ 25: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ನಡೆದ ಶಿವಸೇನೆಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಏಕನಾಥ್ ಶಿಂಧೆ ಮತ್ತು ಬಂಡಾಯ ಶಾಸಕರು ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ಬಳಸದಂತೆ ತಡೆಯಲು ನಿರ್ಣಯವನ್ನು ಅಂಗೀಕರಿಸಿದೆ.
ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಂಡಾಯ ಪಾಳಯ ಬಳಸದಂತೆ ನೋಡಿಕೊಳ್ಳಲು ಶಿವಸೇನೆ ಭಾರತ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ. ಮುಂಬೈನಲ್ಲಿ ನಡೆದ ಶಿವಸೇನೆಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಬಾಳ್ ಠಾಕ್ರೆ ಅವರ ಹೆಸರನ್ನು ಯಾರೂ ಬಳಸುವಂತಿಲ್ಲ ಎಂದು ಹೇಳಿದ್ದಾರೆ.
ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಮ್ಮ ಗುಂಪಿಗೆ 'ಶಿವಸೇನಾ ಬಾಳಾಸಾಹೇಬ್' ಎಂದು ಹೆಸರಿಸಲು ನಿರ್ಧರಿಸಿದ್ದಾರೆ ಎಂದು ವರದಿಗಳಿವೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಅವರ ಅನರ್ಹತೆಗೆ ಒತ್ತಾಯಿಸುತ್ತಿರುವ ಒತ್ತಡದ ನಡುವೆ ಹೊಸ ಹೆಸರು ಇಡಲಾಗಿದೆ.
ಬಂಡಾಯ ಎದ್ದಿರುವ ಶಿವಸೇನೆ ಶಾಸಕರು ಕೂಡ ಬಾಳಾಸಾಹೇಬ್ ಮತ್ತು ಪಕ್ಷದ ಹೆಸರನ್ನು ಬೇರೆ ಯಾವುದೇ ಬಣಗಳು ಬಳಸದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಚುನಾವಣಾ ಆಯೋಗಕ್ಕೆ ಪತ್ರ ಬರೆದ ಶಿವಸೇನೆ
"ಬಾಳಾಸಾಹೇಬ್ ಠಾಕ್ರೆ ಸ್ಥಾಪಿಸಿದ ಶಿವಸೇನೆಯ ಹಿತಾಸಕ್ತಿಗಳಿಗೆ ಧಕ್ಕೆಯಾಗುವಂತೆ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಶಾಸಕರ ನಡವಳಿಕೆಯಿಂದಾಗಿ, ತಪ್ಪಿತಸ್ಥ ಶಾಸಕರು ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. 'ಶಿವಸೇನೆ' ಅಥವಾ ಬಾಳಾಸಾಹೇಬ್ ಹೆಸರನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಯತ್ನಿಸುತ್ತಿದ್ದಾರೆ" ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
"ಏಕನಾಥ್ ಶಿಂಧೆ ಮತ್ತು ಅವರ ಸಂಗಡಿಗರು ಅವರು ಬಯಸಿದ ಯಾವುದೇ ರಾಜಕೀಯ ಪಕ್ಷವನ್ನು ಸ್ಥಾಪಿಸುವುದನ್ನು ನಾವು ತಡೆಯಲು ಸಾಧ್ಯವಿಲ್ಲ, ಅಂತಹ ಯಾವುದೇ ಪಕ್ಷವನ್ನು ಶಿವಸೇನೆ ಅಥವಾ ಬಾಳಾಸಾಹೇಬ್ ಹೆಸರಿನಲ್ಲಿ ಸ್ಥಾಪಿಸುವುದಾಗಲಿ ಅಥವಾ ಈ ಹೆಸರುಗಳನ್ನು ಬಳಸುವುದನ್ನು ನಾವು ಬಲವಾಗಿ ಆಕ್ಷೇಪಿಸುತ್ತೇವೆ. ನಾವು ನಿಮಗೆ ಮುಂಚಿತವಾಗಿ ತಿಳಿಸಲು ಬಯಸುತ್ತೇವೆ. ಶಿವಸೇನೆಯ ಯಾವುದೇ ಪಕ್ಷಾಂತರಿ ಶಾಸಕರು ಅಂತಹ ಯಾವುದೇ ಕ್ರಮವನ್ನು ಕೈಗೊಂಡರೆ ನಾವು ಗಮನಕ್ಕೆ ತರುತ್ತೇವೆ" ಎಂದು ಪತ್ರದಲ್ಲಿ ಬರೆಯಲಾಗಿದೆ.

ಯಾವುದೇ ಪಕ್ಷದೊಂದಿಗೆ ವಿಲೀನ ಇಲ್ಲ
ತಮ್ಮ ಗುಂಪನ್ನು ಶಿವಸೇನೆ ಬಾಳಾಸಾಹೇಬ್ ಎಂದು ಕರೆಯಲಾಗುವುದು ಎಂದು ಬಂಡಾಯ ಶಿವಸೇನೆ ಶಾಸಕ ದೀಪಕ್ ಕೇಸರ್ಕರ್ ಹೇಳಿದ್ದಾರೆ. ನಾವು ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಮ್ಮ ಗುಂಪಿಗೆ 'ಶಿವಸೇನಾ ಬಾಳಾಸಾಹೇಬ್' ಎಂದು ಹೆಸರಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಚೆನ್ನಿಗೆ ಚೂರಿ ಹಾಕಿದವರು ಎಂದ ಉದ್ಧವ್
ಮತ್ತೊಂದೆಡೆ ಶಿವಸೇನೆ ಹೋರಾಟದ ಹಾದಿಯಲ್ಲಿದೆ. ಉದ್ಧವ್ ಠಾಕ್ರೆ ಬಂಡಾಯ ಶಾಸಕರನ್ನು ಬೆನ್ನಿಗೆ ಚೂರಿ ಹಾಕುವವರು ಎಂದು ಕರೆದಿದ್ದಾರೆ. ಬಂಡಾಯ ಶಾಸಕರ ಕಚೇರಿಗಳನ್ನು ಶಿವಸೈನಿಕರು ಧ್ವಂಸ ಮಾಡಿದ ಘಟನೆಗಳೂ ವರದಿಯಾಗಿವೆ.
ಪುಣೆಯಲ್ಲಿರುವ ಬಂಡಾಯ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮುಂಬೈ ಪೊಲೀಸರು ಕೂಡ ಹೈ ಅಲರ್ಟ್ ಘೋಷಿಸಿದ್ದು, ನಗರದ ಎಲ್ಲಾ ರಾಜಕೀಯ ಪಕ್ಷದ ಕಚೇರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚಿಸಿದ್ದಾರೆ.

ಜೂನ್ 57ರಂದು ಉತ್ತರ ನೀಡಲು ಸೂಚನೆ
16 ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನೆ ಈಗಾಗಲೇ ಅರ್ಜಿ ಸಲ್ಲಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಶನಿವಾರದಂದು ಸೇನಾ ಬಂಡಾಯ ಶಾಸಕರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ.
ಬಂಡಾಯ ಸೇನೆಯ ಶಾಸಕರು ತಮ್ಮ ಹಕ್ಕುಗಳನ್ನು ಬೆಂಬಲಿಸುವ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಜೂನ್ 27 ರ ಸಂಜೆ 5 ಗಂಟೆಯೊಳಗೆ ಲಿಖಿತ ಉತ್ತರವನ್ನು ನೀಡುವಂತೆ ಕೇಳಲಾಗಿದೆ. ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗದ ಕಾರಣಕ್ಕಾಗಿ ಶಿವಸೇನೆ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿತ್ತು.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಶಿಂಧೆ ಬಂಡಾಯವನ್ನು ಗಮನದಲ್ಲಿಟ್ಟುಕೊಂಡು ಸಂಘಟನೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಉದ್ಧವ್ ಠಾಕ್ರೆ ಅವರಿಗೆ ಅಧಿಕಾರ ನೀಡಿದೆ. ಶಿಂಧೆ ಜೊತೆಗೆ ಪಕ್ಷದ ಮತ್ತೋರ್ವ ಅತೃಪ್ತ ನಾಯಕ ಹಾಗೂ ಮಾಜಿ ಸಚಿವ ರಾಮದಾಸ್ ಕದಂ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇಬ್ಬರೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು. ಕದಂ ಪುತ್ರ, ಶಾಸಕ ಯೋಗೇಶ್ ಕದಂ ಗುವಾಹಟಿಯಲ್ಲಿ ಬಂಡಾಯ ಶಾಸಕರ ಗುಂಪನ್ನು ಸೇರಿದ್ದಾರೆ.
ಬಂಡಾಯ ಶಾಸಕರ ರಕ್ಷಣೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಏಕನಾಥ್ ಶಿಂಧೆ ಈ ಹಿಂದೆ ಆರೋಪಿಸಿದ್ದರು. ಅವರನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೇಳಿದ್ದರು. ಆದರೆ ಈ ಆರೋಪವನ್ನು ಪಕ್ಷದ ನಾಯಕ ಸಂಜಯ್ ರಾವತ್ ನಿರಾಕರಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications