ದೇಶದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ: ಬಿಜೆಪಿ ವಿರುದ್ಧ ತಿರುಗಿಬಿದ್ದ ಪವಾರ್
ಮುಂಬೈ, ಸೆಪ್ಟೆಂಬರ್ 05: ಜಿ 20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು 'President of Bharat' ಎಂದು ಉಲ್ಲೇಖಿಸಲಾಗಿದೆ. ಇದು ದೇಶದಾದ್ಯಂತ ಪರ-ವಿರೋಧದ ಚರ್ಚೆಗಳಿಗೆ ನಾಂಧಿ ಹಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಎನ್ಸಿಪಿ ನಾಯಕ ಶರದ್ ಪವಾರ್, 'ರಾಷ್ಟ್ರದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ' ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಸಭೆಯಲ್ಲಿ ಈ ವಿಚಾರದ ಕುರಿತು ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

28 ಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕರೆದಿದ್ದಾರೆ.
'ದೇಶಕ್ಕೆ ಸಂಬಂಧಿಸಿದ ಹೆಸರಿನ ಬಗ್ಗೆ ಆಡಳಿತ ಪಕ್ಷವು ಏಕೆ ಗೊಂದಲಕ್ಕೊಳಗಾಗುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ' ಎಂದು ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶರದ್ ಪವಾರ್ ತಿಳಿಸಿದ್ದಾರೆ.
ಸಂವಿಧಾನದಲ್ಲಿ ಭಾರತದ ಹೆಸರನ್ನು ಬದಲಾಯಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಶರದ್ ಪವಾರ್, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾರತ ಮೈತ್ರಿಕೂಟದ ಎಲ್ಲಾ ಪಕ್ಷದ ಮುಖ್ಯಸ್ಥರ ಸಭೆಯನ್ನು ಬುಧವಾರ ಕರೆದಿದ್ದಾರೆ ಎಂದು ಶರದ್ ಪವಾರ್ ಮಾಹಿತಿ ನೀಡಿದ್ದಾರೆ.
'ಸಭೆಯಲ್ಲಿ ಈ ಕುರಿತು ಬಗ್ಗೆ ಚರ್ಚೆ ನಡೆಯಲಿದೆ. ಆದರೆ, ದೇಶದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ. ಯಾರೂ ಹೆಸರನ್ನು ಬದಲಾಯಿಸಲು ಸಾಧ್ಯವಿಲ್ಲ' ಎಂದು ಎನ್ಸಿಪಿ ಮುಖ್ಯಸ್ಥರು ಹೇಳಿದ್ದಾರೆ.
ಜಿ 20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ 'President Of Bharat' ಎಂದು ಉಲ್ಲೇಖಿಸಲಾಗಿದೆ. ಈ ಮೂಲಕ ಭಾರತದ ಒಕ್ಕೂಟ ವ್ಯವಸ್ಥೆ ಆಕ್ರಮಣಕ್ಕೆ ಒಳಗಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.
'ಇಂಡಿಯಾ ಮೈತ್ರಿಕೂಟವು ತನ್ನ ಹೆಸರನ್ನು ಭಾರತ್ ಎಂದು ಬದಲಾಯಿಸಿದರೆ ಬಿಜೆಪಿ 'ಭಾರತ್' ಎನ್ನುವ ಹೆಸರನ್ನು ಬದಲಾಯಿಸುತ್ತದೆಯೇ?' ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ರಿಂದ 10 ರ ವರೆಗೆ ನವದೆಹಲಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದೆ. ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ವಿಶ್ವದಾದ್ಯಂತದ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications