ಯುಪಿಎಸ್ಸಿ ಅಭ್ಯರ್ಥಿಗಳಿಗೆ ನಿರಾಶೆ ಮೂಡಿಸಿದ ಸರ್ಕಾರ
ನವದೆಹಲಿ, ಡಿ.11: 'ಕೇಂದ್ರೀಯ ಲೋಕಸೇವಾ ಆಯೋಗ(ಯುಪಿಎಸ್ ಸಿ) ದ ಹುದ್ದೆಗಳ ಆಕಾಂಕ್ಷಿಗಳ ವಯೋಮಿತಿ ಇಳಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಕೇಂದ್ರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈಗಾಗಲೇ ನೂತನ ಅಧಿಸೂಚನೆ ಹೊರಡಿಸಿದೆ' ಎಂಬ ಸುದ್ದಿ ಸುಳ್ಳಾಗಿದೆ. ಈ ರೀತಿ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಯುಪಿಎಸ್ ಸಿ ಆಕಾಂಕ್ಷಿಗಳ ವಯೋಮಿತಿ ಇಳಿಕೆ ಹಾಗೂ ಪರೀಕ್ಷೆ ಯತ್ನ ಮಿತಿ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಸರ್ಕಾರ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸಂಸತ್ತಿನಲ್ಲಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಯುಪಿಎಸ್ ಸಿ ಹುದ್ದೆ ಆಕಾಂಕ್ಷಿಗಳಿಗೆ ನಿರಾಶೆ ಮೂಡಿದೆ.
ಮುಂದಿನ ವರ್ಷದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಯೋಮಿತಿ 30 ರಿಂದ 26 ವರ್ಷಕ್ಕೆ ಇಳಿಕೆ ಮೂರು ಬಾರಿ ಪರೀಕ್ಷೆ ಯತ್ನ ನೀಡಲಾಗುವುದು ಎಂಬ ಸುದ್ದಿ ಬಂದಿತ್ತು.[ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಸಿಗುವುದೇ?]

ಈ ಬಗ್ಗೆ ಲಿಖಿತ ಉತ್ತರ ನೀಡಿದ ಸಚಿವ ಜಿತೇಂದ್ರ ಸಿಂಗ್ ಅವರು ನಾಗರಿಕ ಸೇವಾ ಪರೀಕ್ಷೆ(CSE) ಯಲ್ಲಿ ಬದಲಾವಣೆಗೆ ಕೇಂದ್ರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಶಿಫಾರಸು ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಚರ್ಚೆ ನಡೆಸಿ ನಿರ್ಣಯಕ್ಕೆ ಬಂದಿದೆ.
ಬದಲಾವಣೆಗಳು: ನಾಗರಿಕ ಸೇವಾ ಪರೀಕ್ಷೆ(Preliminary) ಪೇಪರ್ II ನಲ್ಲಿ 'English language comprehension skills ಅಂಕಗಳನ್ನು ಸಿಎಸ್ ಇ2014ರ ಮೆರಿಟ್ ಪಟ್ಟಿಯಲ್ಲಿ ಸೇರ್ಪಡೆಗೊಳಿಸದಿರಲು ನಿರ್ಧರಿಸಲಾಗಿದೆ.
ಇದರ ಜೊತೆಗೆ ಸಿಎಸ್ ಇ 2011ರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಸಿಎಸ್ ಇ 2015ರ ಪರೀಕ್ಷೆ ಬರೆಯುವ ಮತ್ತೊಂದು ಅವಕಾಶ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.(ಪಿಟಿಐ)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications