Get Updates
Get notified of breaking news, exclusive insights, and must-see stories!

Rahul Gandhi : "ಲಂಡನ್‌ನಲ್ಲಿನ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ", ರಾಹುಲ್ ಗಾಂಧಿ

ರಾಹುಲ್ ಗಾಂಧಿ ಲಂಡನ್‌ನಲ್ಲಿ ನೀಡಿರುವ ಹೇಳಿಕೆ ವಿರುದ್ಧ ಇಂದು ಬಿಜೆಪಿ ವಾಗ್ದಾಳಿ ಮಾಡಿದೆ. ರಾಹುಲ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ.

ದೆಹಲಿ ಮಾರ್ಚ್ 14: ಲಂಡನ್‌ನಲ್ಲಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಇಂದು ಬಿಜೆಪಿ ವಾಗ್ದಾಳಿ ಮಾಡಿದೆ. ರಾಹುಲ್ ಕ್ಷಮೆಯಾಚಿಸಬೇಕೆಂದು ಬಜೆಟ್ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಆಡಳಿತಾರೂಢ ಬಿಜೆಪಿ ಸದಸ್ಯರು ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸಿದರು.

ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್, ಸದಸ್ಯರೊಬ್ಬರು ವಿದೇಶಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡುವುದನ್ನು ಸಂಸತ್ತು ನೋಡಿಕೊಂಡು ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಬಿಸಿಯಾದ ಮಾತಿನ ವಾಗ್ವಾದ ಎರಡನೇ ದಿನವೂ ಮುಂದುವರಿದಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಸಭೆ ಮುಂದೂಡಲ್ಪಟ್ಟವು.

No question of apology for statement in London: Rahul Gandhi

ರಾಹುಲ್ ಗಾಂಧಿ ಹೇಳಿದ್ದೇನು?

ಕಳೆದ ವಾರ, 'ಲೋಕಸಭೆಯಲ್ಲಿ ಕಾರ್ಯನಿರ್ವಹಿಸುವ ಮೈಕ್‌ಗಳು ಪ್ರತಿಪಕ್ಷಗಳ ವಿರುದ್ಧ ಮೌನವಾಗಿರುತ್ತವೆ. ನಮ್ಮ ಮೈಕ್‌ಗಳು ಸರಿಯೇ ಇವೆ. ಅವು ಕಾರ್ಯನಿರ್ವಹಿಸುತ್ತಿವೆ. ಆದರೆ, ನೀವು ಅವುಗಳನ್ನು ಈಗ ಆನ್ ಮಾಡಲು ಸಾಧ್ಯವಿಲ್ಲ. ನಾನು ಮಾತನಾಡುವಾಗ ಅದು ನನಗೆ ಹಲವಾರು ಬಾರಿ ಸಂಭವಿಸಿದೆ' ಎಂದು ರಾಹುಲ್ ಗಾಂಧಿಯವರು ಬ್ರಿಟಿಷ್ ಸಂಸದರಿಗೆ ತಿಳಿಸಿದರು.

ಗಾಂಧಿಯವರ ಈ ಹೇಳಿಕೆಗಳನ್ನು 'ಕೆಟ್ಟ ಸುಳ್ಳು' ಎಂದು ಕರೆದ ಗಿರಿರಾಜ್ ಸಿಂಗ್, 'ಇದರ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು. ಈ ಹೇಳಿಕೆಗಳು ದೇಶಕ್ಕೆ ಮಾಡಿದ ಅವಮಾನ. ಭಾರತವು ವಿಶ್ವದಿಂದ ಗೌರವವನ್ನು ಪಡೆಯುತ್ತಿದೆ ಮತ್ತು ಅವರು ವಿದೇಶಕ್ಕೆ ಹೋಗಿ ತುಕ್ಡೆ-ತುಕ್ಡೆ ಗ್ಯಾಂಗ್‌ನಂತೆ ಮಾತನಾಡುತ್ತಿದ್ದಾರೆ' ಹೇಳಿದರು.

ರಾಹುಲ್ ಗಾಂಧಿ ಹೇಳಿಕೆಗೆ ಕ್ಷಮೆಯಾಚನೆಗೆ ಒತ್ತಾಯ

ಈ ಹೇಳಿಕೆಗೆ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಎಲ್ಲಾ ಪಕ್ಷಗಳ ಸಂಸದರು ಅವರ ಹೇಳಿಕೆಯನ್ನು ಖಂಡಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಆದಾಗ್ಯೂ ಕಾಂಗ್ರೆಸ್ ಆಡಳಿತ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದೆ. "ಪ್ರಜಾಪ್ರಭುತ್ವವನ್ನು ಪುಡಿಮಾಡುವವರು ಅದನ್ನು ಉಳಿಸುವ ಮಾತನಾಡುತ್ತಿದ್ದಾರೆ" ಎಂದು ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

No question of apology for statement in London: Rahul Gandhi

ಇಂದು ಬೆಳಿಗ್ಗೆ, ಸಂಸತ್ತಿನಲ್ಲಿ ಆಡಳಿತ ಪಕ್ಷದ ಕಾರ್ಯತಂತ್ರವನ್ನು ಉತ್ತಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉನ್ನತ ಮಂತ್ರಿಗಳು ಭಾಗವಹಿಸಿದರು. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್, ಪಿಯೂಷ್ ಗೋಯಲ್, ನಿತಿನ್ ಗಡ್ಕರಿ ಮತ್ತು ಕಿರಣ್ ರಿಜಿಜು ಸಭೆಯಲ್ಲಿ ಭಾಗವಹಿಸಿದ್ದರು.

"ನಾವು ಎಲ್ಲವನ್ನೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಸದನದ ಸದಸ್ಯರು ವಿದೇಶಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡುತ್ತಾರೆ. ಕೆಲವು ಪಕ್ಷಗಳು ಸಹ ಅವರಿಗೆ ಬೆಂಬಲ ನೀಡುತ್ತಿರುವುದು ನನಗೆ ಆಘಾತ ತಂದಿದೆ. ಹಿರಿಯ ಸಂಸದರೊಬ್ಬರು ಮಾತನಾಡಿರುವ ಬಗ್ಗೆ ಟೀಕಿಸಲು ನಾನು ಎಲ್ಲ ಪಕ್ಷಗಳಿಗೆ ಮನವಿ ಮಾಡುತ್ತೇನೆ. ವಿದೇಶಿ ನೆಲದಲ್ಲಿ ಸಂಸತ್ತಿಗೆ ಮಾನಹಾನಿ ಮಾಡಲಾಗಿದ'' ಎಂದು ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯ ನಡುವೆ ಗೋಯಲ್ ರಾಜ್ಯಸಭೆಯಲ್ಲಿ ಹೇಳಿದರು.

ರಾಹುಲ್ ಗಾಂಧಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಉಪನಾಯಕ ಮಾಣಿಕಂ ಠಾಗೋರ್ ಹೇಳಿದ್ದಾರೆ. "ಕ್ಷಮೆ ಕೇಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಅವರು ಯಾವುದೇ ತಪ್ಪನ್ನು ಹೇಳಿಲ್ಲ. ಆರ್‌ಎಸ್‌ಎಸ್‌ನವರು ಕ್ಷಮೆಯಾಚಿಸುತ್ತಾರೆ, ಕಾಂಗ್ರೆಸ್‌ನವರು ಕ್ಷಮೆಯಾಚಿಸುವುದಿಲ್ಲ. ಜನರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಸರಿಯಾಗಿ ಹೇಳಿದ್ದಾರೆ" ಎಂದು ಠಾಗೋರ್ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+