ತೆಲಂಗಾಣ; ಟಿಆರ್ಎಸ್- ಕಾಂಗ್ರೆಸ್ ಮೈತ್ರಿ ಬಗ್ಗೆ ರಾಹುಲ್ ಸ್ಪಷ್ಟನೆ
ಹೈದರಾಬಾದ್, ಅಕ್ಟೊಬರ್ 31: ತೆಲಂಗಾಣ ರಾಜ್ಯದಲ್ಲಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ನೇತೃತ್ವದ ಪಕ್ಷದಲ್ಲಿ ಎಲ್ಲವೂ ತಪ್ಪು ಕಲ್ಪನೆಯಿಂದ ಕೂಡಿದ್ದು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಶ್ನೆಯಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಟಿಆರ್ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂದು ಮರುನಾಮಕರಣ ಮಾಡುತ್ತಿರುವ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, "ಕೆಸಿಆರ್ ಅವರು ರಾಷ್ಟ್ರೀಯ ಪಕ್ಷವನ್ನು ರಚಿಸಲು ಬಯಸಿದರೆ ಅದು ಉತ್ತಮ. ಅವರು ಜಾಗತಿಕ ಪಕ್ಷವನ್ನು ಸ್ಥಾಪಿಸಲು ಬಯಸಿದರೆ ಚೀನಾದಲ್ಲಿ, ಯುಕೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದರೆ ಅದು ಸಹ ಉತ್ತಮವಾಗಿದೆ. ಆದರೆ ವಾಸ್ತವವೆಂದರೆ ಬಿಜೆಪಿಯ ಸಿದ್ಧಾಂತವನ್ನು ಸೋಲಿಸಲು ಕಾಂಗ್ರೆಸ್ ಸಿದ್ಧಾಂತದಿಂದ ಮಾತ್ರ ಸಾಧ್ಯ" ಎಂದು ಹೇಳಿದರು.
"ನಮ್ಮ ಪಕ್ಷ ಪ್ರಜಾಸತ್ತಾತ್ಮಕ ಪಕ್ಷ. ನಾವು ಸರ್ವಾಧಿಕಾರವನ್ನು ನಡೆಸುವುದಿಲ್ಲ ಎಂಬುದು ನಮ್ಮ ಡಿಎನ್ಎಯಲ್ಲಿದೆ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರನ್ನು ಪ್ರಜಾಸತ್ತಾತ್ಮಕವಾಗಿ ಆಯ್ಕೆ ಮಾಡಲಾಗಿದೆ. ಆರ್ಎಸ್ಎಸ್, ಬಿಜೆಪಿ, ಟಿಆರ್ಎಸ್ ಮತ್ತು ಇತರ ರಾಜಕೀಯ ಪಕ್ಷಗಳು ಯಾವಾಗ ಚುನಾವಣೆ ನಡೆಸುತ್ತವೆ ಎಂದು ನಾನು ಆಶ್ಚರ್ಯ ಪಡುತ್ತಿದ್ದೇನೆ" ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೈದರಾಬಾದ್ನಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹಿರಿಯ ನಾಯಕ ಜೈರಾಮ್ ರಮೇಶ್ ಘೋಷಿಸಿದರು.
"ವಿವಿಧ ಸಂಸ್ಥೆಗಳ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದ್ದು, ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಈ ಸಂಸ್ಥೆಗಳನ್ನು ಆರ್ಎಸ್ಎಸ್ ಹಿಡಿತದಿಂದ ಮುಕ್ತಗೊಳಿಸಲಾಗುವುದು" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ತಿಳಿಸಿದ್ದಾರೆ.

ಕೋಥೂರ್ನಲ್ಲಿ ಭಾರತ್ ಜೋಡೋ ಯಾತ್ರೆಯ ನಡುವೆ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮಾತನಾಡಿ, "ವಿವಿಧ ಸಂಸ್ಥೆಗಳ ಮೇಲೆ ವ್ಯವಸ್ಥಿತ ದಾಳಿ ನಡೆದಿದೆ. ನ್ಯಾಯಾಂಗ, ಅಧಿಕಾರಶಾಹಿ ಮತ್ತು ಮಾಧ್ಯಮಗಳ ಮೇಲೆ ದಾಳಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಮರಳಿದ ನಂತರ ಈ ಸಂಸ್ಥೆಗಳನ್ನು ಆರ್ಎಸ್ಎಸ್ ಹಿಡಿತದಿಂದ ಮುಕ್ತಗೊಳಿಸಲಾಗುವುದು ಮತ್ತು ಈ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದನ್ನು ನಾವು ಭರವಸೆ ನೀಡುತ್ತೇವೆ" ಎಂದು ಹೇಳಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications