ಜೈಲಿಗೆ ಹೋಗಿ ಬಂದ ಉಮರ್ ಖಾಲೀದ್ ಹೇಳಿದ್ದೇನು?
ನವದೆಹಲಿ, ಮಾರ್ಚ್.19: ದೆಹಲಿ ಜವಾಹರಲಾಲ್ ವಿವಿ ವಿವಾದ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ದೇಶದ್ರೋಹದ ಆರೋಪದ ಮೇಲೆ ಜೈಲು ಸೇರಿದ್ದವರು ಜಾಮೀನಿನ ಮೇಲೆ ಹೊರಬಂದ ತಕ್ಷಣ ಪುಂಖಾನುಪುಂಖ ಭಾಷಣ ಬಿಗಿಯುತ್ತಿದ್ದಾರೆ.
ಜೈಲಿನಿಂದ ಬಂದ ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯಾ ಕುಮಾರ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ. ಇದೀಗ ಜೈಲಿನಿಂದ ಹೊರಬಂದ ಉಮರ್ ಖಾಲೀದ್ ಕೂಡ ಮಾತನಾಡಿದ್ದಾನೆ.[ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?]
ದೇಶದ್ರೋಹದ ಆರೋಪದಲ್ಲಿ ಜೈಲಿಗೆ ಹೋದದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ, ನಮ್ಮ ಒಗ್ಗಟ್ಟು ಮುರಿಯಲು ಅನೇಕರು ಮಾಡಿದ ಪ್ರಯತ್ನಗಳು ವಿಫಲವಾಗಿದೆ ಎಂದು ಹೇಳಿದ್ದಾನೆ.

ದೇಶದ್ರೋಹದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿರುವ ಖ್ಯಾತ ಲೇಖಕಿ, ಹೋರಾಟಗಾರ್ತಿ ಅರುಂದತಿ ರಾಯ್ ಮತ್ತು ಬಿನಾಯಕ್ ಸೇನ್ ಅವರ ಸಾಲಿಗೆ ನಾವೀಗ ಸೇರಿದ್ದೇವೆ ಎಂದು ಜಾಮೀನಿನ ಮೇಲೆ ಹೊರಬಂದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಇಬ್ಬರು ಹೇಳಿದ್ದಾರೆ.
ಜೆಎನ್ಯು ಕ್ಯಾಂಪಸ್ನಲ್ಲಿ ಸುಮಾರು 35 ನಿಮಿಷಗಳ ಕಾಲ ಭಾಷಣ ಮಾಡಿದ ಉಮರ್ ಖಾಲಿದ್, ಪ್ರವೀಣ್ ತೊಗಾಡಿಯಾ, ಯೋಗಿ ಆದಿತ್ಯನಾಥ್ ಮೊದಲಾದವರಿಗೆಲ್ಲ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಅಂದ ಮೇಲೆ ನಮಗೂ ಇರಬೇಕಲ್ಲವೇ? ನನಗೆ ಭಯೋತ್ಪಾದಕನೆಂಬ ಹಣೆ ಪಟ್ಟಿ ಹಚ್ಚಲಾಗಿದೆ. ಇದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲಲ್ಲ ಎಂದು ಹೇಳಿದ್ದಾನೆ.[ಎಬಿವಿಪಿ ತೊರೆದವರು ದೆಹಲಿಯಲ್ಲಿ ಮನುಸ್ಮೃತಿ ಸುಟ್ಟರು]
ಸುಮಾರು ಎರಡೂವರ ಸಾವಿರಕ್ಕೂ ಅಧಿಕ ಜೆ ಎನ್ ಯು ವಿದ್ಯಾರ್ಥಿಗಳು ಖಲೀದ್ ಭಾಷಣಕ್ಕೆ ಸಾಕ್ಷಿಯಾದರು. ಇದೆ ವೇಳೆ ಹಾಜರಿದ್ದ ಖಲೀದ್ 12 ವರ್ಷದ ಸಹೋದರಿ ನಮ್ಮ ಸಹೋದರರು ವಾಪಸ್ ಬಂದಿರುವುದು ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿದಳು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications