ಜೈಲಿಗೆ ಹೋಗಿ ಬಂದ ಉಮರ್ ಖಾಲೀದ್ ಹೇಳಿದ್ದೇನು?
ನವದೆಹಲಿ, ಮಾರ್ಚ್.19: ದೆಹಲಿ ಜವಾಹರಲಾಲ್ ವಿವಿ ವಿವಾದ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ದೇಶದ್ರೋಹದ ಆರೋಪದ ಮೇಲೆ ಜೈಲು ಸೇರಿದ್ದವರು ಜಾಮೀನಿನ ಮೇಲೆ ಹೊರಬಂದ ತಕ್ಷಣ ಪುಂಖಾನುಪುಂಖ ಭಾಷಣ ಬಿಗಿಯುತ್ತಿದ್ದಾರೆ.
ಜೈಲಿನಿಂದ ಬಂದ ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯಾ ಕುಮಾರ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ. ಇದೀಗ ಜೈಲಿನಿಂದ ಹೊರಬಂದ ಉಮರ್ ಖಾಲೀದ್ ಕೂಡ ಮಾತನಾಡಿದ್ದಾನೆ.[ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?]
ದೇಶದ್ರೋಹದ ಆರೋಪದಲ್ಲಿ ಜೈಲಿಗೆ ಹೋದದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ, ನಮ್ಮ ಒಗ್ಗಟ್ಟು ಮುರಿಯಲು ಅನೇಕರು ಮಾಡಿದ ಪ್ರಯತ್ನಗಳು ವಿಫಲವಾಗಿದೆ ಎಂದು ಹೇಳಿದ್ದಾನೆ.

ದೇಶದ್ರೋಹದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿರುವ ಖ್ಯಾತ ಲೇಖಕಿ, ಹೋರಾಟಗಾರ್ತಿ ಅರುಂದತಿ ರಾಯ್ ಮತ್ತು ಬಿನಾಯಕ್ ಸೇನ್ ಅವರ ಸಾಲಿಗೆ ನಾವೀಗ ಸೇರಿದ್ದೇವೆ ಎಂದು ಜಾಮೀನಿನ ಮೇಲೆ ಹೊರಬಂದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಇಬ್ಬರು ಹೇಳಿದ್ದಾರೆ.
ಜೆಎನ್ಯು ಕ್ಯಾಂಪಸ್ನಲ್ಲಿ ಸುಮಾರು 35 ನಿಮಿಷಗಳ ಕಾಲ ಭಾಷಣ ಮಾಡಿದ ಉಮರ್ ಖಾಲಿದ್, ಪ್ರವೀಣ್ ತೊಗಾಡಿಯಾ, ಯೋಗಿ ಆದಿತ್ಯನಾಥ್ ಮೊದಲಾದವರಿಗೆಲ್ಲ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಅಂದ ಮೇಲೆ ನಮಗೂ ಇರಬೇಕಲ್ಲವೇ? ನನಗೆ ಭಯೋತ್ಪಾದಕನೆಂಬ ಹಣೆ ಪಟ್ಟಿ ಹಚ್ಚಲಾಗಿದೆ. ಇದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲಲ್ಲ ಎಂದು ಹೇಳಿದ್ದಾನೆ.[ಎಬಿವಿಪಿ ತೊರೆದವರು ದೆಹಲಿಯಲ್ಲಿ ಮನುಸ್ಮೃತಿ ಸುಟ್ಟರು]
ಸುಮಾರು ಎರಡೂವರ ಸಾವಿರಕ್ಕೂ ಅಧಿಕ ಜೆ ಎನ್ ಯು ವಿದ್ಯಾರ್ಥಿಗಳು ಖಲೀದ್ ಭಾಷಣಕ್ಕೆ ಸಾಕ್ಷಿಯಾದರು. ಇದೆ ವೇಳೆ ಹಾಜರಿದ್ದ ಖಲೀದ್ 12 ವರ್ಷದ ಸಹೋದರಿ ನಮ್ಮ ಸಹೋದರರು ವಾಪಸ್ ಬಂದಿರುವುದು ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿದಳು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications