Breaking; ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲು ವಿರೋಧವೇ ಇಲ್ಲ!
ನವದೆಹಲಿ, ಏಪ್ರಿಲ್ 22; ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಪಕ್ಷದ ಹಲವಾರು ಹಿರಿಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಶುಕ್ರವಾರ ರಾಷ್ಟ್ರೀಯ ವಾಹಿನಿಯೊಂದರ ಜೊತೆ ದಿಗ್ವಿಜಯ್ ಸಿಂಗ್ ಈ ಕುರಿತು ಮಾತನಾಡಿದರು, "ಅವರ ಯೋಜನೆಗಳು, ವಿವರಣೆಗಳು ಉತ್ತಮವಾಗಿವೆ. ಅವರು ಪಕ್ಷ ಸೇರಲು ಪಕ್ಷದ ವಲಯದಲ್ಲಿ ಯಾರ ವಿರೋಧವೂ ಇಲ್ಲ" ಎಂದು ಸ್ಪಷ್ಟಪಡಿಸಿದರು.
"ಅವರು ಅಂಕಿ ಅಂಶಗಳ ಮನುಷ್ಯ. ಕೆಲವು ವಿಚಾರಗಳು ಹೊಸದೇನಲ್ಲ. ನೀವು ವಿಚಾರವನ್ನು ಹೇಗೆ ಪ್ರಸ್ತಾಪಿಸುತ್ತೀರಿ ಮತ್ತು ಜನರು ಅದನ್ನು ಹೇಗೆ ಸ್ವೀಕಾರ ಮಾಡುತ್ತಾರೆ ಎಂಬುದು ಮುಖ್ಯವಾಗುತ್ತದೆ" ಎಂದು ಹೇಳಿದರು.

"ನಾನು ಪ್ರಶಾಂತ್ ಕಿಶೋರ್ ಅವರನ್ನು ಹತ್ತಿರದಿಂದ ಬಲ್ಲೆ. ಅವರ ಜೊತೆ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡಿದ್ದೇನೆ. ಅವರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗಿ ಗುರುತಿಸಿಕೊಂಡಿದ್ದಾರೆ. ಈಗ ಕಾಂಗ್ರೆಸ್ ಪರವಾಗಿ ಮಂಡಿಸಿರುವ ವಿಚಾರಗಳು ಉತ್ತಮವಾಗಿವೆ" ಎಂದು ದಿಗ್ವಿಜಯ್ ಸಿಂಗ್ ತಿಳಿಸಿದರು.
"ಪ್ರಶಾಂತ್ ಕಿಶೋರ್ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ, ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪುರಾತನವಾದ ಅತಿ ದೊಡ್ಡ ಪಕ್ಷವಾಗಿದೆ. ನಾವು ಎಲ್ಲಾ ರೀತಿಯ ಚರ್ಚೆಗೆ ಸಿದ್ಧವಾಗಿದ್ದೇವೆ" ಎಂದರು.
"ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಜೊತೆ ಸಭೆ ನಡೆಸಿದಾಗ ಅವರು ಪಕ್ಷದ ವಿಚಾರದಲ್ಲಿ ಹಲವಾರು ಪ್ರಸ್ತಾವನೆಗಳನ್ನು ಮಂಡಿಸಿದ್ದಾರೆ. 2024ರ ಚುನಾವಣೆಗೆ ಕಾರ್ಯತಂತ್ರವನ್ನು ವಿವರಿಸಿದ್ದಾರೆ" ಎಂದು ದಿಗ್ವಿಜಯ್ ಸಿಂಗ್ ಹೇಳಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications