ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಎಂದಿದ್ದಕ್ಕೆ ರಾಬರ್ಟ್ ಪ್ರತಿಕ್ರಿಯೆ
ನವದೆಹಲಿ, ಫೆಬ್ರವರಿ 25: ಮನಿಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿರುವ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ. ರಾಬರ್ಟ್ ಅವರ ಫೇಸ್ ಬುಕ್ ಪೋಸ್ಟ್, ಮೊರದಾಬಾದಿನಿಂದ ಸ್ಪರ್ಧೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಉಂಟು ಮಾಡಿತ್ತು. ಆದರೆ, ಈ ಬಗ್ಗೆ ರಾಬರ್ಟ್ ಪ್ರತಿಕ್ರಿಯೆ ನೀಡಿದ್ದಾರೆ.
ಎನ್ ಡಿಟಿವಿ ಜತೆ ಮಾತನಾಡಿರುವ ರಾಬರ್ಟ್ ಈ ಸುದ್ದಿಯನ್ನು ಅಲ್ಲಗೆಳೆದಿಲ್ಲ, ಬದಲಿಗೆ ರಾಜಕೀಯ ಪ್ರವೇಶಕ್ಕೆ ಸಮಯ ಇನ್ನು ಕೂಡಿ ಬಂದಿಲ್ಲ ಎಂದಿದ್ದಾರೆ. ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿ, 'ನನಗೆ ಯಾವುದೇ ಆತುರವಿಲ್ಲ, ನಾನು ಅರ್ಹತೆ ಪಡೆದುಕೊಳ್ಳಬೇಕಿದೆ' ಎಂದಿದ್ದಾರೆ.
ರಾಬರ್ಟ್ ವಾದ್ರಾ(50) ಅವರ ಪತ್ನಿ ಪ್ರಿಯಾಂಕಾ ಗಾಂಧಿ ಅವರು ಇತ್ತೀಚೆಗೆ ಸಕ್ರಿಯ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ಉತ್ತರಪ್ರದೇಶ ಪೂರ್ವ ವಿಭಾಗದ ಚುನಾವಣಾ ಉಸ್ತುವಾರಿಯಾಗಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವದ್ರಾ ಅವರಿಗೆ ಜಾರಿ ನಿರ್ದೇಶನಾಲಯವು ಬಿಸಿ ಮುಟ್ಟಿಸಿತ್ತು. ಭೂ ಹಗರಣ, ಮನಿ ಲಾಂಡ್ರಿಂಗ್ ಗೆ ಸಂಬಂಧಿಸಿದಂತೆ ಮೊದಲಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ, ನಂತರ ದೇಶದ ವಿವಿಧೆಡೆ ವಾದ್ರಾ ಅವರ ಆಪ್ತರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು.

ಮನಿಲಾಂಡ್ರಿಂಗ್ ಪ್ರಕರಣದ ಆರೋಪಿ
ಲಂಡನ್ ಮೂಲದ ಸಂಸ್ಥೆಗೆ 17.77 ಕೋಟಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ರಾಬರ್ಟ್ ವಾದ್ರಾ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ಇದೇ ಪ್ರಕರಣದಲ್ಲಿ ವಾದ್ರಾ ಆಪ್ತ ಮನೋಜ್ ಅರೋರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಲಂಡನ್ನಿನಲ್ಲಿ ವಾದ್ರಾ ಹೆಸರಿನಲ್ಲಿ 2 ಮನೆ, 6 ಫ್ಲಾಟ್ ಹಾಗೂ ಇನ್ನಿತರ ಆಸ್ತಿ ಹೊಂದಿದ್ದಾರೆ ಎಂದು ಜಾರಿನಿರ್ದೇಶನಾಲಯ ಮಾಹಿತಿ ಕಲೆ ಹಾಕಿದೆ.

ಸಾರ್ವಜನಿಕರ ಜತೆ ಬೆರೆಯುವೆ
ದೇಶದ ವಿವಿಧೆಡೆ ಅದರಲ್ಲೂ ಉತ್ತರಪ್ರದೇಶದಲ್ಲಿ ಅನೇಕ ಸಭೆ, ಸಮಾರಂಭದಲ್ಲಿ ಪಾಲ್ಗೊಂಡು ಸಾರ್ವಜನಿಕರ ಜೊತೆ ಬೆರೆತಿರುವೆ. ಇಷ್ಟು ವರ್ಷಗಳ ಅನುಭವವನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಲು ದೊಡ್ಡ ವೇದಿಕೆ ಬೇಕಾಗುತ್ತದೆ. ಜನಸೇವೆಗೆ ನಾನು ಸಿದ್ಧ ಎಂಬರ್ಥದಲ್ಲಿ ಫೇಸ್ ಬುಕ್ ನಲ್ಲಿ ರಾಬರ್ಟ್ ವಾದ್ರಾ ಬರೆದುಕೊಂಡಿದ್ದರು.

ಮನಿಲಾಂಡ್ರಿಂಗ್ ತನಿಖೆ ಬಗ್ಗೆ
ಕಳೆದ ಒಂದು ದಶಕದಿಂದ ಸರ್ಕಾರಗಳು ನನ್ನ ಹಿಂದೆ ಬಿದ್ದಿವೆ. ದೇಶದ ಅನೇಕ ದೊಡ್ಡ ಸಮಸ್ಯೆಗಳತ್ತ ಇರುವ ಗಮನವನ್ನು ಬೇರೆಡೆಗೆ ತಿರುಗಿಸಲು ನನ್ನನ್ನು ಬಲಿಪಶು ಮಾಡಲಾಗುತ್ತಿದೆ. ಸತ್ಯ ಹೊರ ಬಂದ ಮೇಲೆ ಎಲ್ಲಾ ತಿಳಿಯುತ್ತದೆ. ಜನರು ನನಗೆ ಗೌರವ ನೀಡಿ, ನನ್ನ ಭವಿಷ್ಯಕ್ಕಾಗಿ ಶುಭ ಹಾರೈಸುತ್ತಿದ್ದಾರೆ ಎಂದು ರಾಬರ್ಟ್ ಹೇಳಿದ್ದಾರೆ.
|
ಕಾಂಗ್ರೆಸ್ಸಿನ ಹೊಸ ಪ್ರಧಾನಿ ಅಭ್ಯರ್ಥಿ
ಕಾಂಗ್ರೆಸ್ಸಿನ ಹೊಸ ಪ್ರಧಾನಿ ಅಭ್ಯರ್ಥಿಯನ್ನು ಪರಿಚಯಿಸುತ್ತಿದ್ದೇವೆ ನೋಡಿ ಎಂದು ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧ ಎಂಬ ಸುದ್ದಿಯನ್ನು ಟ್ವೀಟ್ ಮಾಡಿರುವ ಬಿಜೆಪಿ, ರಾಬರ್ಟ್ ಇಸ್ ರೆಡಿ ಎಂಬ ಹ್ಯಾಶ್ ಟ್ಯಾಗ್ ಹಾಕಿದೆ. ಪ್ರಧಾನಿ ಪಟ್ಟಕ್ಕಾಗಿ ಅವರ ಕುಟುಂಬದಲ್ಲೇ ಕಿತ್ತಾಟ ನಡೆಯಬಹುದು ಎಂಬ ಪ್ರತಿಕ್ರಿಯೆ ಬಂದಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications