ಒಡಿಶಾ: ಭೂಮಿ ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ಸಿಗುವವರೆಗೆ ಜಿಲ್ಲಾಧಿಕಾರಿಗೆ ಸಂಬಳವಿಲ್ಲ ಎಂದ ಹೈಕೋರ್ಟ್
ಭುವನೇಶ್ವರ, ಜ. 23: ಜಮೀನು ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ನೀಡುವವರೆಗೂ ಜಿಲ್ಲಾಧಿಕಾರಿಗಳಿಗೆ ಸಂಬಳ ನೀಡದಂತೆ ಹೈಕೋರ್ಟ್ ಆದೇಶಿಸಿರುವ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ.
ಹೌದು, ಆರು ದಶಕಗಳ ಹಿಂದೆ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ 188 ಗ್ರಾಮಸ್ಥರು ಪರಿಹಾರ ಪಡೆಯುವವರೆಗೆ ಅಂಗುಲ್ ಜಿಲ್ಲಾಧಿಕಾರಿಗಳು ಮತ್ತು ಇತರ ಇಬ್ಬರು ಸಿಬ್ಬಂದಿಯ ವೇತನವನ್ನು ತಡೆಹಿಡಿಯುವಂತೆ ಒರಿಸ್ಸಾ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಒರಿಸ್ಸಾ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಬಿ.ಆರ್.ಸಾರಂಗಿ ಮತ್ತು ಬಿ.ಪಿ.ಸತಪತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಐತಿಹಾಸಿಕ ತೀರ್ಪು ನೀಡಿದೆ. ಕುಕುರಪೇಟ ಕಿರು ನೀರಾವರಿ ಯೋಜನೆ ನಿರ್ಮಾಣದ ನಂತರ 188 ಗ್ರಾಮಸ್ಥರ ಜಮೀನು ಮುಳುಗಡೆಯಾಗಿದೆ. ಈ ಗ್ರಾಮಸ್ಥರಿಗೆ ಈವರೆಗೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಇವರೆಲ್ಲರು ಪರಿಹಾರ ಪಡೆಯುವವರೆಗೆ ಜಿಲ್ಲಾಧಿಕಾರಿಗಳ ವೇತನವನ್ನು ನಿಲ್ಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

1961ರಲ್ಲಿ ಭೂಸ್ವಾಧೀನಪಡಿಸಿಕೊಂಡು 60 ವರ್ಷಗಳು ಕಳೆದರೂ ಇಲ್ಲಿಯವರೆಗೆ ಅರ್ಜಿದಾರರಿಗೆ ಪರಿಹಾರ ಮೊತ್ತ ಪಾವತಿಯಾಗದ ಕಾರಣ ಈ ನ್ಯಾಯಾಲಯವು ಜಿಲ್ಲಾಧಿಕಾರಿ, ಭೂಸ್ವಾಧೀನಾಧಿಕಾರಿಗಳ ವೇತನ ತಡೆಹಿಡಿದಿದೆ. ಅರ್ಜಿದಾರರಿಗೆ ಪರಿಹಾರ ನೀಡುವವರೆಗೆ ಅಂಗುಲ್ ಜಿಲ್ಲಾ ಪರಿಷತ್ತಿನ ಕಾರ್ಯನಿರ್ವಾಹಕ ಅಧಿಕಾರಿಗೂ ವೇತನ ಬಿಡುಗಡೆ ಮಾಡುವುದಿಲ್ಲ ಎಂದು ಹೈಕೋರ್ಟ್ ಕಟುವಾಗಿ ಎಚ್ಚರಿಕೆ ನೀಡಿ ಆದೇಶಿಸಿದೆ.
ಅಂಗುಲ್ ಜಿಲ್ಲೆಯ ಐದು ಗ್ರಾಮಗಳ ಸಂತ್ರಸ್ತ ಗ್ರಾಮಸ್ಥರು ಕಳೆದ 51 ವರ್ಷಗಳಿಂದ ಸಣ್ಣ ನೀರಾವರಿ ಯೋಜನೆಯಿಂದ ಮುಳುಗಡೆಯಾದ 62 ಎಕರೆ ಭೂಮಿಗೆ ಪರಿಹಾರವನ್ನು ಪಡೆಯಲು ಇನ್ನೂ ಕಾಯುತ್ತಿದ್ದಾರೆ. ಸುಮಾರು ಆರು ದಶಕಗಳ ಹಿಂದಿನಿಂದಲೂ ಇವರಿಗೆ ಪರಿಹಾರ ಮರೀಚಿಕೆಯಾಗಿದೆ.
ಜಮೀನು ಮುಳುಗಡೆಯಾಗಿದ್ದರೂ, ಜಮೀನು ಸ್ವಾಧೀನಪಡಿಸಿಕೊಳ್ಳುವ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸದೇ ಅನ್ಯಾಯ ಮಾಡಿದೆ. ಇದೇ ಕಾರಣಕ್ಕೆ ಇಷ್ಟು ವರ್ಷಗಳ ಕಾಲ ಜಮೀನು ಕಂದಾಯವನ್ನು ಗ್ರಾಮಸ್ಥರ ಹೆಸರಿಗೆ ದಾಖಲಿಸುವುದು ಮುಂದುವರಿದಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications