Get Updates
Get notified of breaking news, exclusive insights, and must-see stories!

ಯಾರ ವಿರುದ್ಧವೂ ರಾಜಕೀಯ ಹುನ್ನಾರವಿಲ್ಲ: ಅಮಿತ್ ಶಾ

ಇತ್ತೀಚೆಗೆ ಲಾಲು ಪ್ರಸಾದ್ ಯಾದವ್ ಮಂತಾದವರ ವಿರುದ್ಧದ ಹಗರಣದ ತನಿಖೆಗಳನ್ನು ಕೇಂದ್ರ ಸರ್ಕಾರವೇ ನಿರ್ದೇಶಿಸುತ್ತಿದೆ ಎಂಬ ಆರೋಪಗಳಿಗೆ ಅಮಿತ್ ಶಾ ನೀಡಿದ ಉತ್ತರವಿದು.

ನವದೆಹಲಿ, ಮೇ 27: ಕೇಂದ್ರ ಸರ್ಕಾರವು ತನ್ನ ಅಧೀನದಲ್ಲಿರುವ ಕೆಲವು ತನಿಖಾ ಸಂಸ್ಥೆಗಳನ್ನು ಉಪಯೋಗಿಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಪಿತೂರಿ ನಡೆಸುತ್ತಿದೆ ಎಂಬ ಆರೋಪವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಳ್ಳಿ ಹಾಕಿದ್ದಾರೆ.

ಈ ಆರೋಪಗಳಿಗೆ ಉತ್ತರ ನೀಡಿದ ಅವರು, ''ನಾವು (ಬಿಜೆಪಿ) ಯಾರ ವಿರುದ್ಧವೂ ಪಿತೂರಿ ಮಾಡುತ್ತಿಲ್ಲ. ಆದರೆ, ಕೆಲವು ವಿರೋಧ ಪಕ್ಷಗಳ ನಾಯಕರು ಈ ಪ್ರಕರಣಗಳನ್ನು ವಿವಾದಾತ್ಮಕವಾಗಿಸಲು ಪ್ರಯತ್ನಿಸುತ್ತಿದ್ದಾರೆ'' ಎಂದು ತಿಳಿಸಿದರು.[ವಿಟಮಿನ್ ಡಿ ಸಿಗಲ್ಲ ಅಂತ ಬುರ್ಖಾ ನಿಷೇಧ ಸರಿಯಾ?]

No vendetta in probes against opposition leaders: Amit Shah

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಕೇಳಿಬಂದಿರುವ 1000 ಕೋಟಿ ರು. ಹಗರಣ, ನಾರದ ಟೇಪ್ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ಹೆಸರುಗಳ ಪ್ರಸ್ತಾಪ - ಇವೇ ಮುಂತಾದ ಪ್ರಕರಣಗಳು ಬೆಳಕಿಗೆ ಬಂದಿದ್ದು ಅವುಗಳ ತನಿಖೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ಕೆಲವು ವಿರೋಧ ಪಕ್ಷಗಳ ನಾಯಕರು, ಈ ತನಿಖೆಗಳನ್ನು ಮೋದಿ ಸರ್ಕಾರವೇ ನಿರ್ದೇಶಿಸುತ್ತಿದೆ ಎಂದು ಹುಯಿಲೆಬ್ಬಿಸಿದ್ದವು. ಇದಕ್ಕೆ ಅಮಿತ್ ಶಾ ಅವರು ಹೀಗೆ ಉತ್ತರಿಸಿದ್ದಾರೆ.[ಮೋದಿ ಸರ್ಕಾರಕ್ಕೆ ಮೂರು ವರ್ಷ: ಫಲ ನೀಡಿದ ಟಾಪ್ 20 ಯೋಜನೆಗಳು]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+