ಗೋ ರಕ್ಷಣೆ ಹೆಸರಲ್ಲಿ ಹಿಂಸಿಸುವವರಿಗೆ ರಕ್ಷಣೆ ಬೇಡ: ಸುಪ್ರೀಂ
ಗೋ ಸಂರಕ್ಷಣೆ ಹೆಸರಿನಲ್ಲಿ ಹಿಂಸೆ ಮಾಡುವವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಜರುಗಿಸಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶ.
ನವದೆಹಲಿ, ಜುಲೈ 21: ಗೋ ರಕ್ಷಣೆಯ ಹೆಸರಿನಲ್ಲಿ ಹಿಂಸೆ ನೀಡುವವರಿಗೆ ಯಾವುದೇ ರಕ್ಷಣೆ ನೀಡಬಾರದೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾದ ಸೂಚನೆ ನೀಡಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರುಳ್ಳ ನ್ಯಾಯಪೀಠ, ಆಯಾ ರಾಜ್ಯಗಳಲ್ಲಿ ಗೋ ಸಾಗಾಣಿಕೆದಾರರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳ ವಿರುದ್ಧ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಹಲ್ಲೆಕೋರರಿಗೆ ರಕ್ಷಣೆ ನೀಡಬಾರದು'' ಎಂದು ಆಗ್ರಹಿಸಿತು.

ಇತ್ತೀಚೆಗೆ, ಗೋವು ಸಾಕಾಣಿಗೆದಾರರ ಮೇಲೆ ಗೋ ಮಾಂಸ ಮಾರಾಟಗಾರರ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತಂತೆ ಬಂದ ದೂರುಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿವರಣೆ ಕೇಳಿತ್ತು.
ಇದಕ್ಕೆ ಉತ್ತರಿಸಿದ್ದ ಕೇಂದ್ರ ಸರ್ಕಾರ, ಆಯಾ ರಾಜ್ಯಗಳ ಕಾನೂನು ಮತ್ತು ಸುವ್ಯವಸ್ಥೆ ಆಯಾ ರಾಜ್ಯಗಳ ಹೊಣೆಗಾರಿಕೆ ಎಂದು ಹೇಳಿತ್ತು. ಸೋಮವಾರದ ವಿಚಾರಣೆಯ ವೇಳೆ ಈ ವಿಚಾರವನ್ನೆತ್ತಿಕೊಂಡ ನ್ಯಾ. ದೀಪಕ್ ಮಿಶ್ರಾ, ಕಾನೂನು ಸುವ್ಯವಸ್ಥೆಯು ಆಯಾ ರಾಜ್ಯ ಸರ್ಕಾರಗಳ ಹೊಣೆಗಾರಿಕೆ ಎಂದೇನೋ ನೀವು (ಕೇಂದ್ರ ಸರ್ಕಾರ) ಹೇಳುತ್ತಿದ್ದೀರಿ. ಆದರೆ, ನೀವು ಗೋ ರಕ್ಷಣೆ ಹೆಸರಿನಲ್ಲಿ ಹಿಂಸಿಸುವವರನ್ನು ಶಿಕ್ಷಿಸುವಿರಾ'' ಎಂದು ಪ್ರಶ್ನಿಸಿದರು.
ತದನಂತರ, ಗೋ ಸಂರಕ್ಷಣೆ ಹೆಸರಿನಲ್ಲಿ ಹಲ್ಲೆ, ಲೂಟಿ, ಹಿಂಸೆ ನೀಡುವವರಿಗೆ ಯಾವುದೇ ರೀತಿಯ ರಕ್ಷಣೆ ನೀಡಕೂಡದೆಂದು ನ್ಯಾಯಾಲಯ ಕಟ್ಟುನಿಟ್ಟಾದ ಆದೇಶ ಹೊರಡಿಸಿತು.
ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಗೋ ಸಂರಕ್ಷಣೆ ಜಾಗೃತಿ ಉದ್ದೇಶಿದಿಂದ ರವಾನಿಸಲ್ಪಡುವ ಸಂದೇಶಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿಯಮಾವಳಿಗಳನ್ನು ರೂಪಿಸಬೇಕೆಂದು ಸರ್ವೋಚ್ಛ ನ್ಯಾಯಾಲಯ ಹೇಳಿತು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications