Noel Tata: ರತನ್ ಟಾಟಾ ಬಳಿಕ ಟಾಟಾ ಸಾಮ್ರಾಜ್ಯಕ್ಕೆ ಇವರೇ ಉತ್ತರಾಧಿಕಾರಿ
ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರು ನಿಧನರಾದ ಒಂದು ದಿನದ ಬಳಿಕ ಅವರ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ರತನ್ ಟಾಟಾ ಅವರ ಮಲಸಹೋದರ ನೋಯಲ್ ಟಾಟಾ ಅವರನ್ನು ಟಾಟಾ ಟ್ರಸ್ಟ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಎನ್ಬಿಸಿ-ಟಿವಿ 18 ವರದಿ ಮಾಡಿದೆ.
ಟಾಟಾ ಗ್ರೂಪ್ನ ಅಧ್ಯಕ್ಷರಾಗಿದ್ದ ರತನ್ ಟಾಟಾ 87ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಗುರುವಾರ ಅವರ ಅಂತ್ಯಕ್ರಿಯೆ ಕಾರ್ಯಗಳನ್ನು ನಡೆಸಲಾಯಿತು. ಶುಕ್ರವಾರ ರತನ್ ಟಾಟಾ ಅವರ ಉತ್ತರಾಧಿಕಾರಿ ನೇಮ ಮಾಡಲು ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆಸಿದ್ದು, ನೋಯಲ್ ಟಾಟಾ ಅವರನ್ನು ಟಾಟಾ ಟ್ರಸ್ಟ್ಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.

ಟಾಟಾ ಟ್ರಸ್ಟ್ ಟಾಟಾ ಸನ್ಸ್ನ 66 ಪ್ರತಿಷತ ಷೇರುಗಳ ಮಾಲೀಕತ್ವ ಹೊಂದಿರುವುದರಿಂದ, ಟಾಟಾ ಸಮೂಹದ ಒಡೆತನ ನೋಯಲ್ ಟಾಟಾ ಅವರಿಗೆ ಸಿಕ್ಕಿದೆ. ಟಾಟಾ ಸನ್ಸ್ ಪ್ರೈ. ಲಿಮಿಟೆಡ್ ಎಲ್ಲಾ ಇತರ ವಿವಿಧ ಟಾಟಾ ಕಂಪನಿಗಳ ಮಾತೃ ಸಂಸ್ಥೆಯಂತೆ ಕೆಲಸ ಮಾಡುತ್ತದೆ.
ಟಾಟಾ ಟ್ರಸ್ಟ್ಸ್, ಶಿಕ್ಷಣ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ. ಇದನ್ನು ಮೊದಲು 1892 ರಲ್ಲಿ ಟಾಟಾ ಸಮೂಹದ ಸಂಸ್ಥಾಪಕ ಜೆಮ್ಶೆಡ್ಜಿ ಟಾಟಾ ಸ್ಥಾಪಿಸಿದರು. ಜೆಮ್ಶೆಡ್ಜಿ ಟಾಟಾ, ಟಾಟಾ ಸಂಸ್ಥೆಯ ಸಂಸ್ಥಾಪಕ ಮತ್ತು ನೋಯೆಲ್ ಮತ್ತು ರತನ್ ಟಾಟಾರ ಮುತ್ತಜ್ಜರಾಗಿದ್ದಾರೆ.
ನೋಯಲ್ ಟಾಟಾ ಯಾರು?
ನೋಯಲ್ ಟಾಟಾ ಅವರು ರತನ್ ಟಾಟಾ ಅವರ ತಂದೆಯ ಎರಡನೇ ಪತ್ನಿಯ ಮಗ. 67 ವರ್ಷದ ನೋಯಲ್ ಟಾಟಾ ಸರ್ ದೊರಾಬ್ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್ ಮಂಡಳಿಗಳ ಟ್ರಸ್ಟಿಗಳಲ್ಲಿ ಒಬ್ಬರು. ನೋಯಲ್ ಟಾಟಾ ಅವರೇ ಟಾಟಾ ಸಂಸ್ಥೆಯ ಮುಂದಿನ ಉತ್ತರಾಧಿಕಾರಿ ಎನ್ನುವುದು ಬಹುತೇಕ ಸ್ಪಷ್ಟವಾಗಿತ್ತಾದರೂ, ಇಂದು ಅಧಿಕೃತವಾಗಿ ಘೋಷಣೆಯಾಗಿದೆ.
ನೋಯಲ್ ಟಾಟಾ ಹಲವು ವರ್ಷಗಳಿಂದ ಟಾಟಾ ಗ್ರೂಪ್ನ ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಟೈಟಾಟ ಮತ್ತು ಟಾಟಾ ಸ್ಟೀಲ್ ಸಂಸ್ಥೆಗಳಿಗೆ ವೈಸ್ ಛೇರ್ಮನ್ ಕೂಡ ಆಗಿದ್ದಾರೆ. ಮುಖ್ಯವಾಗಿ ಫ್ಯಾಷನ್ ವಲಯದಲ್ಲಿ ಕೆಲಸ ಮಾಡುವ ಟ್ರೆಂಟ್ ಸಂಸ್ಥೆಯ ಅಧ್ಯಕ್ಷರಾಗಿ ನೋಯಲ್ ಟಾಟಾ ಕೆಲಸ ಮಾಡುತ್ತಿದ್ದಾರೆ.ವೋಲ್ಟಾಸ್ ಸಂಸ್ಥೆಯ ಮಂಡಳಿಯಲ್ಲಿ ಕೂಡ ಸ್ಥಾನ ಹೊಂದಿದ್ದು, ಟಾಟಾ ಇನ್ವೆಸ್ಟ್ಮೆಂಟ್ ಕಾರ್ಪೊರೇಶನ್ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ.
2010-11ರಲ್ಲಿ ನೋಯಲ್ ಅವರನ್ನು ಟಾಟಾ ಇಂಟರ್ನ್ಯಾಷನಲ್ನ ಎಂಡಿಯಾಗಿ ನೇಮಿಸಲಾಗಿತ್ತು. ಬ್ರಿಟನ್ ಮತ್ತು ಫ್ರಾನ್ಸ್ನಲ್ಲಿ ಉನ್ನತ ವ್ಯಾಸಂಗ ಮಾಡಿರುವ ನೋಯಲ್ ಟಾಟಾ, ಮೊದಲು ಬ್ರಿಟನ್ನ ನೆಸ್ಲೆ ಸಂಸ್ಥೆಯಲ್ಲಿ ಕೆಲಸ ಮಾಡಿದ್ದರು. ಅದಾದ ಬಳಿಕ ಟಾಟಾ ಗ್ರೂಪ್ನ ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications