Ganja Home Delivery: ಆಪ್ ಮೂಲಕ ಗಾಂಜಾ ಹೋಂ ಡೆಲಿವರಿ, ಖತರ್ನಾಕ್ ಗ್ಯಾಂಗ್ ಸಿಕ್ಕಿಬಿದ್ದಿದ್ದೇಗೆ?
ಮಾದಕ ವಸ್ತು ಗಾಂಜಾ ಆರೋಗ್ಯಕ್ಕೆ ಹಾನಿಕಾರಕ. ಅಲ್ಲದೆ ಇದನ್ನು ಸೇವಿಸುವುದು ಕಾನೂನುಬಾಹಿರ ಕೂಡ. ಆದರೆ ಈಗಿನ ಯುವಜನರು ಅಕ್ರಮವಾಗಿ ಗಾಂಜಾ ತರಿಸಿಕೊಂಡು ಎಂಜಾಯ್ ಮಾಡುತ್ತಾರೆ. ಇದರ ಹಿಂದೆ ದೊಡ್ಡ ದಂಧೆಯೇ ಇದ್ದು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುವ ಭೂಪರೂ ಇದ್ದಾರೆ. ಆದರೆ, ಯಾರಿಗೂ ಅನುಮಾನ ಬಾರದಂತೆ ಆನ್ಲೈನ್ ಮೂಲಕವೇ ಬಾಗಿಲಿಗೆ ಗಾಂಜಾ ಡೆಲಿವರಿ ನೀಡುತ್ತಿದ್ದ ಜಾಲವನ್ನು ಪೊಲೀಸರು ಹತ್ತಿಕ್ಕಿದ್ದಾರೆ. ಇದಕ್ಕಾಗಿ ಒಂದು ಆಪ್ ಬಳಕೆ ಮಾಡುತ್ತಿರುವುದನ್ನು ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
ಕೆಲ ಪೆಡ್ಲರ್ಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುವಾಗ ಪೊಲೀಸರ ಕೈಗೆ ಸಿಕ್ಕಿಬೀಳುವ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಈಗೆಲ್ಲ ಹೋಂ ಡೆಲಿವರಿ ಜಮಾನ ಆಗಿರುವ ಕಾರಣ ತಂತ್ರಜ್ಞಾನದ ದುರ್ಬಳಕೆ ಮಾಡಿಕೊಂಡು ಗಾಂಜಾ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ. ಸಿಂಪಲ್ಲಾಗಿ ಫೋನಿನ ಮೂಲಕವೇ ಗಾಂಜಾ ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಗ್ರಾಹಕರನ್ನು ಪತ್ತೆ ಮಾಡಿ, ನಂತರ ಯುಪಿಐ ಅಪ್ಲಿಕೇಶನ್ ಮೂಲಕ ಹಣ ಪಾವತಿ ಮಾಡಿಕೊಳ್ಳುತ್ತಿದ್ದರು. ನಂತರ ಕೊರಿಯರ್ ಅಪ್ಲಿಕೇಶನ್ ಬಳಸಿ ಅವರ ಮನೆಗೆ ಗಾಂಜಾ ತಲುಪಿಸುತ್ತಿದ್ದ ಗ್ಯಾಂಗ್ ಅನ್ನು ನೋಯ್ಡಾ ಪೊಲೀಸರು ಲಾಕ್ ಮಾಡಿದ್ದಾರೆ.
ಜನಪ್ರಿಯ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ಪ್ಯಾಕಿಂಗ್ ವ್ಯವಸ್ಥೆಯಲ್ಲಿ ಗಾಂಜಾವನ್ನು ಅಚ್ಚುಕಟ್ಟಾಗಿ ತಲುಪಿಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಅಕ್ರಮ ಗಾಂಜಾ ಮಾರಾಟಕ್ಕೆ ಈ ಗ್ಯಾಂಗ್ ನಕಲಿ ಬಿಲ್ಗಳನ್ನು ತಯಾರಿಸಿದೆ. ಆದರೆ ಡೆಲಿವರಿ ಮಾಡುವ ವ್ಯಕ್ತಿಗೆ ಅದರಲ್ಲಿರುವುದು ಗಾಂಜಾ ಎನ್ನುವುದು ತಿಳಿಯುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ.
ಯಾರೆಲ್ಲ ಗ್ರಾಹಕರು?
ಈ ಗ್ಯಾಂಗ್ ಸದಸ್ಯರು ಕಾಲೇಜುಗಳು ಮತ್ತು ಕಾರ್ಪೊರೇಟ್ ಕಚೇರಿಗಳ ಬಳಿ ತೆರಳಿ ಗಾಂಜಾ ಖರೀದಿದಾರರನ್ನು ಸಂಪರ್ಕಿಸುತ್ತಿದ್ದರು. ಆಸಕ್ತರಿಗೆ ತಮ್ಮ ಫೋನ್ ನಂಬರ್ ನೀಡುತ್ತಿದ್ದರು. ನಂತರ ಸಂಪೂರ್ಣವಾಗಿ ಆನ್ಲೈನ್ ಪೇಮೆಂಟ್ ಮೂಲಕ ಹಣ ಪಡೆಯುತ್ತಿದ್ದರು. ಗ್ರಾಹಕರು ಡೆಲಿವರಿ ಅಪ್ಲಿಕೇಶನ್ಗಳನ್ನ ಬಳಸಿ ತಮ್ಮ ಆರ್ಡರ್ ಮಾಡುತ್ತಿದ್ದರು. ಇ-ಕಾಮರ್ಸ್ ಕಂಪನಿಗಳ ನಕಲಿ ವಸ್ತುಗಳನ್ನು ಬಳಸುತ್ತಿದ್ದರು ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಒಂದು ಕೊರಿಯರ್ ಅನ್ನು ಎಂದಾದರೂ ತಡೆದರೆ, ಡೆಲಿವರಿ ಮಾಡುವ ವ್ಯಕ್ತಿಯೇ ಇದರಲ್ಲಿ ಆರೋಪಿಯಾಗಿ ಸಿಕ್ಕಿಬೀಳುತ್ತಾನೆ ಎಂಬುದು ಅವರ ಪ್ಲ್ಯಾನ್ ಆಗಿತ್ತು ಎನ್ನಲಾಗಿದೆ. ಈ ಜಾಲವನ್ನು ಬೆನ್ನತ್ತಿದಾಗ ಮಾಸ್ಟರ್ ಮೈಂಡ್ ಹಾಗೂ ಇಬ್ಬರನ್ನು ಬಂಧಿಸಿ 10 ಕೆ.ಜಿಯಷ್ಟು ಗಾಂಜಾ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ ಸುಮಾರು ₹30 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications