Noida Protest: ಹಿಂಸಾಚಾರಕ್ಕೆ ತಿರುಗಿದ ನೋಯ್ಡಾ ಕಾರ್ಮಿಕರ ಪ್ರತಿಭಟನೆ; ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ
ಉತ್ತರ ಪ್ರದೇಶ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ನೋಯ್ಡಾದ ಫೇಸ್-2 ವ್ಯಾಪ್ತಿಯ ಹೋಸಿಯರಿ ಕಾಂಪ್ಲೆಕ್ಸ್ನಲ್ಲಿ ಇಂದು (ಸೋಮವಾರ) ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆಯು ಭೀಕರ ಹಿಂಸಾಚಾರಕ್ಕೆ ತಿರುಗಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ್ದಲ್ಲದೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂಸಾಚಾರಕ್ಕೆ ಕಾರಣವೇನು?
ಇಲ್ಲಿನ ಹೋಸಿಯರಿ ಕಾಂಪ್ಲೆಕ್ಸ್ ಭಾಗದ ವಿವಿಧ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೂರಾರು ಕಾರ್ಮಿಕರು ತಮ್ಮ ಮಾಸಿಕ ವೇತನವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಕಾರ್ಖಾನೆ ಮಾಲೀಕರು ಅಥವಾ ಅಧಿಕಾರಿಗಳೊಂದಿಗೆ ನಡೆದ ಸಂಘರ್ಷವು ಕೈಮೀರಿ ಹೋಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಸಿಟ್ಟಿಗೆದ್ದ ಪ್ರತಿಭಟನಾಕಾರರು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ಖಾಸಗಿ ಮತ್ತು ಸಾರ್ವಜನಿಕ ವಾಹನಗಳನ್ನು ಜಖಂಗೊಳಿಸಿದ್ದಾರೆ. ಪ್ರತಿಭಟನೆಯ ತೀವ್ರತೆ ಎಷ್ಟಿತ್ತೆಂದರೆ, ಪ್ರತಿಭಟನಾಕಾರರು ವಾಹನಗಳನ್ನು ಸಂಪೂರ್ಣವಾಗಿ ಸುಟ್ಟು ಹಾಕಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದಾಗ, ಕಾರ್ಮಿಕರು ಪೊಲೀಸರು ಹಾಗೂ ಕಾರ್ಖಾನೆಗಳ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಬಿಗಿ ಬಂದೋಬಸ್ತ್
ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿರುವ ನೋಯ್ಡಾ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಹೋಸಿಯರಿ ಕಾಂಪ್ಲೆಕ್ಸ್ ಸುತ್ತಮುತ್ತುವರೆದಿರುವ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಹಿಂಸಾಚಾರದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಈ ಘಟನೆಯಿಂದಾಗಿ ಇಡೀ ಫೇಸ್-2 ಪ್ರದೇಶದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಉದ್ಯಮ ಸಂಸ್ಥೆಗಳು ತಾತ್ಕಾಲಿಕವಾಗಿ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸಿವೆ.
ವೇತನ ಹೆಚ್ಚಳಕ್ಕಾಗಿ ನೋಯ್ಡಾದಲ್ಲಿ ನಡೆಯುತ್ತಿರುವ ಕಾರ್ಮಿಕರ ಪ್ರತಿಭಟನೆ ಕೇವಲ ಆಸ್ತಿಪಾಸ್ತಿ ಹಾನಿಗೆ ಸೀಮಿತವಾಗದೆ, ಕೈಗಾರಿಕಾ ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಸಿದೆ. ಘರ್ಷಣೆಯ ವೇಳೆ ಪ್ರತಿಭಟನಾಕಾರರು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದು, ಇಡೀ ಪ್ರದೇಶವು ರಣರಂಗದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಮಿಕರ ಈ ಬೃಹತ್ ಪ್ರತಿಭಟನೆಯಿಂದಾಗಿ ನೋಯ್ಡಾದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಕೆಲಸಕ್ಕೆ ತೆರಳುವವರು ಮತ್ತು ಶಾಲಾ ವಾಹನಗಳು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿದ್ದವು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.

ಪ್ರಮುಖ ಬೇಡಿಕೆಗಳು
ಕೇವಲ ವೇತನ ಹೆಚ್ಚಳ ಮಾತ್ರವಲ್ಲದೆ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಆಡಳಿತದೊಂದಿಗೆ ನಡೆಯುತ್ತಿರುವ ಸುದೀರ್ಘ ಚರ್ಚೆಗಳ ಭಾಗವಾಗಿ ಕಾರ್ಮಿಕರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಹೆಚ್ಚುವರಿ ಕೆಲಸದ ಅವಧಿಗೆ ನ್ಯಾಯಯುತ ವೇತನ ನೀಡಬೇಕು. ಬಾಕಿ ಇರುವ ಬೋನಸ್ಗಳ ಪಾವತಿ ಮತ್ತು ಕಡ್ಡಾಯ ವಾರದ ರಜೆ ನೀಡಬೇಕು. ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ಮಿಕ ಪ್ರತಿಭಟನೆಗೂ ಮುನ್ನವೇ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರು ರಾಜ್ಯದ ಪ್ರಧಾನ ಕಾರ್ಯದರ್ಶಿ (ಕಾರ್ಮಿಕ) ಮತ್ತು ಕಾರ್ಮಿಕ ಆಯುಕ್ತರೊಂದಿಗೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಾರ್ಮಿಕರ ಹಕ್ಕುಗಳು ಮತ್ತು ಕೈಗಾರಿಕಾ ವಲಯದಲ್ಲಿ ಶಾಂತಿ ಕಾಪಾಡುವ ಬಗ್ಗೆ ಗಂಭೀರ ಚರ್ಚೆಗಳು ನಡೆದಿದ್ದವು. ಇಷ್ಟೆಲ್ಲಾ ಸಮಾಲೋಚನೆಗಳ ನಡುವೆಯೇ ಸೋಮವಾರ ಪ್ರತಿಭಟನೆ ಹಿಂಸಾ ರೂಪ ಪಡೆದಿರುವುದು ಆಡಳಿತ ಮಂಡಳಿಯನ್ನು ಚಿಂತೆಗೀಡುಮಾಡಿದೆ. ಸದ್ಯ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ.
-
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications