ಜಾಕಿರ್ ನಾಯಕ್ ವಿರುದ್ಧ ಜಾಮೀನು ರಹಿತ ವಾರೆಂಟ್
ಜಾರಿ ನಿರ್ದೇಶನಾಲಯವು ಜಾಕಿರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸುವಂತೆ ಮುಂಬೈನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಹಾಗಾಗಿ, ಆತನ ವಿರುದ್ಧ ವಾರೆಂಟ್ ಜಾರಿಯಾಗಿದೆ.
ಮುಂಬೈ, ಏಪ್ರಿಲ್ 13: ಆರ್ಥಿಕ ಅವ್ಯವಹಾರಗಳ ಆರೋಪ ಹೊತ್ತಿರುವ ಇಸ್ಲಾಂ ಧರ್ಮ ಬೋಧಕ ಜಾಕಿರ್ ನಾಯಕ್ ಅವರ ವಿರುದ್ಧ ಮುಂಬೈನ ನ್ಯಾಯಾಲಯವು ಗುರುವಾರ, ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಜಾಕಿರ್ ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಆದಾಯ ತೆರಿಗೆ ಇಲಾಖೆಯು ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ನೋಟಿಸ್ ಜಾರಿಗೊಳಿಸಿದ್ದರೂ, ಇದಕ್ಕೆ ಜಾಕಿರ್ ಸಕಾರಾತ್ಮಕವಾಗಿ ಸ್ಪಂದಿಸಿರಲಿಲ್ಲ.

ಈ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯವು ಜಾಕಿರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸುವಂತೆ ಮುಂಬೈನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿರುವ ನ್ಯಾಯಾಲಯ, ಗುರುವಾರ ಆತನ ವಿರುದ್ಧ ವಾರೆಂಟ್ ಜಾರಿಗೊಳಿಸಿದೆ.
ತಮ್ಮ ಮೇಲೆ ಆರ್ಥಿಕ ಅಕ್ರಮಗಳ ಆರೋಪ ಕೇಳಿಬರುತ್ತಲೇ ಸೌದಿ ಅರೇಬಿಯಾದಲ್ಲೇ ಅಡಗಿ ಕುಳಿತಿರುವ ಜಾಕಿರ್, ಭಾರತದಲ್ಲಿ ತಮ್ಮ ಪರವಾರಿ ವಾದ ಮಾಡಲು ವಕೀಲರನ್ನೊಬ್ಬರನ್ನು ನೇಮಿಸಿಕೊಂಡು ಈ ಪ್ರಕರಣದಲ್ಲಿ ಅನೇರವಾಗಿ ವಾದ ಮಂಡಿಸುತ್ತಿದ್ದಾರೆ.
ಮೊದಲು ಆದಾಯ ತೆರಿಗೆ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದಾಗ ಉತ್ತರಿಸಿದ್ದ ಜಾಕಿರ್, ತಾವು ವೀಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು.
ಆದರೆ, ಇಲಾಖೆಯು ಅದಕ್ಕೆ ಒಪ್ಪದೇ, ಖುದ್ದಾಗಿ ಮುಂಬೈನಲ್ಲಿನ ಆದಾಯ ತೆರಿಗೆ ಇಲಾಖೆ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಉತ್ತರ ನೀಡಿತ್ತು.
ಆ ಉತ್ತರ ಬಂದ ನಂತರ ಜಾಕಿರ್ ನಿರುತ್ತರರಾಗಿದ್ದಾರೆ. ಆನಂತರ, ಜಾಕಿರ್ ಅವರಿಗೆ ಕಳುಹಿಸಲಾದ ಯಾವುದೇ ಸಮನ್ಸ್ ಗೆ ಅವರು ಉತ್ತರ ನೀಡಿರಲಿಲ್ಲ. ಹಾಗಾಗಿಯೇ, ಜಾರಿ ನಿರ್ದೇಶನಾಲಯ ನ್ಯಾಯಾಲಯದ ಮೊರೆ ಹೋಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications