Get Updates
Get notified of breaking news, exclusive insights, and must-see stories!

ಬಾಬಾ ರಾಮ್ ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಕಳೆದ ವರ್ಷ ಏಪ್ರಿಲ್ ನಲ್ಲಿ ರೋಹ್ಟಕ್ ನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಮ್ಮೇಳನವೊಂದರಲ್ಲಿ ಭಾಷಣ ಮಾಡುವಾಗ ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಾಬಾ ರಾಮ್ ದೇವ್. ಭಾರತ ಮಾತಾ ಕೀಜೈ ಎನ್ನದವರ ಶಿರಚ್ಛೇದ ಮಾಡಬೇಕೆಂದು ಹೇಳಿದ್ದ ರಾಮ್ ದೇವ್. ಈ ಪ್ರಕರಣ

ರೋಹ್ಟಕ್ (ಹರ್ಯಾಣ), ಜೂನ್ 15: ಕಳೆದ ವರ್ಷ ಇಲ್ಲಿ ಏರ್ಪಡಿಸಲಾಗಿದ್ದ ಶಾಂತಿ ಸಮಾರಂಭವೊಂದರಲ್ಲಿ ಭಾಷಣ ಮಾಡುವಾಗ ಪ್ರಚೋದನಾಕಾರಿ ಮಾತುಗಳನ್ನಾಡಿದ್ದ ಹಿನ್ನೆಲೆಯಲ್ಲಿ ಬಾಬಾ ರಾಮ್ ದೇವ್ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ.

ಇಲ್ಲಿನ ಅಡಿಷನಲ್ ಚೀಫ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಆಗಿರುವ ಹರೀಶ್ ಗೋಯಲ್ ಅವರು, ಈ ವಾರಂಟ್ ಜಾರಿಗೊಳಿಸಿದ್ದಾರೆ.

Non-bailable warrant against Baba Ramdev in beheading remark case

ತಮ್ಮ ಭಾಷಣದ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಪದೇ ಪದೇ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಹಾಗೂ ಈ ಹಿಂದೆ ಜಾರಿಗೊಳಿಸಲಾಗಿದ್ದ ವಾರಂಟ್ ಗೂ ಯಾವುದೇ ರೀತಿಯಲ್ಲಿ ಸ್ಪಂದಿಸದಿದ್ದ ಹಿನ್ನೆಯಲ್ಲಿ ಈ ಬಾರಿ ಬಂಧನ ರಹಿತ ವಾರಂಟ್ ಜಾರಿಗೊಳಿಸಲಾಗಿದೆ.

ಕಳೆದ ವರ್ಷ ಜಾಟ್ ಸಮುದಾಯದ ಮೀಸಲಾತಿ ಹಿನ್ನೆಲೆಯಲ್ಲಿ ರೋಹ್ಟಕ್ ನಲ್ಲಿ ಭಾರೀ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದ್ದವು.

ಅದೆಲ್ಲಾ ಮುಗಿದ ನಂತರ ಕಳೆದ ವರ್ಷ ಏಪ್ರಿಲ್ ನಲ್ಲಿ ಶಾಂತಿ ಸಮ್ಮೇಳನ ಆಯೋಜಿಸಲಾಗಿತ್ತು. ಆ ಸಮ್ಮೇಳನಕ್ಕೆ ಮುಖ್ಯ ಅತಿಥಿಗಳಲ್ಲೊಬ್ಬರಾಗಿ ಬಂದಿದ್ದ ರಾಮ್ ದೇವ್ ಅವರು, ಭಾಷಣದ ವೇಳೆ 'ಭಾರತ್ ಮಾತಾ ಕೀ ಜೈ' ಎಂದು ಹೇಳದ ವ್ಯಕ್ತಿಗಳ ಶಿರಚ್ಛೇದ ಮಾಡಬೇಕು ಎಂದು ತಾಕೀತು ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಇದರಿಂದ ಕುಪಿತಗೊಂಡಿದ್ದ ಹರ್ಯಾಣದ ಮಾಜಿ ಸಚಿವ ಸುಭಾಷ್ ಬಾತ್ರಾ ಅವರು ನ್ಯಾಯಾಲಯದಲ್ಲಿ, ಬಾಬಾ ರಾಮ್ ದೇವ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿ ದೂರು ಸಲ್ಲಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+