ಬಾಬಾ ರಾಮ್ ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಕಳೆದ ವರ್ಷ ಏಪ್ರಿಲ್ ನಲ್ಲಿ ರೋಹ್ಟಕ್ ನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಮ್ಮೇಳನವೊಂದರಲ್ಲಿ ಭಾಷಣ ಮಾಡುವಾಗ ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಾಬಾ ರಾಮ್ ದೇವ್. ಭಾರತ ಮಾತಾ ಕೀಜೈ ಎನ್ನದವರ ಶಿರಚ್ಛೇದ ಮಾಡಬೇಕೆಂದು ಹೇಳಿದ್ದ ರಾಮ್ ದೇವ್. ಈ ಪ್ರಕರಣ
ರೋಹ್ಟಕ್ (ಹರ್ಯಾಣ), ಜೂನ್ 15: ಕಳೆದ ವರ್ಷ ಇಲ್ಲಿ ಏರ್ಪಡಿಸಲಾಗಿದ್ದ ಶಾಂತಿ ಸಮಾರಂಭವೊಂದರಲ್ಲಿ ಭಾಷಣ ಮಾಡುವಾಗ ಪ್ರಚೋದನಾಕಾರಿ ಮಾತುಗಳನ್ನಾಡಿದ್ದ ಹಿನ್ನೆಲೆಯಲ್ಲಿ ಬಾಬಾ ರಾಮ್ ದೇವ್ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ.
ಇಲ್ಲಿನ ಅಡಿಷನಲ್ ಚೀಫ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಆಗಿರುವ ಹರೀಶ್ ಗೋಯಲ್ ಅವರು, ಈ ವಾರಂಟ್ ಜಾರಿಗೊಳಿಸಿದ್ದಾರೆ.

ತಮ್ಮ ಭಾಷಣದ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಪದೇ ಪದೇ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಹಾಗೂ ಈ ಹಿಂದೆ ಜಾರಿಗೊಳಿಸಲಾಗಿದ್ದ ವಾರಂಟ್ ಗೂ ಯಾವುದೇ ರೀತಿಯಲ್ಲಿ ಸ್ಪಂದಿಸದಿದ್ದ ಹಿನ್ನೆಯಲ್ಲಿ ಈ ಬಾರಿ ಬಂಧನ ರಹಿತ ವಾರಂಟ್ ಜಾರಿಗೊಳಿಸಲಾಗಿದೆ.
ಕಳೆದ ವರ್ಷ ಜಾಟ್ ಸಮುದಾಯದ ಮೀಸಲಾತಿ ಹಿನ್ನೆಲೆಯಲ್ಲಿ ರೋಹ್ಟಕ್ ನಲ್ಲಿ ಭಾರೀ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದ್ದವು.
ಅದೆಲ್ಲಾ ಮುಗಿದ ನಂತರ ಕಳೆದ ವರ್ಷ ಏಪ್ರಿಲ್ ನಲ್ಲಿ ಶಾಂತಿ ಸಮ್ಮೇಳನ ಆಯೋಜಿಸಲಾಗಿತ್ತು. ಆ ಸಮ್ಮೇಳನಕ್ಕೆ ಮುಖ್ಯ ಅತಿಥಿಗಳಲ್ಲೊಬ್ಬರಾಗಿ ಬಂದಿದ್ದ ರಾಮ್ ದೇವ್ ಅವರು, ಭಾಷಣದ ವೇಳೆ 'ಭಾರತ್ ಮಾತಾ ಕೀ ಜೈ' ಎಂದು ಹೇಳದ ವ್ಯಕ್ತಿಗಳ ಶಿರಚ್ಛೇದ ಮಾಡಬೇಕು ಎಂದು ತಾಕೀತು ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಇದರಿಂದ ಕುಪಿತಗೊಂಡಿದ್ದ ಹರ್ಯಾಣದ ಮಾಜಿ ಸಚಿವ ಸುಭಾಷ್ ಬಾತ್ರಾ ಅವರು ನ್ಯಾಯಾಲಯದಲ್ಲಿ, ಬಾಬಾ ರಾಮ್ ದೇವ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿ ದೂರು ಸಲ್ಲಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications