ಅನಿವಾಸಿ ಭಾರತೀಯರಿಗೆ ಅಂಚೆ ಮತದಾನದ ಹಕ್ಕು; ಪ್ರಸ್ತಾವಕ್ಕೆ ಒಪ್ಪಿಗೆ
ನವದೆಹಲಿ, ಡಿಸೆಂಬರ್ 15: ಅನಿವಾಸಿ ಭಾರತೀಯರಿಗೆ ಅಂಚೆ ಮತದಾನದ ಹಕ್ಕು ನೀಡುವಂತೆ ಚುನಾವಣಾ ಆಯೋಗವು ಪ್ರಸ್ತಾವವನ್ನು ಸಲ್ಲಿಸಿದ್ದು, ಅಮೆರಿಕ, ಕೆನಡಾ, ನ್ಯೂಜಿಲೆಂಡ್, ಜಪಾನ್, ಆಸ್ಟ್ರೇಲಿಯಾ, ಜರ್ಮನಿ, ಫ್ರಾನ್ಸ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಮತದಾರರಿಂದ ಮೊದಲು ಕಾರ್ಯಗತಗೊಳ್ಳಲಿರುವುದಾಗಿ ತಿಳಿದುಬಂದಿದೆ.
ಚುನಾವಣಾ ಆಯೋಗ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಕುರಿತು ಕಳೆದ ವಾರ ಸಭೆಯನ್ನು ಹಮ್ಮಿಕೊಂಡಿದ್ದು, ಅನಿವಾಸಿ ಭಾರತೀಯರ ಅಂಚೆ ಮತದಾನಕ್ಕೆ ಅನುಕೂಲವಾಗುವಂತೆ ವಿದೇಶಗಳಲ್ಲಿ ಕಾರ್ಯಾಚರಣೆಗೆ ಅಗತ್ಯವಿರುವ ಅಧಿಕಾರಿಗಳನ್ನು ಒದಗಿಸುವ ಷರತ್ತಿನ ಅನ್ವಯ ಒಪ್ಪಿಗೆ ನೀಡಿರುವುದಾಗಿ ತಿಳಿದುಬಂದಿದೆ.
ಪ್ರಾಯೋಗಿಕ ಹಂತದಲ್ಲಿ ಯಾವ ದೇಶಗಳಲ್ಲಿ ನೆಲೆಸಿರುವ ಭಾರತೀಯರಿಗೆ ಮೊದಲು ಅಂಚೆ ಮತದಾನದ ಹಕ್ಕು ನೀಡಬೇಕೆಂಬುದನ್ನು ತಜ್ಞರ ತಂಡವು ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಸೂಚಿಸಿದೆ. ಸದ್ಯಕ್ಕೆ ಕೊಲ್ಲಿ ರಾಷ್ಟಗಳು ಈ ಪ್ರಾಯೋಗಿಕ ಹಂತದಲ್ಲಿ ಹೊರಗುಳಿದಿವೆ.

ಪ್ರಜಾಪ್ರಭುತ್ವ ವ್ಯವಸ್ಥೆಯಿಲ್ಲದ ದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರಿಗೆ, ಅಲ್ಲಿನ ಆಡಳಿತದ ಒಪ್ಪಿಗೆ ಪಡೆದ ನಂತರ ಮುಂದೆ ಮೀಸಲು ನೀಡಲಿರುವುದಾಗಿ ತಿಳಿಸಿದೆ.
ಚುನಾವಣಾ ಆಯೋಗವು ಅಂಚೆ ಮತದಾನಕ್ಕೆ ಒಬ್ಬರು ಅಧಿಕಾರಿಯನ್ನು ನಿಯೋಜಿಸಿ ಅವರು ಈ ಮತಪತ್ರಗಳನ್ನು ಡೌನ್ ಲೋಡ್ ಮಾಡಿ ಮತದಾರರಿಗೆ ತಲುಪಿಸುವ ಕೆಲಸವನ್ನು ಮಾಡಲಿರುವರು. ಆನಂತರ ಮತದಾರರು ತಮ್ಮ ಆಯ್ಕೆಯನ್ನು ನಮೂದಿಸಿ, ಅದರೊಂದಿಗೆ ಸ್ವಯಂ ಘೋಷಣೆಯ ಅರ್ಜಿಯನ್ನು ಆ ನಿಯೋಜಿತ ಅಧಿಕಾರಿಗಳಿಗೆ ಹಸ್ತಾಂತರಿಸಲಿರುವರು. ಅಂತಿಮವಾಗಿ ಚುನಾವಣಾ ಅಧಿಕಾರಿಗೆ ಈ ಅಂಚೆ ಮತದಾನದ ಪತ್ರಗಳನ್ನು ತಲುಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಈ ಮುನ್ನವೂ ಚುನಾವಣಾ ಆಯೋಗ, ಚುನಾವಣೆಯ ಕಾರಣಕ್ಕಾಗಿ ವಿದೇಶಗಳಿಂದ ಭಾರತಕ್ಕೆ ಪ್ರಯಾಣಿಸುವುದು "ದುಬಾರಿ" ಎನಿಸಿದ್ದು, ಅಂಚೆ ಮತದಾನದ ಮೂಲಕ ಅನುಕೂಲ ಮಾಡಿಕೊಡುವಂತೆ ಅನಿವಾಸಿ ಭಾರತೀಯರು ಮನವಿ ಮಾಡಿರುವುದಾಗಿ ತಿಳಿಸಿತ್ತು.
ಆನಂತರ ಅನಿವಾಸಿ ಭಾರತೀಯರಿಗೆ ವಿದ್ಯುನ್ಮಾನ ಅಂಚೆ ಮತದಾನದ ವ್ಯವಸ್ಥೆ (ಇಟಿಪಿಬಿಎಸ್) (Electronically Transmitted Postal Ballot System-ETPBS) ಒದಗಿಸಲು ತಾಂತ್ರಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಸಿದ್ಧವಿದ್ದು, ಮುಂದಿನ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ಚುನಾವಣೆಗಳಿಗೆ ಸಿದ್ಧವಾಗಬಹುದೆಂದು ತಿಳಿಸಿದೆ.
ಸದ್ಯಕ್ಕೆ ಇಟಿಪಿಬಿಎಸ್ ವ್ಯವಸ್ಥೆಯು ರಕ್ಷಣಾ ಸೇವೆಯಲ್ಲಿರುವವರಿಗೆ ಮಾತ್ರ ಲಭ್ಯವಿದೆ. ಈ ಸೌಲಭ್ಯವನ್ನು ಅನಿವಾಸಿ ಭಾರತೀಯರಿಗೂ ವಿಸ್ತರಿಸುವ ಪ್ರಸ್ತಾವವಿದ್ದು, ಚುನಾವಣಾ ನಿಯಮ 1961ರಲ್ಲಿ ತಿದ್ದುಪಡಿ ತರಬೇಕಿದೆ.
ಸದ್ಯದ ಪ್ರಸ್ತಾವದ ಪ್ರಕಾರ, ಅಂಚೆ ಮತದಾನ ಬಯಸುವ ಅನಿವಾಸಿ ಭಾರತೀಯರು ಚುನಾವಣೆ ನಡೆಯುವ ಐದು ದಿನದ ಮುನ್ನ ರಿಟರ್ನಿಂಗ್ ಆಫೀಸರ್ ಗೆ ಮಾಹಿತಿ ನೀಡಿದರೆ, ಅವರು ಅಂಚೆ ಮತದಾನಕ್ಕೆ ವ್ಯವಸ್ಥೆಯನ್ನು ಮಾಡಿಕೊಡಲಿರುವರು ಎಂದು ತಿಳಿದುಬಂದಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications