ಅಹಿಂಸೆಯೇ ಪ್ರಜಾಪ್ರಭುತ್ವದ ದೊಡ್ಡ ಶಕ್ತಿ: ಯೋಗಿ ಆದಿತ್ಯನಾಥ್
ಲಕ್ನೋ, ಅಕ್ಟೋಬರ್ 02: ಮಹಾತ್ಮ ಗಾಂಧೀಜಿಯವರ ಅಹಿಂಸೆಯ ಸಂದೇಶವು ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದ್ದಾರೆ.
ಸೋಮವಾರ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಗೋಲ್ಘರ್ನ ಗಾಂಧಿ ಆಶ್ರಮಕ್ಕೆ ಆಗಮಿಸಿ ಚರಕದಲ್ಲಿ ನೂಲುವ ಮೂಲಕ ಬಾಪು ಅವರನ್ನು ಸ್ಮರಿಸಿದರು. ಗಾಂಧಿ ಆಶ್ರಮದಲ್ಲಿ ನೂಲು ನೂಲಿದ ಬಳಿಕ ಖಾದಿ ಉತ್ಪನ್ನಗಳ ಪರಿಶೀಲನೆ ನಡೆಸಿ ಮುಖ್ಯಮಂತ್ರಿಗಳು ಖಾದಿ ಬಟ್ಟೆಗಳನ್ನು ಖರೀದಿಸಿದರು.

ಗಾಂಧಿ ಆಶ್ರಮದಲ್ಲಿ ಮಹಾತ್ಮ ಗಾಂಧಿಯವರ ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ಸ್ಮರಿಸಿದ ಸಿಎಂ ಯೋಗಿ, ರಾಷ್ಟ್ರಪಿತನ ನಾಯಕತ್ವದಲ್ಲಿ ಅಹಿಂಸೆಯ ಶಕ್ತಿಗೆ ಜಗತ್ತು ಸಾಕ್ಷಿಯಾಗಿದೆ. ಇದು ಪ್ರಜಾಪ್ರಭುತ್ವದ ಬಹುದೊಡ್ಡ ಶಕ್ತಿ. ಮಹಾನ್ ನಾಯಕ ಮಹಾತ್ಮ ಗಾಂಧಿ ಅವರ 154 ನೇ ಜನ್ಮದಿನದಂದು ಇಡೀ ದೇಶವು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು.
ಬಾಪು ಜಗತ್ತಿಗೆ ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದರು, ಪ್ರಜಾಪ್ರಭುತ್ವದ ತತ್ವಗಳನ್ನು ಅನುಸರಿಸುವ ಮೂಲಕ ನಾವು ವಿಶ್ವದ ದೊಡ್ಡ ಶಕ್ತಿಗಳನ್ನು ಗೆಲ್ಲಬಹುದು. ಸ್ವದೇಶಿ, ಸತ್ಯ ಮತ್ತು ಅಹಿಂಸೆಯನ್ನು ಅನುಸರಿಸಿ, ಮಹಾತ್ಮ ಗಾಂಧಿಯವರು ವಾಸಹತುಶಾಹಿ ಬ್ರಿಟೀಷ್ ಆಡಳಿತವನ್ನು ದೇಶದಿಂದ ಹೊರಹಾಕುವಂತೆ ಮಾಡಿದರು ಎಂದು ಸಿಎಂ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುತ್ತಿರುವ ಸ್ವಚ್ಛಜಲಿ ಕಾರ್ಯಕ್ರಮವು ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಅಭಿಯಾನದಿಂದ ಸ್ಫೂರ್ತಿ ಪಡೆದಿದೆ. ಸ್ವಾವಲಂಬನೆ, ಸ್ವದೇಶಿ, ಸತ್ಯ ಮತ್ತು ಅಹಿಂಸೆಯ ಹೊರತಾಗಿ, ಶುಚಿತ್ವವು ಮಹಾತ್ಮ ಗಾಂಧೀಜಿಗೆ ಬಹಳ ಮಹತ್ವದ್ದಾಗಿದೆ. ಹೀಗಾಗಿ ಅವರು ಈ ಮೌಲ್ಯಗಳನ್ನು ಸಮಾಜಕ್ಕೆ ಪ್ರತಿಪಾದಿಸಿದರು ಎಂದು ಅವರು ಹೇಳಿದರು.
ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೂ ನಮನ ಸಲ್ಲಿಸಿದ ಸಿಎಂ ಯೋಗಿ, ಜೈ ಜವಾನ್-ಜೈ ಕಿಸಾನ್ ಎಂಬ ಘೋಷಣೆಯನ್ನು ನೀಡಿ ಭದ್ರತೆಯ ಜೊತೆಗೆ ಸ್ವಾವಲಂಬನೆಗೆ ಕರೆ ನೀಡಿದ ಶಾಸ್ತ್ರಿ ಕೂಡ ಬಾಪು ಅವರ ಮಹಾನ್ ಅನುಯಾಯಿಯಾಗಿದ್ದರು. ದೇಶ ಮತ್ತು ಸಮಾಜಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ ಇಬ್ಬರೂ ನಾಯಕರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕೆಂದು ಅವರು ಜನರಿಗೆ ಕರೆ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications