ಭಾರತದ ಪ್ರಗತಿಗೆ ಈಶಾನ್ಯ ರಾಜ್ಯ ಕೊಡುಗೆ ನೀಡಲಿವೆ: ಜೋಶಿ
ನವದೆಹಲಿ, ಅಕ್ಟೋಬರ್ 31: ಭಾರತ ರಾಷ್ಟ್ರದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು ತಮ್ಮ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾಗಲ್ಯಾಂಡ್ ನ ದಿಮಾಪುರ್ನಲ್ಲಿ ಸೋಮವಾರ ಜರುಗಿದ 'ಈಶಾನ್ಯ ಗಣಿಗಾರಿಕೆ ಸಮಾವೇಶ'ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳಲ್ಲಿ ಗಣಿಗಾರಿಕೆಯ ಹೊಸ ಸಾಧ್ಯತೆಗಳು ಕಂಡು ಬಂದಿದ್ದು, ಇಲ್ಲಿನ ಗಣಿಗಾರಿಕೆಯಿಂದ ದೇಶಕ್ಕೆ ಈ ರಾಜ್ಯಗಳು ತಮ್ಮದೇ ಆದ ಕೊಡುಗೆ ನೀಡಲಿವೆ ಎಂದು ಅವರು ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಈಶಾನ್ಯ ನೀತಿಯ (Act East) ಅಡಿಯಲ್ಲಿ ಈಶಾನ್ಯ ರಾಜ್ಯಗಳು ಗಮನಾರ್ಹ ಕ್ರಮಗಳನ್ನು ತೆಗೆದುಕೊಂಡಿವೆ. ಎನ್ಇಆರ್ನಲ್ಲಿ ಖನಿಜ ಪರಿಶೋಧನೆಗೆ ಆದ್ಯತೆ ನೀಡಲಾಗಿದೆ. ಇದು ಆಯಾ ರಾಜ್ಯಗಳಲ್ಲಿನ ಗಣಿಗಾರಿಕೆ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.

ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶಕ್ಕೆ ಪ್ರಹ್ಲಾದ್ ಜೋಶಿ ಅವರನ್ನ ನಾಗಾಲ್ಯಾಂಡ್ ಮತ್ತು ಅಸ್ಸಾಂ ಮುಖ್ಯಮಂತ್ರಿಗಳು, ಅಧಿಕಾರಿಗಳು ಹೂಗುಚ್ಚ ನೀಡಿ ಬರಮಾಡಿಕೊಂಡರು. ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ನಾಗಾಲ್ಯಾಂಡ್ನ ದಿಮಾಪುರ್ನಲ್ಲಿ ಜಿಎಸ್ಐ ಅಧಿಕಾರಿಗಳಿಗೆ ಪ್ರತಿಜ್ಞೆ ಬೋಧಿಸಲಾಯಿತು. ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು 'ಒಂದೇ ಭಾರತ ಶ್ರೇಷ್ಠ ಭಾರತ'ದ ನಿರ್ಮಾಣಕ್ಕೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ದಾರ್ಶನಿಕರು ಎಂದು ಮಹನಿಯರು ಹಾಗೂ ಭಾರತದ ಅಭಿವೃದ್ಧಿ ಕುರಿತು ಕೇಂದ್ರ ಸಚಿವರು ವಿವರಿಸಿದರು.
ಗಣಿಗಾರಿಕೆಯಿಂದ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ; ಇದೇ ವೇಳೆ ದಿಮಾಪುರ್ನಲ್ಲಿರುವ ಜಿಎಸ್ಐ ಕಚೇರಿಗೆ ಭೇಟಿ ನೀಡಿದ ಪ್ರಹ್ಲಾದ್ ಜೋಶಿ, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆಗೆ ಸುಧೀರ್ಘ ಚರ್ಚೆ ನಡೆಸಿದರು. ಅಧಿಕಾರಿಗಳು ತೆಗೆದುಕೊಳ್ಳುತ್ತಿರುವ ಉಪಕ್ರಮಗಳನ್ನು ಖುದ್ದಾಗಿ ಕೇಂದ್ರ ಸಚಿವರೇ ಪರಿಶೀಲಿಸಿದ್ದು ವಿಶೇಷವಾಗಿತ್ತು.

ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಸಚಿವರು ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಒಟ್ಟಾರೆ ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶದ ಮೂಲಕ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ ದೃಷ್ಟಿಯಿಂದ ಮಹತ್ತರ ಹೆಜ್ಜೆಗೆ ಪ್ರಹ್ಲಾದ್ ಜೋಶಿ ಅವರು ಒತ್ತು ನೀಡಿದ್ದು ಕಂಡು ಬಂತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications