ಈಶಾನ್ಯ ರಾಜ್ಯಗಳಲ್ಲಿ ಕೇಸರಿ ರಂಗು ಚೆಲ್ಲಿದ 'ನಿಪುಣ' ಹಿಮಂತ
ಬೆಂಗಳೂರು, ಮಾರ್ಚ್ 03: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಕನಸು ಕಂಡಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ 'ರಾಜಕೀಯ ನಿಪುಣ' ಹಿಮಂತ ಬಿಸ್ವಾ ಶರ್ಮ ಭರ್ಜರಿ ಉಡುಗೊರೆ ನೀಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಎಲ್ಲರ ಕಣ್ಣು ಹಿಮಂತ ಅವರ ಮೇಲೆ ನೆಟ್ಟಿದೆ.
ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಸಿಕ್ಕಿಂ ನಂತರ ಮೇಘಾಲಯ, ನಾಗಾಲ್ಯಾಂಡ್, ತ್ರಿಪುರಾದಲ್ಲಿ ಕೇಸರಿ ರಂಗು ಚೆಲ್ಲುವ ಹೊಣೆ ಹೊತ್ತ ಹಿಮಂತ ಬಿಸ್ವಾ ಶರ್ಮ ಭರ್ಜರಿ ಫಲಿತಾಂಶ ತಂದು ಕೊಟ್ಟಿದ್ದಾರೆ.
ತ್ರಿಪುರಾ ಹಾಗೂ ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದರೆ, ಮೇಘಾಲಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮತ್ತೊಮ್ಮೆ ಬರದಂತೆ ತಡೆಯುವ ಎಲ್ಲಾ ಪ್ರಯತ್ನ ನಡೆದಿದೆ.
ಬಿಜೆಪಿ 60 ಸ್ಥಾನಗಳ ಪೈಕಿ 47 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಕೇಂದ್ರದಲ್ಲಿ ಬಿಜೆಪಿ ಜತೆ ಮೈತ್ರಿ ಹೊಂದಿರುವ ಪಿ.ಎ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ 52 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದಿತ್ತು.
ಪ್ರತ್ಯೇಕತಾವಾದಿಗಳ ಜತೆ ಕೈ ಜೋಡಿಸಿ ತ್ರಿಪುರಾದಲ್ಲಿ ಗೆದ್ದ ಬಿಜೆಪಿ
ಈಗ ಕಾಂಗ್ರೆಸ್ ವಿರುದ್ಧವಾಗಿ ಎನ್ ಪಿಪಿ, ಯುಡಿಪಿ, ಬಿಜೆಪಿ ಮೈತ್ರಿ ಸಾಧಿಸಿ ಸರ್ಕಾರ ರಚಿಸಲು ಮುಂದಾಗಿವೆ. ಆದರೆ, 60 ಸ್ಥಾನಗಳ ಪೈಕಿ ಸರ್ಕಾರ ರಚನೆಗೆ ಬೇಕಾದ 31 ಮ್ಯಾಜಿಕ್ ನಂಬರ್ ದಾಟಲು ಸಾಧ್ಯವಾಗುತ್ತಿಲ್ಲ.

ತ್ರಿಪುರಾದಲ್ಲಿ ಕೇಸರಿ ರಂಗು
ತ್ರಿಪುರಾದಲ್ಲಿ ಅಂತಿಮ ಫಲಿತಾಂಶ 60 : ಬಿಜೆಪಿ ಮೈತ್ರಿಕೂಟ 43, ಸಿಪಿಐ(ಎಂ) 16. ಈ ಮೂಲಕ 25ವರ್ಷಗಳ ನಂತರ ಕಮ್ಯೂನಿಸ್ಟ್ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಬಂದಿದೆ.
ಮತ ಸೆಳೆಯಲು ಕಾರಣವಾಗಿದ್ದು, ಆಸ್ಸಾಂ ಮಾದರಿಯಲ್ಲಿ (Indigenous Peoples Front of Tripura) ಐಪಿಎಫ್ ಟಿ ಪಕ್ಷದ ಜತೆ ಬಿಜೆಪಿ ಮೈತ್ರಿ ಸಾಧಿಸಿ ಸಿಪಿಐಎಂಗೆ ಹೊಡೆತ ನೀಡಿದರು. ಟಿಎಂಸಿ ಜತೆಗೂ ಬಿಜೆಪಿ ಕೈಜೋಡಿಸಿ ಕಾರ್ಯನಿರ್ವಹಿಸಲು ಅಮಿತ್ ಶಾ ಅವರ ನಿರ್ದೇಶನ ಕಾರಣವಾಯಿತು ಎಂದು ಹಿಮಂತ ಹೇಳಿದ್ದಾರೆ.

ಅಸ್ಸಾಂನ ಸಚಿವ ಹಿಮಂತ
2015ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ಹಿಮಂತ ಅವರಿಗೆ ಕಾಂಗ್ರೆಸ್ಸಿನ ಹಳೆ ತಂತ್ರಗಾರಿಕೆಯ ಸಂಪೂರ್ಣ ಪರಿಚಯವಿದ್ದು, ಇದರ ಲಾಭವನ್ನು ಅಮಿತ್ ಶಾ ಪಡೆದುಕೊಂಡಿದ್ದಾರೆ.
49ವರ್ಷ ವಯಸ್ಸಿನ ಹಿಮಂತ ಅವರು ಅಸ್ಸಾಂನಲ್ಲಿ ಆರೋಗ್ಯ, ಶಿಕ್ಷಣ ಹಾಗೂ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಾರಿ ಈಶಾನ್ಯ ರಾಜ್ಯಗಳಲ್ಲಿ ಸಂಘಟನೆಯ ಉಸ್ತುವಾರಿಯನ್ನು ವಹಿಸಿಕೊಂಡು ಯಶ ಸಾಧಿಸಿದ್ದಾರೆ.

ಕಾಂಗ್ರೆಸ್ ಮುಕ್ತ ಈಶಾನ್ಯ ರಾಜ್ಯ
ಕಾಂಗ್ರೆಸ್ ಮುಕ್ತ ಈಶಾನ್ಯ ರಾಜ್ಯ ಎಂಬ ಶಪಥ ಕೈಗೊಂಡ ಬಳಿಕ ಸುಮಾರು 250ಕ್ಕೂ ಅಧಿಕ ಪ್ರಚಾರ ಸಮಾವೇಶಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆಸ್ಸಾಂ ಮೂರು ಕಣಿವೆ, ಮೇಘಾಲಯದ ಮೂರು ಬೆಟ್ಟಗಳಲ್ಲಿನ ಮತದಾರರ ನಾಡಿ ಮಿಡಿತವನ್ನು ಸರಿಯಾಗಿ ಹಿಡಿದ ಹಿಮಂತ ಅವರಿಗೆ ಹೊಸದಾಗಿ ರಚನೆಯಾದ ಈಶಾನ್ಯ ರಾಜ್ಯಗಳ ಡೆಮಾಕ್ರಾಟಿಕ್ ಮೈತ್ರಿಕೂಟ( ಎನ್ ಇಡಿಎ) ಸಂಚಾಲಕರಾಗುವ ಹೊಣೆ ಸಿಕ್ಕಿತ್ತು.

ಕ್ರೀಡೆಗೆ ಮಹತ್ವ ನೀಡಿದ ಹಿಮಂತ
ಈಶಾನ್ಯ ರಾಜ್ಯಗಳ ಕ್ರೀಡಾಪಟುಗಳಿಗೆ ಮಹತ್ವ ನೀಡುವ ಯೋಜನೆ ಹಾಕಿಕೊಂಡ ಹಿಮಂತ ಅವರಿಗೆ ಅಧಿಕಾರವೂ ಸಿಕ್ಕಿತು. ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್, ಬಾಡ್ಮಿಂಟನ್ ಅಸೋಸಿಯೇಷನ್ ಗಳ ಅಧ್ಯಕ್ಷರಾಗಿರುವ ಹಿಮಂತ ಅವರು ತ್ರಿಪುರಾದಲ್ಲಿ ಯುವ ಜನಾಂಗವನ್ನು ಟಾರ್ಗೆಟ್ ಮಾಡಿ, ಮೋದಿ ಅಲೆಯಲ್ಲಿ ತೇಲುವಂತೆ ಮಾಡಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications