ಮಿಷನ್ ತೆಲಂಗಾಣ ಅಲ್ಲ, ರಾಜ್ಯಕ್ಕೆ ಬೇಕಿರುವುದು ಬಿಜೆಪಿ ಸುನಾಮಿ: ಅಮಿತ್ ಶಾ
ಮಿಷನ್ ತೆಲಂಗಾಣ ಅಷ್ಟೇ ಅಲ್ಲ, ತೆಲಂಗಾಣದಲ್ಲಿ ಬಿಜೆಪಿ ಸುನಾಮಿಯನ್ನು ಎಬ್ಬಿಸಿ ಮತದಾರರನ್ನು ತಲುಪುವಂತೆ ಮಾಡಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ತೆಲಂಗಾಣ, ಮೇ 23: ಮಿಷನ್ ತೆಲಂಗಾಣ ಅಷ್ಟೇ ಅಲ್ಲ, ತೆಲಂಗಾಣದಲ್ಲಿ ಬಿಜೆಪಿ ಸುನಾಮಿಯನ್ನು ಎಬ್ಬಿಸಿ ಮತದಾರರನ್ನು ತಲುಪುವಂತೆ ಮಾಡಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಮೂರು ವರ್ಷದ ಹಿಂದಷ್ಟೇ ಸ್ಥಾಪನೆಯಾದ ತೆಲಂಗಾಣದಲ್ಲಿ ಈಗಾಗಲೇ ಸರ್ಕಾರ ನಡೆಸುತ್ತಿರುವ ಕೆ. ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿಯನ್ನು ಹಿಂದಿಕ್ಕಿ, ಬಿಜೆಪಿ ಸ್ವಂತ ಬಲದ ಮೇಲೆ ಇಲ್ಲಿ ಅಧಿಕಾರ ಸ್ಥಾಪಿಸುವ ಇಂಗಿತ ಹೊಂದಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಇಲ್ಲಿನ ನಾಲ್ಗೊಂಡ ಜಿಲ್ಲೆಯಲ್ಲಿ, ನಿನ್ನೆ (ಮೇ 22) ಬೂತ್ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ, ನಕ್ಸಲರಿಂದ ಹತರಾದ ಬಿಜೆಪಿ ರಾಜ್ಯ ಕಾರ್ಯದರ್ಶಿ ಗುಂಡಗೋಣಿ ಮೈಸಯ್ಯ ಗೌಡ್ ಪ್ರತಿಮೆಯೆದುರು ಬಿಜೆಪಿ ಧ್ವಜ ಹಾರಿಸಿ ಮಾತನಾಡಿದರು.

ಹನ್ನೊಂದು ಕೋಟಿಗೂ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬಿಜೆಪಿ ದಾಖಲೆ ಬರೆದಿದೆ. ಈಗಾಗಲೇ ಹನ್ನೊಂದು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಜನಪ್ರಿಯತೆಯನ್ನು ಉಪಯೋಗಿಸಿಕೊಂಡು ತೆಲಂಗಾಣದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವಂತೆ ಕಾರ್ಯಕರ್ತರು ಸುನಾಮಿಯೋಪಾದಿಯಲ್ಲಿ ಶ್ರಮಿಸಬೇಕಿದೆ ಎಂದು ಅಮಿತ್ ಶಾ ಕಾರ್ಯಕರ್ತರಲ್ಲಿ ಸ್ಫೂರ್ತಿ ತುಂಬಿದರು.
2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಲಿದೆ ಎಂದು ತೆಲಂಗಾಣ ಬಿಜೆಪಿಯ ರಾಜ್ಯಾಧ್ಯಕ್ಷ ಡಾ. ಕೆ.ಲಕ್ಷ್ಮಣ್ ಪುನರುಚ್ಚರಿಸಿದ್ದಾರೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಬಳಸಿಕೊಂಡ ಸೂತ್ರಗಳನ್ನೇ ತೆಲಂಗಾಣದಲ್ಲೂ ಬಳಸಿಕೊಳ್ಳಲಾಗುವುದು, ಉತ್ತರ ಪ್ರದೇಶ ಚುನಾವಣಾ ಫಲಿತಾಂಶವೇ ತೆಲಂಗಾಣದಲ್ಲೂ ಮರುಕಳಿಸುವಂತೆ ಮಾಡುವುದು ನಮ್ಮ ಆದ್ಯ ಉದ್ದೇಶ ಎಂದು ಅವರು ತಿಳಿಸಿದ್ದಾರೆ.
ಇದಕ್ಕಾಗಿ ಬಿಜೆಪಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಸಹಕಾರವನ್ನೂ ಕೋರಿದೆ ಎನ್ನಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications