One Nation, One Election: ರಾಜ್ಯಗಳಿಗೆ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಕೊಟ್ಟ ಭರವಸೆ ಏನು?
'ಒಂದು ದೇಶ ಒಂದು ಚುನಾವಣೆ' ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ವಿಪಕ್ಷಗಳ ವಿರೋಧದ ನಡುವೆಯೂ ಮಸೂದೆಯನ್ನು ಮಂಡಿಸಲಾಗಿದೆ. ಮಸೂದೆ ಬಗ್ಗೆ ಲೋಕಸಭೆಗೆ ಮಾಹಿತಿ ನೀಡಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಚುನಾವಣೆಯ ಸಮಯ ಉಳಿಸಲು 'ಒಂದು ದೇಶ ಒಂದು ಚುನಾವಣೆ' ಜಾರಿಗೆ ತರಲಾಗುತ್ತಿದೆ, ಇದರಿಂದ ಸಂವಿಧಾನಕ್ಕಾಗಲಿ, ರಾಜ್ಯಗಳ ಅಧಿಕಾರಕ್ಕಾಗಲಿ ಯಾವುದೇ ಹಾನಿಯಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಸೂದೆ ಮೇಲಿನ ಭಾಷಣದ ವೇಳೆ ಮಾತನಾಡಿದ ಅವರು "ಚುನಾವಣೆ ವ್ಯವಸ್ಥೆಯನ್ನು ಸುಧಾರಿಸಲು ಕಾನೂನುಗಳನ್ನು ತರಬಹುದು. ಈ ಮಸೂದೆ ಚುನಾವಣಾ ಪ್ರಕ್ರಿಯೆಯನ್ನು ಸುಲಭವಾಗಿಸುತ್ತದೆ. ಮಸೂದೆಯಿಂದ ಸಂವಿಧಾನಕ್ಕಾಗಲಿ, ಸಂವಿಧಾನ ರಚನೆಗಾಗಲಿ ಯಾವುದೇ ಹಾನಿಯಾಗುವುದಿಲ್ಲ" ಎಂದು ಹೇಳಿದರು.

ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ನೇತೃತ್ವದ ಸಮಿತಿ ' ಒಂದು ದೇಶ, ಒಂದು ಚುನಾವಣೆ' ಜಾರಿ ಮಾಡುವ ಮಾರ್ಗಗಳನ್ನು ಶಿಫಾರಸ್ಸು ಮಾಡಲು ಕೆಲಸ ವಹಿಸಿಕೊಂಡಿತ್ತು, ಸಮಿತಿಯು ವಿವಿಧ ವಿರೋಧ ಪಕ್ಷಗಳು ಸೇರಿದಂತೆ ಅನೇಕ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿಯೇ ಹಲವು ಶಿಫಾರಸ್ಸುಗಳನ್ನು ಮಾಡಿದೆ, ಮಸೂದೆಯಿಂದ ರಾಜ್ಯಗಳಿಗೆ ಸಿಗುವ ಅಧಿಕಾರ ಹಾಳಾಗುವುದಿಲ್ಲ ಎಂದು ಮೇಘವಾಲ್ ತಿಳಿಸಿದ್ದಾರೆ.
ಪರ ವಿರೋಧ ಮತ ಚಲಾವಣೆ
ಮೇಘವಾಲ್ ಮಸೂದೆಯನ್ನು ಮಂಡಿಸಲು ಮತದಾನದ ಮೂಲಕ ಒಪ್ಪಿಗೆ ಪಡೆಯಲು ಕೇಳಲಾಯಿತು ಇದಕ್ಕೆ ಸ್ಪೀಕರ್ ಕೂಡ ಒಪ್ಪಿಕೊಂಡರು. ಸಾಂವಿಧಾನಿಕ ತಿದ್ದುಪಡಿ ಮಸೂದಿ ಮಂಡಿಸಲು ಲೋಕಸಭೆಯಲ್ಲಿ ಮತದಾನ ನಡೆಯಿತು. 269 ಸಂಸದರು ಪರವಾಗಿ ಮತ್ತು 198 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದ ಬಳಿಕ ಮಸೂದೆಯನ್ನು ಮಂಡಿಸಲಾಯಿತು.
ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸಲು ಅನುಮತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರಲು ಮಸೂದೆಯನ್ನು ಮಂಡಿಸಲಾಗಿದ್ದು, ವಿಪಕ್ಷಗಳು ಕೋಲಾಹಲ ಸೃಷ್ಟಿಸಿದವು. ಇದು ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆ ಎಂದು ವಿರೋಧ ಪಕ್ಷಗಳು ಕಿಡಿ ಕಾರಿವೆ.
ಪರ ವಿರೋಧ ಚರ್ಚೆ
ಕಾಂಗ್ರೆಸ್ನ ಚಂಡೀಗಢ ಸಂಸದ ಮನೀಶ್ ತಿವಾರಿ ಮಾತನಾಡಿ, ಒಂದು ರಾಷ್ಟ್ರ ಒಂದು ಚುನಾವಣೆ ಸಂವಿಧಾನ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಖಂಡಿಸಿದರು. ಅವರ ಹೇಳಿಕೆಯು ಲೋಕಸಭೆಯಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಭಾರತ ರಾಜ್ಯಗಳ ಒಕ್ಕೂಟವಾಗಿದ್ದು, ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವ ಮೂಲಕ ಫೆಡರಲ್ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಹೇಳಿದರು.
ಒಂದೇ ಬಾರಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದರೆ, ರಾಜ್ಯ ಸರ್ಕಾರಗಳ ಮೇಲೆ ಪರಿಣಾಮ ಬೀರುತ್ತದೆ. ತಳಮಟ್ಟದ ಪ್ರಜಾಪ್ರಭುತ್ವ ಕೂಡ ದುರ್ಬಲವಾಗುತ್ತದೆ ಎಂದು ವಾದಿಸಿದರು. ಇದು ಸರ್ವಾಧಿಕಾರಿ ಧೋರಣೆಯಾಗಿದ್ದು, ಸಂವಿಧಾನದ ಮೂಲ ಆಶಯವನ್ನೇ ಬುಡಮೇಲು ಮಾಡುತ್ತದೆ ಎಂದು ವಿಪಕ್ಷ ನಾಯಕಾರಾದ ಟಿಆರ್ ಬಾಲು, ಕಲ್ಯಾಣ್ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications