ಮಧ್ಯಪ್ರದೇಶದಲ್ಲಿ ರೋಗಿಗಳಿಗೆ ಜ್ಯೋತಿಷಿಗಳಿಂದ ಚಿಕಿತ್ಸೆ!
ಭೋಪಾಲ್, ಜುಲೈ 16 : ರೋಗಿಗಳಿಗೆ ಜ್ಯೋತಿಷಿಗಳಿಂದ ಚಿಕಿತ್ಸೆ! ಹೌದು.. ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ ಮುಂಬರುವ ಸೆಪ್ಟೆಂಬರ್ ತಿಂಗಳಿನಿಂದ ಮಧ್ಯಪ್ರದೇಶದಲ್ಲಿ ಜ್ಯೋತಿಷ್ಯ-ಹೊರರೋಗಿ ವಿಭಾಗ (Astrology OPD)ಗಳನ್ನು ಆರಂಭಿಸಲು ನಿರ್ಧರಿಸಿದೆ.
ಸರ್ಕಾರಿ ಸಂಸ್ಥೆಯಾಗಿರುವ ಮಹರ್ಷಿ ಪತಂಜಲಿ ಸಂಸ್ಕೃತ ಸಂಸ್ಥಾನ (MPPS)ದಿಂದ ಮಾನ್ಯತೆ ಪಡೆದಿರುವ ಜ್ಯೋತಿಷಿಗಳು ರೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡುವರು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಜ್ಯೋತಿಷಿಗಳು, ವಾಸ್ತು ತಜ್ಞರು, ಹಸ್ತಮುದ್ರಿಕೆ ನೋಡಿ ಭವಿಷ್ಯ ಹೇಳುವವರು, ಹಾಗೂ ವೇದ ಕರ್ಮಕಾಂಡ ವಿದ್ವಾಂಸರು ವಾರದಲ್ಲೆರಡು ದಿನ 3-4 ಗಂಟೆಗಳ ಕಾಲ ರೋಗಿಗಳ ಜಾತಕ ಹಾಗೂ ಗ್ರಹಗತಿಗಳನ್ನು ನೋಡಿ ಚಿಕಿತ್ಸೆ ನೀಡಲಿದ್ದಾರೆ.
ಕಿರಿಯ ವೈದ್ಯರು ತಜ್ಞರ ಮೇಲುಸ್ತುವಾರಿಯಲ್ಲಿ ಯಾವ ರೀತಿ ಕಾರ್ಯಾಚರಿಸುತ್ತಾರೋ, ಅದೇ ರೀತಿ ಜ್ಯೋತಿಷಿಗಳು ಕೂಡಾ ಜ್ಯೋತಿಷ್ಯ-ಒಪಿಡಿಯಲ್ಲಿ ರೋಗಿಗಳಿಗೆ ಸೇವೆ ಸಲ್ಲಿಸಲಿದ್ದಾರೆ ಎಂದು ಮಹರ್ಷಿ ಪತಂಜಲಿ ಸಂಸ್ಕೃತ ಸಂಸ್ಥಾನದ ನಿರ್ದೇಶಕ ಪಿ.ಆರ್. ತಿವಾರಿ ತಿಳಿಸಿದ್ದಾರೆ.
ರೋಗಿಗಳ ಗ್ರಹಗತಿಗಳ ಆಧಾರವಾಗಿಟ್ಟು ಸರಿಯಾದ ಸಮಯದಲ್ಲಿ ಪ್ರಶ್ನೆಗಳನ್ನು ಕೆಳುವ ಮೂಲಕ ಸಮರ್ಪಕವಾದ ಜ್ಯೋತಿಷ-ವೈದ್ಯಕೀಯ ಚಿಕಿತ್ಸೆ ನೀಡಲಾಗುವುದೆಂದು ತಿವಾರಿ ಹೇಳಿದ್ದಾರೆ.
ಜ್ಯೋತಿಷಿಗಳ ಸೇವೆ ಪಡೆಯಲು ರೋಗಿಗಳು ಕೇವಲ 5 ರು. ಪಾವತಿಸಬೇಕಾಗುತ್ತದೆ. ಜಾತಕದ ಜತೆಗೆ ರೊಗಿಗಳ ಕಾಯಿಲೆಗಳನ್ನು ಪ್ರಶ್ನಾ ಕುಂಡಲಿ ವಿಧಾನದ ಮೂಲಕ ವಿಶ್ಲೇಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಈ ಸೇವೆಯನ್ನು ಸಂಸ್ಥಾನ ನಡೆಸುತ್ತಿರುವ 138 ಶಾಲೆಗಳಿಗೂ ವಿಸ್ತರಿಸಲಾಗುವುದೆಂದು ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications