ಜ್ಯೋತಿಷಿಗಳು ರೋಗ ಪತ್ತೆ ಹಚ್ಚುವ ವ್ಯವಸ್ಥೆ ಜಾರಿಯಿಲ್ಲǃ
ಭೋಪಾಲ್, ಜುಲೈ 18: ರಾಶಿ, ಕುಂಡಲಿ, ಗ್ರಹಗತಿ ಭವಿಷ್ಯ ಲೋಕದಲ್ಲಿ ಸದಾ ಮುಳುಗಿರುವ ಜ್ಯೋತಿಷಿಗಳು ಈ ಆಸ್ಪತ್ರೆಯಲ್ಲಿ ರೋಗಿಗಳ ಪತ್ತೆ ಹಚ್ಚಲಿದ್ದಾರೆ. ಮಧ್ಯ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಜ್ಯೋತಿಷಿಗಳು ರೋಗಿಯ ಗ್ರಹಗತಿ ನೋಡಿ ಆರೋಗ್ಯ ಸುಧಾರಣೆ ಸಲಹೆ ನೀಡಲಿದ್ದಾರೆ ಎಂಬ ಸುದ್ದಿಯನ್ನು ಅಲ್ಲಿನ ಸರ್ಕಾರ ಅಲ್ಲಗೆಳೆದಿದ್ದು, ಈ ರೀತಿ ಯಾವುದೇ ವ್ಯವಸ್ಥೆ ಜಾರಿಗೊಳಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಸರ್ಕಾರಿ ಸ್ವಾಮ್ಯದ ಮಹರ್ಷಿ ಪತಂಜಲಿ ಸಂಸ್ಕೃತ ಸಂಸ್ಥಾನದ ವತಿಯಿಂದ ಈ ವರ್ಷದ ಸೆಪ್ಟಂಬರ್ ಅಂತ್ಯದ ವೇಳೆಗೆ ಈ ವ್ಯವಸ್ಥೆ ಜಾರಿಗೆ ಬರಲಿದೆ. ವಾರಕ್ಕೆರಡು ಬಾರಿ ಹೊರರೋಗಿ ವಿಭಾಗದಲ್ಲಿ ಜ್ಯೋತಿಷಿಗಳ ಸಲಹೆ-ಸೂಚನೆ ಎಲ್ಲಾ ರೋಗಿಗಳಿಗೆ ಲಭ್ಯವಾಗಲಿದೆ ಎಂಬ ಸುದ್ದಿ ಬಂದಿತ್ತು.

ಜ್ಯೂನಿಯರ್ ಡಾಕ್ಟರ್ ಹಾಗೂ ತಜ್ಞ ವೈದ್ಯರಿದ್ದಂತೆ, ಈ ತಂಡದಲ್ಲಿ ಹಿರಿಯ ಹಾಗೂ ಕಿರಿಯ ಜ್ಯೋತಿಷಿಗಳಿರುತ್ತಾರೆ. ಕೇವಲ 5 ರು ಶುಲ್ಕ ನೀಡಿ ನಿಮ್ಮ ಆರೋಗ್ಯದ ಬಗ್ಗೆ ಭವಿಷ್ಯ ತಿಳಿಯಬಹುದು. ರೋಗಿಯ ಜಾತಕ ನೋಡಿ ರೋಗ ಪತ್ತೆ, ರೋಗಕ್ಕೆ ಚಿಕಿತ್ಸೆ ಬಗ್ಗೆ ಜ್ಯೋತಿಷಿಗಳು ತಿಳಿಸುತ್ತಾರೆ ಎಂದು ಈ ಸಂಸ್ಥಾನದ ನಿರ್ದೇಶಕ ತಿವಾರಿ ಹೇಳಿದ್ದಾರೆ.
ಮಧ್ಯಪ್ರದೇಶ ವೈದ್ಯರ ಸಂಘದ ಡಾ. ಲಲಿತ್ ಶ್ರೀವಾಸ್ತವ್ ಅವರು ಸರ್ಕಾರದ ಈ ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜ್ಯೋತಿಷ್ಯ ಹಾಗೂ ವೈದ್ಯಕೀಯ ವಿಜ್ಞಾನವನ್ನು ಬೆರೆಸಲು ಸಾಧ್ಯವಿಲ್ಲ ಎಂದಿದ್ದಾರೆ. (ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications