ಬಿಎಸ್ಎಫ್ ಆಯ್ತು, ಈಗ ಅರೆಸೇನಾ ಪಡೆಯ ಹುಳುಕು ಜಗಜ್ಜಾಹೀರು
ನವದೆಹಲಿ, ಜನವರಿ 12: ಗಡಿ ಕಾಯುವ ಯೋಧರಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿರುವ ಬಗ್ಗೆ ಎರಡು ದಿನಗಳ ಹಿಂದಷ್ಟೇ ಬಿಎಸ್ಎಫ್ ಯೋಧನೊಬ್ಬ ವೀಡಿಯೊ ಬಿತ್ತರಿಸಿದ್ದರ ಬೆನ್ನಿಗೇ ಸಿಆರ್ ಪಿಎಫ್ ಸೈನಿಕನೊಬ್ಬ ಅರೆಸೇನಾ ಯೋಧರನ್ನು ನಿಕೃಷ್ಟವಾಗಿ ದುಡಿಸಿಕೊಳ್ಳುತ್ತಾ, ತಮ್ಮ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಬಗ್ಗೆ ವೀಡಿಯೊ ಮೂಲಕ ಬಹಿರಂಗಪಡಿಸಿದ್ದಾನೆ.[ಬಿಎಸ್ಎಫ್ ಯೋಧನ ಬೆನ್ನಿಗೆ ನಿಂತ ಕ್ರೀಡಾ ತಾರೆಗಳು]
ಪ್ರಸ್ತುತ ಮೌಂಟ್ ಅಬುವಿನಲ್ಲಿ ನಿಯೋಜಿತವಾಗಿರುವ 26 ವರ್ಷದ ಮಥುರಾ ಮೂಲದ ಜೀತ್ ಸಿಂಗ್ ಎಂಬಾತ ತಾನೇ ಖುದ್ದಾಗಿ ಮಾತನಾಡಿರುವ ವೀಡಿಯೊದಲ್ಲಿ ಮಿಲಿಟರಿ ಯೋಧರಿಗೆ ಹೋಲಿಸಿದರೆ ಸಿಆರ್ ಪಿಎಫ್ ಯೋಧರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ಕಳಪೆಯಾಗಿವೆ ಎಂದಿದ್ದಾನೆ.[ಸುದ್ದಿ ಸ್ಫೋಟ: ದಿನಸಿಯನ್ನು ಕಳ್ಳತನದಿಂದ ಮಾರಿಕೊಳ್ಳುವ ಬಿಎಸ್ಎಫ್]

"ನಾವು ಭೂಕಂಪ, ಪ್ರವಾಹ ಮತ್ತಿತರ ಪ್ರಾಕೃತಿಕ ವಿಕೋಪಗಳ ವೇಳೆ ನೆರವಿಗೆ ಬರುತ್ತೇವೆ. ಅಲ್ಲದೆ, ವಿಐಪಿಗಳ ರಕ್ಷಣೆಗೆ ನಿಲ್ಲುತ್ತೇವೆ. ದೇವಾಲಯ, ಚರ್ಚು, ಮಸೀದಿಗಳಿಗೆ ರಕ್ಷಣೆ ಒದಗಿಸುತ್ತೇವೆ. ಆದರೆ, ಯಾರೂ ನಮ್ಮ ಸೇವೆಗೆ ತಕ್ಕದಾದ ಸೌಲಭ್ಯಗಳನ್ನು ನೀಡುತ್ತಿಲ್ಲ" ಎಂದಿರುವ ಆತ, "ಸರ್ಕಾರಿ ಶಾಲೆಯ ಶಿಕ್ಷಕರು ತಿಂಗಳಿಗೆ, 50ರಿಂದ 60 ಸಾವಿರ ರು.ಗಳಷ್ಟು ಸಂಬಳ ಪಡೆಯುತ್ತಾರೆ. ಅದಲ್ಲದೆ, ಅವರಿಗೆ ಹಬ್ಬಗಳಿಗೆ ರಜೆ ಮತ್ತಿತರ ಸೌಲಭ್ಯಗಳಿರುತ್ತವೆ. ಆದರೆ, ಅರೆಸೇನಾ ಪಡೆಯ ಯೋಧರಿಗೆ ಅಂಥಾ ಯಾವುದೇ ಸೌಲಭ್ಯಗಳಿರುವುದಿಲ್ಲ. 20 ವರ್ಷ ಸೇವೆ ಸಲ್ಲಿಸಿದರೂ ನಮಗೆ ನಿವೃತ್ತಿ ವೇತನವಿಲ್ಲ. ಇನ್ನು, ಸರ್ಕಾರಿ ನೌಕರಿ ಮತ್ತಿತರ ಕಡೆಗಳಲ್ಲೂ ನಮಗೆ ಕೋಟಾ ಇರುವುದಿಲ್ಲ. ಆದರೆ, ಭಾರತೀಯ ಸೇನೆಯ ಯೋಧರಿಗೆ ಈ ಎಲ್ಲಾ ಸೌಲಭ್ಯಗಳಿವೆ. ಅರೆಸೇನಾ ಯೋಧರು ಇವುಗಳಿಂದ ವಂಚಿತರಾಗಿದ್ದಾರೆ" ಎಂದು ಅಳಲು ತೋಡಿಕೊಂಡಿದ್ದಾನೆ.[ಸತ್ಯ ಹೇಳಿದ ಸೈನಿಕನ ತೇಜೋವಧೆಗೆ ಸಿದ್ಧವಾದ ಬಿಎಸ್ಎಫ್]
ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗಮನ ಹರಿಸಿ, ಈ ತಾರತಮ್ಯ ನೀಗಬೇಕು ಎಂದು ಆತ ಕೋರಿದ್ದಾನೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications