ಬಿಎಸ್ಎಫ್ ಆಯ್ತು, ಈಗ ಅರೆಸೇನಾ ಪಡೆಯ ಹುಳುಕು ಜಗಜ್ಜಾಹೀರು
ನವದೆಹಲಿ, ಜನವರಿ 12: ಗಡಿ ಕಾಯುವ ಯೋಧರಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿರುವ ಬಗ್ಗೆ ಎರಡು ದಿನಗಳ ಹಿಂದಷ್ಟೇ ಬಿಎಸ್ಎಫ್ ಯೋಧನೊಬ್ಬ ವೀಡಿಯೊ ಬಿತ್ತರಿಸಿದ್ದರ ಬೆನ್ನಿಗೇ ಸಿಆರ್ ಪಿಎಫ್ ಸೈನಿಕನೊಬ್ಬ ಅರೆಸೇನಾ ಯೋಧರನ್ನು ನಿಕೃಷ್ಟವಾಗಿ ದುಡಿಸಿಕೊಳ್ಳುತ್ತಾ, ತಮ್ಮ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಬಗ್ಗೆ ವೀಡಿಯೊ ಮೂಲಕ ಬಹಿರಂಗಪಡಿಸಿದ್ದಾನೆ.[ಬಿಎಸ್ಎಫ್ ಯೋಧನ ಬೆನ್ನಿಗೆ ನಿಂತ ಕ್ರೀಡಾ ತಾರೆಗಳು]
ಪ್ರಸ್ತುತ ಮೌಂಟ್ ಅಬುವಿನಲ್ಲಿ ನಿಯೋಜಿತವಾಗಿರುವ 26 ವರ್ಷದ ಮಥುರಾ ಮೂಲದ ಜೀತ್ ಸಿಂಗ್ ಎಂಬಾತ ತಾನೇ ಖುದ್ದಾಗಿ ಮಾತನಾಡಿರುವ ವೀಡಿಯೊದಲ್ಲಿ ಮಿಲಿಟರಿ ಯೋಧರಿಗೆ ಹೋಲಿಸಿದರೆ ಸಿಆರ್ ಪಿಎಫ್ ಯೋಧರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ಕಳಪೆಯಾಗಿವೆ ಎಂದಿದ್ದಾನೆ.[ಸುದ್ದಿ ಸ್ಫೋಟ: ದಿನಸಿಯನ್ನು ಕಳ್ಳತನದಿಂದ ಮಾರಿಕೊಳ್ಳುವ ಬಿಎಸ್ಎಫ್]

"ನಾವು ಭೂಕಂಪ, ಪ್ರವಾಹ ಮತ್ತಿತರ ಪ್ರಾಕೃತಿಕ ವಿಕೋಪಗಳ ವೇಳೆ ನೆರವಿಗೆ ಬರುತ್ತೇವೆ. ಅಲ್ಲದೆ, ವಿಐಪಿಗಳ ರಕ್ಷಣೆಗೆ ನಿಲ್ಲುತ್ತೇವೆ. ದೇವಾಲಯ, ಚರ್ಚು, ಮಸೀದಿಗಳಿಗೆ ರಕ್ಷಣೆ ಒದಗಿಸುತ್ತೇವೆ. ಆದರೆ, ಯಾರೂ ನಮ್ಮ ಸೇವೆಗೆ ತಕ್ಕದಾದ ಸೌಲಭ್ಯಗಳನ್ನು ನೀಡುತ್ತಿಲ್ಲ" ಎಂದಿರುವ ಆತ, "ಸರ್ಕಾರಿ ಶಾಲೆಯ ಶಿಕ್ಷಕರು ತಿಂಗಳಿಗೆ, 50ರಿಂದ 60 ಸಾವಿರ ರು.ಗಳಷ್ಟು ಸಂಬಳ ಪಡೆಯುತ್ತಾರೆ. ಅದಲ್ಲದೆ, ಅವರಿಗೆ ಹಬ್ಬಗಳಿಗೆ ರಜೆ ಮತ್ತಿತರ ಸೌಲಭ್ಯಗಳಿರುತ್ತವೆ. ಆದರೆ, ಅರೆಸೇನಾ ಪಡೆಯ ಯೋಧರಿಗೆ ಅಂಥಾ ಯಾವುದೇ ಸೌಲಭ್ಯಗಳಿರುವುದಿಲ್ಲ. 20 ವರ್ಷ ಸೇವೆ ಸಲ್ಲಿಸಿದರೂ ನಮಗೆ ನಿವೃತ್ತಿ ವೇತನವಿಲ್ಲ. ಇನ್ನು, ಸರ್ಕಾರಿ ನೌಕರಿ ಮತ್ತಿತರ ಕಡೆಗಳಲ್ಲೂ ನಮಗೆ ಕೋಟಾ ಇರುವುದಿಲ್ಲ. ಆದರೆ, ಭಾರತೀಯ ಸೇನೆಯ ಯೋಧರಿಗೆ ಈ ಎಲ್ಲಾ ಸೌಲಭ್ಯಗಳಿವೆ. ಅರೆಸೇನಾ ಯೋಧರು ಇವುಗಳಿಂದ ವಂಚಿತರಾಗಿದ್ದಾರೆ" ಎಂದು ಅಳಲು ತೋಡಿಕೊಂಡಿದ್ದಾನೆ.[ಸತ್ಯ ಹೇಳಿದ ಸೈನಿಕನ ತೇಜೋವಧೆಗೆ ಸಿದ್ಧವಾದ ಬಿಎಸ್ಎಫ್]
ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗಮನ ಹರಿಸಿ, ಈ ತಾರತಮ್ಯ ನೀಗಬೇಕು ಎಂದು ಆತ ಕೋರಿದ್ದಾನೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications