ಹೊಸ ನಿಯಮ, ಮದ್ಯಪಾನ ಮಾಡಿ ಅಪಘಾತವಾದರೆ ವಿಮೆ ಸಿಗಲ್ಲ
ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಇನ್ನು ಮುಂದೆ ಮದ್ಯಪಾನ ಮಾಡಿ ವಾಹನ ಚಲಾಯಿಸುವಾಗ ಅಪಘಾತವಾದರೆ ವಿಮೆ ಅನ್ವಯಿಸುವುದಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಗೆ ಈ ವರದಿ ಓದಿ
ಬೆಂಗಳೂರು, ಏಪ್ರಿಲ್ 8: ಅಪಘಾತ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಮೋಟಾರು ವಾಹನ ಕಾಯ್ದೆಗೆ ಕಠಿಣ ತಿದ್ದುಪಡಿ ತರಲಾಗಿದೆ. ಇನ್ನು ಮುಂದೆ ಮದ್ಯಪಾನ ಮಾಡಿ ವಾಹನ ಓಡಿಸುವವರಿಗೆ ವಿಮಾ ಸೌಲಭ್ಯ ಸಿಗುವುದಿಲ್ಲ. ಮೋಟಾರು ವಾಹನ ಕಾಯ್ದೆಗೆ ಶುಕ್ರವಾರ ಲೋಕಸಭೆಯಲ್ಲಿ ತಿದ್ದುಪಡಿ ತರಲಾಗಿದೆ.
ಇದೀಗ ಆ ನಿಯಮವನ್ನು ಜಾರಿಗೆ ತರುವ ಪ್ರಕ್ರಿಯೆಯಲ್ಲಿ ವಿಮಾ ಕಂಪೆನಿಗಳು ತೊಡಗಿವೆ. ಹೊಸ ನಿಯಮದ ಪ್ರಕಾರ, ಮದ್ಯಪಾನ ಮಾಡಿ ವಾಹನ ಚಲಾಯಿಸುವಾಗ ಅಪಘಾತವಾದರೆ ವಿಮೆ ಅನ್ವಯಿಸುವುದಿಲ್ಲ. ಅಂಥ ಸಂದರ್ಭದಲ್ಲಿ ಕಾರಿನ ಮಾಲೀಕರು ಅಥವಾ ಚಾಲಕರು ಅಪಘಾತಕ್ಕೆ ಹೊಣೆಯಾಗಿ, ಗಾಯ ಅಥವಾ ಸಾವಿಗೆ ಪರಿಹಾರ ಕಟ್ಟಿಕೊಡಬೇಕಾಗುತ್ತದೆ.[ಏಪ್ರಿಲ್ 1 ರಿಂದ ಎಲ್ಲಾ ವಿಮೆ ಕಂತುಗಳು ದುಬಾರಿ]

ಈ ಹಿಂದೆ ಪರಿಹಾರ ಮೊತ್ತವನ್ನು ವಿಮಾ ಕಂಪೆನಿಯೇ ಪಾವತಿಸುತ್ತಿತ್ತು. ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿರುವುದರಿಂದ ಇನ್ನು ಮುಂದೆ ಹಳೆ ನಿಯಮ ಇರುವುದಿಲ್ಲ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮವಾಗಿ ಈ ನಿಯಮ ಪರಿಚಯಿಸಲಾಗಿದೆ.[ಕುಡಿದು ವಾಹನ ಓಡಿಸಿದರೆ ಭಾರೀ ದಂಡ, ಎಚ್ಚರ!]
ರಸ್ತೆ ಅಪಘಾತವನ್ನು ನಿಯಂತ್ರಿಸುವ ಸಲುವಾಗಿಯೇ ಈ ನಿಯಮ ಮಾಡಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸಿದರೆ ಹಾಗೂ ವೇಗವಾದ ಚಾಲನೆಗೆ ಕೂಡ ಹೊಸ ನಿಯಮದಡಿ ಜೈಲು ಶಿಕ್ಷೆ ಹಾಗೂ ಚಾಲನಾ ಪರವಾನಗಿ ರದ್ದು ಮಾಡಲು ಅವಕಾಶ ಕಲ್ಪಿಸಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications